Homeಮುಖಪುಟಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

ಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

- Advertisement -
- Advertisement -

ದೆಹಲಿಯ ಸುಂದರ್ ನಗರದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆಗೆ ಮನೆಗಳನ್ನು ತೆರವು ಮಾಡಲಾಗಿದ್ದು, ಇದರಿಂದ ಸ್ಲಂ ನಿವಾಸಿಗಳು ಅತಂತ್ರರಾಗಿದ್ದಾರೆ. ಪುನರ್ವಸತಿಯನ್ನು ಕಲ್ಪಿಸದೆ ಸ್ಲಂ ನಿವಾಸಿಗಳ ಮನೆಗಳನ್ನು ಏಕಾಏಕಿ ತೆರವು ಮಾಡಿ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರದಲ್ಲಿ ಕೈಗೊಂಡ ಮನೆಗಳ ತೆರವು ಕಾರ್ಯಾಚರಣೆ 200ಕ್ಕೂ ಹೆಚ್ಚು ಕುಟುಂಬಗಳ  ಮೇಲೆ ಪರಿಣಾಮ ಬೀಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆ ಮನೆಗಳನ್ನು ತೆರವು ಮಾಡಲಾಗಿದೆ ಮತ್ತು ದೆಹಲಿ ಹೈಕೋರ್ಟ್ ತೆರವು ಕಾರ್ಯಚರಣೆಗೆ ತಡೆಯಲು ನಿರಾಕರಿಸಿತ್ತು.

ನ.18 ರಂದು ಪೋಸ್ಟರ್‌ಗಳು ಮತ್ತು ನೋಟಿಸ್‌ಗಳನ್ನು ಹಾಕಲಾಯಿತು ಮತ್ತು ಸ್ಲಂಗಳನ್ನು ತಕ್ಷಣವೇ ಖಾಲಿ ಮಾಡುವಂತೆ ಆದೇಶ ನೀಡಲಾಯಿತು. ಇಲ್ಲಿ ವಾಸಿಸುವ ಹೆಚ್ಚಿನವರು ಮಹಿಳೆಯರು ಮತ್ತು ಪುರುಷರು ಚಿಂದಿ ಆಯುವವರು, ರಿಕ್ಷಾ  ಚಾಲಕರು ಮತ್ತು ಮನೆಗೆಲಸ ಮಾಡುವವರು. ಅವರಲ್ಲಿ ಹಲವರು ಬಾಡಿಗೆಗೆ ವಾಸಿಸುತ್ತಿದ್ದಾರೆ. ಕೆಲವರು 40 ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದರು.

ಸುಂದರ್ ನಗರ ಬಸ್ತಿಯಲ್ಲಿರುವ ಮನೆಗಳನ್ನು ಕೆಡವುವಾಗ ಅಧಿಕಾರಿಗಳು 2015ರ ನೀತಿಯಲ್ಲಿ ರೂಪಿಸಲಾದ ದೆಹಲಿ ಸ್ಲಂ ಮತ್ತು ಜೆಜೆ ಪುನರ್ವಸತಿ ಮತ್ತು ಸ್ಥಳಾಂತರ ನೀತಿ ಎಂಬ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಿತ್ತು. ಆದರೆ ಭೂ ಮತ್ತು ಅಭಿವೃದ್ಧಿ ಕಚೇರಿ (L&DO) ಜನರು ವಾಸಿಸುತ್ತಿದ್ದ ಮನೆಗಳನ್ನು ಕೆಡವುವ ಸಮಯದಲ್ಲಿ ಹಲವಾರು ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರ ಬಸ್ತಿಯಲ್ಲಿರುವ ಫಾತಿಮಾ ಎಂಬವರ ಮನೆಯನ್ನು ನ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಡವಲಾಗಿದೆ. ಅವರ ಪತಿ ಟೂರಿಸ್ಟ್ ಟ್ಯಾಕ್ಸಿ ಚಾಲಕರಾಗಿದ್ದು ಆಗ್ರಾಕ್ಕೆ ತೆರಳಿದ್ದರು. ಪ್ರವಾಸಿಗರಿಗೆ ತಾಜ್ ಮಹಲ್ ತೋರಿಸಿ ಮನೆಗೆಂದು ವಾಪಾಸ್ಸು ಬರುವಾಗ ಮನೆಯೇ ನೆಲಸಮಗೊಂಡಿತ್ತು. ಮನೆ ಕಳೆದುಕೊಂಡು ಫಾತಿಮಾ (20) ಬೀದಿಯಲ್ಲಿ ತನ್ನ 4 ತಿಂಗಳ ಮಗಳನ್ನು ತೊಟ್ಟಿಲಲ್ಲಿ ಹಾಕಿಕೊಂಡು ಕುಳಿತಿದ್ದರು. ಪಕ್ಕದ ರಸ್ತೆಯಲ್ಲಿ ಗೃಹೋಪಯೋಗಿ ವಸ್ತುಗಳು ಬಿದ್ದುಕೊಂಡಿದ್ದವು. ಫಾತಿಮಾಳ ಪಕ್ಕದಲ್ಲಿ ಪಾರ್ಶ್ವವಾಯುವಿನಿಂದ ನರಳುತ್ತಿದ್ದ ಅತ್ತಿಗೆ ಕಣ್ಣೀರಿಡುತ್ತಿದ್ದರು.

