Homeಮುಖಪುಟದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

- Advertisement -
- Advertisement -

ಎಸ್ಸಿ-ಎಸ್ಟಿ ಸಮುದಾಯದ ಜನರ ಮೇಲೆ ದೇಶದಲ್ಲಿ ದೌರ್ಜನ್ಯಗಳು ಹೆಚ್ಚಳವಾಗುತ್ತಿದೆ. ಬಿಜೆಪಿಯು ಮಾಡೆಲ್‌ ರಾಜ್ಯ ಎಂದು ಕರೆಯುತ್ತಿದ್ದ ಯೋಗಿ ಆದಿತ್ಯನಾಥ್‌ ಆಡಳಿತದ ಉತ್ತರಪ್ರದೇಶವು ಅಗ್ರ ಸ್ಥಾನದಲ್ಲಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ.

2022ರಲ್ಲಿ ಭಾರತದಲ್ಲಿ ದಲಿತರ ಮೇಲೆ ಜಾತಿ ಆಧಾರಿತ ದೌರ್ಜನ್ಯಗಳು ಹೆಚ್ಚಳವಾಗಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ. 2022ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) ವರದಿಯ ಪ್ರಕಾರ ‘ಕ್ರೈಮ್ ಇನ್ ಇಂಡಿಯಾ’ ವರದಿಯು ಭಾರತದಲ್ಲಿ ದಲಿತರು ಜಾತಿ ಆಧಾರಿತ ದೌರ್ಜನ್ಯಗಳಿಗೆ ಗುರಿಯಾಗುತ್ತಿದ್ದಾರೆ. 2022ರಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ವಿರುದ್ಧದ ದೌರ್ಜನ್ಯದ ವಿರುದ್ಧ 57,582 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕಿಂತ 13.1% ಹೆಚ್ಚಳವಾಗಿದೆ. 2021ರಲ್ಲಿ 50,900 ಪ್ರಕರಣಗಳು ದಾಖಲಾಗಿತ್ತು. ಅಪರಾಧದ ಪ್ರಮಾಣವು 2021ರಲ್ಲಿ 25.3ರಿಂದ 2022ರಲ್ಲಿ 28.6ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧ್ಕಕೆ ಸಂಬಂಧಿಸಿ ಒಟ್ಟು 10,064 ಪ್ರಕರಣಗಳು ದಾಖಲಾಗಿವೆ. ಇದು 2021ಕ್ಕಿಂತ 14.3% ಹೆಚ್ಚಳವಾಗಿದೆ. 2021ರಲ್ಲಿ 8,802 ಪ್ರಕರಣಗಳು ದಾಖಲಾಗಿದ್ದವು. ಅಪರಾಧ ಪ್ರಮಾಣವು 2021ರಲ್ಲಿ 8.4ರಿಂದ 2022ರಲ್ಲಿ 9.6ಕ್ಕೆ ಏರಿಕೆಯಾಗಿದೆ. ಇದಲ್ಲದೆ 2022ರಲ್ಲಿ ಬುಡಕಟ್ಟು ಮಹಿಳೆಯರ ಮೇಲೆ 1,347 ಅತ್ಯಾಚಾರ ಪ್ರಕರಣಗಳು ಮತ್ತು 1022 ಹಲ್ಲೆ ಪ್ರಕರಣಗಳು ವರದಿಯಾಗಿವೆ ಎಂದು ವರದಿ ಬಹಿರಂಗಪಡಿಸಿದೆ.

ಎಸ್ಸಿ ಸಮುದಾಯದ ಜನರ ವಿರುದ್ಧದ ದೌರ್ಜನ್ಯ ಪ್ರಕರಣ ಅತಿ ಹೆಚ್ಚು ಉತ್ತರಪ್ರದೇಶದಲ್ಲಿ ದಾಖಲಾಗಿದೆ. ಅಂದರೆ  15,368 ಪ್ರಕರಣಗಳು ದಾಖಲಾಗಿದೆ. ರಾಜಸ್ಥಾನದಲ್ಲಿ 8,752 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 7,733 ಪ್ರಕರಣಗಳು ಮತ್ತು ಬಿಹಾರದಲ್ಲಿ 6,509 ಪ್ರಕರಣಗಳು ದಾಖಲಾಗಿದೆ.

