Homeಅಂತರಾಷ್ಟ್ರೀಯಕದನ ವಿರಾಮಕ್ಕೆ ಕರೆ ನೀಡುವ UN ನಿರ್ಣಯಕ್ಕೆ ವಿಟೊ ಅಧಿಕಾರ ಬಳಸಿ ಯುಎಸ್‌ ತಡೆ

ಕದನ ವಿರಾಮಕ್ಕೆ ಕರೆ ನೀಡುವ UN ನಿರ್ಣಯಕ್ಕೆ ವಿಟೊ ಅಧಿಕಾರ ಬಳಸಿ ಯುಎಸ್‌ ತಡೆ

- Advertisement -
- Advertisement -

ಗಾಝಾ ಪಟ್ಟಿಯ ಮೇಲೆ ಇಸ್ರೇಲ್‌ ನಿರಂತರ ದಾಳಿ ಮಾಡುತ್ತಿದೆ. ಯುದ್ಧ ಘೋಷಣೆ ಬಳಿಕ ಪ್ಯಾಲೆಸ್ತೀನ್‌ನಲ್ಲಿ 17,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 4 ದಿನಗಳ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಯುದ್ಧವನ್ನು ಮುಂದುವರಿಸಿದೆ. ಈ ಮಧ್ಯೆ ಕದನ ವಿರಾಮಕ್ಕೆ ಕರೆ ನೀಡುವ ನಿರ್ಣಯವನ್ನು ವಿಶ್ವಸಂಸ್ಥೆ ಮಂಡಿಸಿದೆ. ಆದರೆ ನಿರ್ಣಯವನ್ನು ಬೆಂಬಲಿಸಲು ಅಮೆರಿಕ ನಿರಾಕರಿಸಿದ್ದು, ಪ್ರಸ್ತಾವಣೆಗೆ ವಿಟೊ ಅಧಿಕಾರ ಬಳಸಿ ತಡೆ ನೀಡಿದೆ.

ಭದ್ರತಾ ಮಂಡಳಿಯ 15 ಸದಸ್ಯ ರಾಷ್ಟ್ರಗಳ ಪೈಕಿ 13 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದವು. ಬ್ರಿಟನ್ ಮತದಾನದಿಂದ ದೂರ ಉಳಿದಿದೆ. ಪ್ಯಾಲೆಸ್ತೀನ್‌ ಹಾಗೂ ಇಸ್ರೇಲ್ ಜನರು ಶಾಂತಿಯುತವಾಗಿ ಬದುಕಬೇಕು. ಆದರೆ ದೀರ್ಘಕಾಲದ ಶಾಂತಿಯನ್ನು ಹಮಾಸ್ ಬಯಸುವುದಿಲ್ಲ. ಹಾಗಾಗಿ ಶಾಂತಿಯನ್ನು ಅಮೆರಿಕ ಬಯಸಿದರೂ ತಕ್ಷಣದ ಕದನ ವಿರಾಮ ನಿರ್ಣಯವನ್ನು ಬೆಂಬಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ 17,487 ಪ್ಯಾಲೆಸ್ತೀನ್‌ ನಾಗರಿಕರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಗಾಝಾದ ವಿಶಾಲ ಪ್ರದೇಶಗಳು ಪಾಳುಭೂಮಿಯಾಗಿ ಮಾರ್ಪಟ್ಟಿವೆ. ಸುಮಾರು 80 ಪ್ರತಿಶತ ಜನಸಂಖ್ಯೆಯು ಸ್ಥಳಾಂತರಗೊಂಡಿದ್ದು, ಆಹಾರ, ಇಂಧನ, ನೀರು ಮತ್ತು ಔಷಧಿಗಳ ಭೀಕರ ಕೊರತೆಯನ್ನು ಎದುರಿಸುತ್ತಿದ್ದಾರೆ ಮತ್ತು ಸಾಂಕ್ರಾಮಿ ರೋಗದ ಭೀತಿ ಎದುರಾಗಿದೆ ಎಂದು UN ಹೇಳಿದೆ.

ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಅವರು ತುರ್ತು ಭದ್ರತಾ ಮಂಡಳಿಯ ಸಭೆಯನ್ನು ಕರೆದು ಕದನ ವಿರಾಮಕ್ಕೆ ಆಗ್ರಹಿಸಿದ್ದಾರೆ. ಒತ್ತೆಯಾಳುಗಳ ಬಿಡುಗಡೆಗೆ ಒತ್ತಾಯಿಸಿದ್ದು, ಹಮಾಸ್ ನಡೆಸಿದ ಕ್ರೌರ್ಯಕ್ಕೆ ಪ್ಯಾಲೆಸ್ತೀನ್‌ ಜನರ ಸಾಮೂಹಿಕ ಶಿಕ್ಷೆಯನ್ನು ಎಂದಿಗೂ ಸಮರ್ಥಿಸುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ಗೆ ಯುದ್ಧಕ್ಕೆ ಬಿಲಿಯನ್‌ಗಟ್ಟಲೆ ಡಾಲರ್‌ಗಳ ಮಿಲಿಟರಿ ಸಹಾಯವನ್ನು ಪೂರೈಸುವ ಯುಎಸ್, ನಿರ್ಣಯವನ್ನು ತಿರಸ್ಕರಿಸಿದೆ. ಭದ್ರತಾ ಮಂಡಳಿಯ 5 ಖಾಯಂ ಸದಸ್ಯ ರಾಷ್ಟ್ರಗಳಲ್ಲಿ ಒಂದಾಗಿರುವ ಅಮೆರಿಕ, ಹಮಾಸ್ ದಾಳಿಯ ವಿರುದ್ಧ ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ವಾದಿಸಿ ನಿರ್ಣಯವನ್ನು ತಿರಸ್ಕರಿಸಿದೆ. ಮತದಾನದಿಂದ ಬ್ರಿಟನ್ ದೂರ ಉಳಿದಿದ್ದು, ಫ್ರಾನ್ಸ್‌ ಸೇರಿ ಕೆಲವು ಯುಎಸ್ ಮಿತ್ರರಾಷ್ಟ್ರಗಳು ಕದನ ವಿರಾಮಕ್ಕೆ ಮತ ಹಾಕಿದೆ.

ಕೌನ್ಸಿಲ್‌ನಲ್ಲಿ ಯುನೈಟೆಡ್ ಸ್ಟೇಟ್ಸ್‌ನ್ನು ಪ್ರತಿನಿಧಿಸುತ್ತಿದ್ದ ರಾಬರ್ಟ್ ಎ.ವುಡ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಬೇಷರತ್ತಾದ ಮತ್ತು ತಕ್ಷಣದ ಕದನ ವಿರಾಮದ ನಿರ್ಣಯವು ಅವಾಸ್ತವಿಕ ಮಾತ್ರವಲ್ಲ ಅಪಾಯಕಾರಿಯಾಗಿದೆ.  ಹಮಾಸ್ ಇದು ಮರುಸಂಘಟಿಸಲು ಸಾಧ್ಯವಾಗುತ್ತದೆ ಮತ್ತು ಅ.7ರಂದು ಮಾಡಿದ್ದನ್ನು ಪುನರಾವರ್ತಿಸುತ್ತದೆ  ಎಂದು ಹೇಳಿದ್ದಾರೆ.

ಎರಡು ತಿಂಗಳ ಯುದ್ಧದ ನಂತರ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುತ್ತಿರುವ ನಾಗರಿಕರಿಗೆ ಆಹಾರ, ಔಷಧಿ ಮತ್ತು ಅಡುಗೆ ಅನಿಲದಂತಹ ಅಗತ್ಯ ವಸ್ತುಗಳನ್ನು ತಲುಪಿಸಲು ವಿಫಲವಾಗುತ್ತಿದೆ. ನಾಗರಿಕರ ಸುವ್ಯವಸ್ಥೆ ಹದಗೆಡುತ್ತಿದೆ. ಯುಎನ್ ವಾಹನಗಳಿಗೆ ಕಲ್ಲೆಸೆಯಲಾಗುತ್ತಿದೆ. ಆಹಾರ ಸಾಮಾಗ್ರಿಗಳನ್ನು ಲೂಟಿ ಮಾಡಲಾಗುತ್ತಿದೆ. ಪರಿಸ್ಥಿತಿ ಗಂಭೀರವಾಗಿದೆ ಎಂದು ವಿಶ್ವಸಂಸ್ಥೆಯ ಪರಿಹಾರ ಸಂಸ್ಥೆಯ ನಿರ್ದೇಶಕ ಥಾಮಸ್ ವೈಟ್ ಹೇಳಿದ್ದಾರೆ.

ದಕ್ಷಿಣ ಗಾಝಾದ ಅತಿದೊಡ್ಡ ನಗರವಾದ ಖಾನ್ ಯೂನಿಸ್ ಮತ್ತು ಉತ್ತರ ಗಾಝಾದ ಮೇಲೆ ದಾಳಿ ನಡೆಯುತ್ತಿವೆ. ಇಸ್ರೇಲ್‌ ಪಡೆಗಳು ಗಾಝಾ ನಗರದ ಶಾಜೈ ನೆರೆಹೊರೆಯ ಮೇಲೆ ಮತ್ತು ನಗರದ ಉತ್ತರಕ್ಕೆ ಜನನಿಬಿಡ ಪ್ರದೇಶವಾದ ಜಬಾಲಿಯಾ ಮೇಲೆ ದಾಳಿ ನಡೆಸುತ್ತಿದೆ. ಅಲ್ಲಿ ಹಮಾಸ್ ಕಾರ್ಯಕರ್ತರಿದ್ದಾರೆ ಎಂದು ಇಸ್ರೇಲ್‌ ಆರೋಪಿಸಿದೆ.

ಇದನ್ನು ಓದಿ: ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...