Homeಕರ್ನಾಟಕಜನತೆಯ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ: ಸರ್ಕಾರಗಳಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಜನತೆಯ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ: ಸರ್ಕಾರಗಳಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

- Advertisement -
- Advertisement -

ಅತಿವೃಷ್ಟಿಯಿಂದ ಮನೆ-ತೋಟ-ಗದ್ದೆಯನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹಾವೇರಿ,ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಐವರು ರೈತರ ಕುಟುಂಬಕ್ಕೆ ನನ್ನ ಸಂತಾಪಗಳು. ಇದೇ ರೀತಿ ನೂರಾರು ರೈತರು ಅಸಹಾಯಕರಾಗಿ ಆತ್ಮಹತ್ಯೆಯ ದಾರಿಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದ್ದೂ ಸತ್ತಂತಿವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.

ಅತಿವೃಷ್ಟಿ ಪೀಡಿತ ರೈತರನ್ನು ಬ್ಯಾಂಕುಗಳಲ್ಲಿನ ಸಾಲ ಬಾಕಿಗಾಗಿ ನೋಟೀಸ್ ಜಾರಿ ಮಾಡಿ ಕಿರುಕುಳು ನೀಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಸರ್ಕಾರಕ್ಕೇನಾದರೂ ಒಂದಿಷ್ಟು ಮಾನವೀಯತೆ ಎನ್ನುವುದಾದರೂ ಇದ್ದರೆ ಇಂತಹ ಕ್ರೌರ್ಯವನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯಕ್ಕೆ ಬಂದೆರಗಿದ ಅತಿವೃಷ್ಟಿಯಿಂದ ರೂ.38 ಸಾವಿರ ಕೋಟಿ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ನಯಾಪೈಸೆ ನೆರವು ಬಂದಿಲ್ಲ. ರಾಜ್ಯದ ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ.

2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ ಬಂದು ಸಮೀಕ್ಷೆ ನಡೆಸಿ ತಕ್ಷಣ ರೂ.1500 ಕೋಟಿ ಪರಿಹಾರ ಘೋಷಿಸಿದ್ದರು. ಈಗಿನ ಪ್ರಧಾನಿ ಎಲ್ಲಿದ್ದಾರೆ? ದಿನಕ್ಕೊಂದು ದೇಶ ಸುತ್ತುವ, ಘಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗಳಿಗೆ ಒಂದು ಘಳಿಗೆ ಬಂದು ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ.

ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ, ನರೇಂದ್ರಮೋದಿ ಹಾಜರು ಹಾಕಿದರೂ ವಿಫಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತ್ತಿತ್ತು. ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ನಡೆದ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ತಕ್ಷಣ ಸ್ಪಂದಿಸಿದ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳು ಮತ್ತು ಸೂಕ್ತ ಪರಿಹಾರದ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು. ಅಂತಹ ಇಚ್ಛಾಶಕ್ತಿಯೇ ಈ ಸರ್ಕಾರಕ್ಕೆ ಇಲ್ಲ.

ಅತಿವೃಷ್ಠಿ ಪೀಡಿತ ಪ್ರದೇಶಕ್ಕೆ ಪರಿಹಾರಕ್ಕಾಗಿ ಒತ್ತಾಯಿಸದಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಕೇಂದ್ರ ಸರ್ಕಾರ ದಿವಾಳಿಯಾಗಿ ಹೋಗಿರುವ ಸೂಚನೆ ಇದು. ಇದು ನಿಜವಲ್ಲದೆ ಇದ್ದರೆ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು. ದೇಶದ ಜನತೆಯ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ. ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...