ಯುಪಿಯಲ್ಲಿ ಎಸ್‌ಸಿಗಳ ವಿರುದ್ಧದ ಅಪರಾಧಗಳ ಪ್ರಕರಣಗಳ ಸಂಖ್ಯೆ 2021ರಲ್ಲಿ 13,146ರಿಂದ 2022ರಲ್ಲಿ 15,368ಕ್ಕೆ ಏರಿದೆ. ಈ ಅಂಕಿ ಅಂಶಗಳು ಯೋಗಿ ಆಡಳಿತದ ಉತ್ತರಪ್ರದೇಶದಲ್ಲಿ ಎಸ್ಸಿ ಸಮುದಾಯಗಳ ಮೇಲಿನ ದೌರ್ಜನ್ಯ 16% ಹೆಚ್ಚಾಗಿದೆ ಎಂಬುವುದನ್ನು ಸೂಚಿಸಿದೆ.

ದಕ್ಷಿಣ ಭಾರತದ ರಾಜ್ಯಗಳ ಪೈಕಿ ಆಂಧ್ರಪ್ರದೇಶ 2,315 ಪ್ರಕರಣಗಳೊಂದಿಗೆ ಎಸ್‌ಸಿ ಜನರ ವಿರುದ್ಧ ಎಸಗಿದ ಪ್ರಕರಣಗಳಲ್ಲಿ ಅಗ್ರಸ್ಥಾನದಲ್ಲಿದೆ. ತೆಲಂಗಾಣದಲ್ಲಿ ಎಸ್‌ಸಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 1,787 ಅಪರಾಧಗಳು ದಾಖಲಾಗಿದ್ದರೆ, ತಮಿಳುನಾಡಿನಲ್ಲಿ 1,761 ಮತ್ತು ಕರ್ನಾಟಕದಲ್ಲಿ 1,977 ಪ್ರಕರಣಗಳಿವೆ. ಕೇರಳವು ಎಸ್‌ಸಿಗಳ ವಿರುದ್ಧ ಅತಿ ಕಡಿಮೆ ಅಪರಾಧಗಳನ್ನು ಅಂದರೆ 1,050 ಪ್ರಕರಣಗಳು ದಾಖಲು ಮಾಡಿದೆ. ತಮಿಳುನಾಡಿನಲ್ಲಿ 2021ಕ್ಕೆ ಹೋಲಿಕೆ ಮಾಡಿದರೆ 2022ರಲ್ಲಿ ಎಸ್ಸಿ ಸಮುದಾಯದ ಮೇಲಿನ ದೌರ್ಜನ್ಯ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸಮುದಾಯದ ಜನರ ವಿರುದ್ಧದ ಅತಿ ಹೆಚ್ಚು ಅಪರಾಧಗಳು ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಲ್ಲಿ 545 ಪ್ರಕರಣಗಳು ದಾಖಲಾಗಿದ್ದು ಮತ್ತು ಕಡಿಮೆ ಪ್ರಕರಣ ಅಂದರೆ 67 ಪ್ರಕರಣಗಳು ತಮಿಳುನಾಡಿನಲ್ಲಿ ದಾಖಲಾಗಿದೆ. ಕರ್ನಾಟಕದಲ್ಲಿ ಎಸ್ಟಿಗಳ ವಿರುದ್ಧದ 438  ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದರೆ, ಆಂಧ್ರಪ್ರದೇಶದಲ್ಲಿ ಎಸ್ಟಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 396 ಪ್ರಕರಣಗಳು, ಕೇರಳದಲ್ಲಿ 172 ಪ್ರಕರಣಗಳು ದಾಖಲಾಗಿವೆ. ಎಸ್ಟಿಗಳ ವಿರುದ್ಧದ ದೌರ್ಜನ್ಯಗಳಿಗೆ ಸಂಬಂಧಿಸಿ ಕರ್ನಾಟಕವು 2021ರಲ್ಲಿ 361 ಪ್ರಕರಣಗಳನ್ನು ದಾಖಲಿಸಿದ್ದು, 2022ರಲ್ಲಿ 438 ಪ್ರಕರಣಗಳು ದಾಖಲಾಗಿತ್ತು. ಈ ಅಂಕಿ ಅಂಶಗಳು ಪ್ರಕರಣಗಳಲ್ಲಿ 21.3% ಹೆಚ್ಚಳವನ್ನು ಸೂಚಿಸುತ್ತದೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...