ಮನೆಗಳನ್ನು ಕೆಡವಲು 15 ದಿನಗಳ ಮೊದಲು ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನಿಯಮವು ಹೇಳುತ್ತದೆ. ಗುಜಿರಿ ಕೆಲಸ ಮಾಡುತ್ತಿದ್ದ ಪ್ಯಾರೆ ಲಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ನ.18 ರಂದು  ಮನೆಗಳನ್ನು ತೆರವುಗೊಳಿಸುವುದಾಗಿ ಪೋಸ್ಟರ್‌ ಹಾಕಿದ್ದಾರೆ. ನೋಟಿಸ್ ನಮ್ಮನ್ನು ಭಯಭೀತರನ್ನಾಗಿ ಮಾಡಿತ್ತು. ತದನಂತರ ಇದ್ದಕ್ಕಿದ್ದಂತೆ ಬುಲ್ಡೋಜರ್‌ಗಳು ಬಂದವು. ನಮ್ಮ ಮನೆಗಳನ್ನು ನೆಲಸಮ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮನೆ ಕಳೆದುಕೊಂಡವರು ಈ 3 ದಿನಗಳ ಅವಧಿಯಲ್ಲಿ ವಸತಿಗಳನ್ನು ಬಾಡಿಗೆಗೆ ಪಡೆಯಲು ಬೇಕಾದಷ್ಟು ಆರ್ಥಿಕ ಸಾಮರ್ಥ್ಯವನ್ನು ಹೊಂದಿರಲಿಲ್ಲ. ಅವರಲ್ಲಿ ಬಹುಪಾಲು ದಿನಗೂಲಿದಾರರು, ಮನೆ ಕೆಲಸಗಾರರು ಮತ್ತು ಗುಜಿರಿ ಸಂಗ್ರಹಿಸುವವರಾಗಿದ್ದರು. ಸ್ಥಳಾಂತರಗೊಂಡ ಒಂದು ಕುಟುಂಬಕ್ಕೂ ಪರ್ಯಾಯ ಪುನರ್ವಸತಿ ಒದಗಿಸಲು DUSIB ವಿಫಲವಾಗಿದೆ. ಮನೆಗಳನ್ನು ಕೆಡವಿದ ಸ್ಥಳದಿಂದ 5 ಕಿಲೋಮೀಟರ್‌ಗಳ ಒಳಗೆ ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನೀತಿಯು ಉಲ್ಲೇಖಿಸುತ್ತದೆ. ಆದರೆ ಜನರಿಗೆ ವಸತಿ ವ್ಯವಸ್ಥೆಯನ್ನು ಮಾಡಿರಲಿಲ್ಲ.

ಸುಂದರ್ ನಗರದ ಸ್ಥಳಾಂತರಗೊಂಡ ಕುಟುಂಬಗಳಿಗೆ ಜೀವನೋಪಾಯದ ಮತ್ತು ಮಕ್ಕಳ ಶಿಕ್ಷಣದ ಬಗೆಗೆ ಸಮಸ್ಯೆ ಎದುರಾಗಿದೆ. ನಾಸಿರಾ ಬೀಬಿ (33) ಸಮೀಪದ ಐಷಾರಾಮಿ ಬಂಗಲೆಯಲ್ಲಿ ಮನೆ ಕೆಲಸಗಾರ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ನಾವು ದೂರ ಹೋದರೆ ಇನ್ನು ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಮಕ್ಕಳು ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಕಲಿಯುತ್ತಿದ್ದರು. ಮನೆಗಳನ್ನು ತೆರವಿನ ಬಳಿಕ ಮಕ್ಕಳ ಭವಿಷ್ಯವು ಅತಂತ್ರವಾಗಿದೆ ಎಂದು ಹೇಳಿದ್ದಾರೆ.

ಶಾಲಾ-ಕಾಲೇಜು ಪರೀಕ್ಷೆಗಳು ನಡೆಯುವಾಗ ಮನೆಗಳನ್ನು ಕೆಡವಬಾರದು ಎಂದು ನಿಯಮವು ಹೇಳುತ್ತದೆ.  ಆದರೆ ಫಲಕ್ ಎಂಬಾಕೆ 12ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆಕೆಯ ಮನೆಯನ್ನು ಕೂಡ ಕೆಡವಲಾಗಿದೆ. ಮುಂದಿನ ತಿಂಗಳು ಅವರ ಪ್ರಿ-ಬೋರ್ಡ್ ಪರೀಕ್ಷೆಗಳು ನಡೆಯಲಿವೆ. ನಾಳೆ ನನಗೆ ವಾರದ ಪರೀಕ್ಷೆ ಇದೆ. ನನಗೆ ಮನಸ್ಸಿಗೆ ಶಾಂತಿ ಇಲ್ಲ ಎಂದು ಫಲಕ್‌ ಅಳಲು ತೋಡಿಕೊಂಡಿದ್ದಾರೆ. ಪ್ರಿಯಾ (38) ಅವರು ಈ ಬಗ್ಗೆ ಮಾತನಾಡಿದ್ದು, ಮಕ್ಕಳ ಮತ್ತು ನಮ್ಮ ಭವಿಷ್ಯಗಳು ಈಗ ಮಂಕಾಗಿವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...