Homeಅಂತರಾಷ್ಟ್ರೀಯಕದನ ವಿರಾಮಕ್ಕೆ ಕರೆ ನೀಡುವ UN ನಿರ್ಣಯಕ್ಕೆ ವಿಟೊ ಅಧಿಕಾರ ಬಳಸಿ ಯುಎಸ್‌ ತಡೆ

ಕದನ ವಿರಾಮಕ್ಕೆ ಕರೆ ನೀಡುವ UN ನಿರ್ಣಯಕ್ಕೆ ವಿಟೊ ಅಧಿಕಾರ ಬಳಸಿ ಯುಎಸ್‌ ತಡೆ

- Advertisement -
- Advertisement -

ಗಾಝಾ ಪಟ್ಟಿಯ ಮೇಲೆ ಇಸ್ರೇಲ್‌ ನಿರಂತರ ದಾಳಿ ಮಾಡುತ್ತಿದೆ. ಯುದ್ಧ ಘೋಷಣೆ ಬಳಿಕ ಪ್ಯಾಲೆಸ್ತೀನ್‌ನಲ್ಲಿ 17,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 4 ದಿನಗಳ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಯುದ್ಧವನ್ನು ಮುಂದುವರಿಸಿದೆ. ಈ ಮಧ್ಯೆ ಕದನ ವಿರಾಮಕ್ಕೆ ಕರೆ ನೀಡುವ ನಿರ್ಣಯವನ್ನು ವಿಶ್ವಸಂಸ್ಥೆ ಮಂಡಿಸಿದೆ. ಆದರೆ ನಿರ್ಣಯವನ್ನು ಬೆಂಬಲಿಸಲು ಅಮೆರಿಕ ನಿರಾಕರಿಸಿದ್ದು, ಪ್ರಸ್ತಾವಣೆಗೆ ವಿಟೊ ಅಧಿಕಾರ ಬಳಸಿ ತಡೆ ನೀಡಿದೆ.

ಭದ್ರತಾ ಮಂಡಳಿಯ 15 ಸದಸ್ಯ ರಾಷ್ಟ್ರಗಳ ಪೈಕಿ 13 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದವು. ಬ್ರಿಟನ್ ಮತದಾನದಿಂದ ದೂರ ಉಳಿದಿದೆ. ಪ್ಯಾಲೆಸ್ತೀನ್‌ ಹಾಗೂ ಇಸ್ರೇಲ್ ಜನರು ಶಾಂತಿಯುತವಾಗಿ ಬದುಕಬೇಕು. ಆದರೆ ದೀರ್ಘಕಾಲದ ಶಾಂತಿಯನ್ನು ಹಮಾಸ್ ಬಯಸುವುದಿಲ್ಲ. ಹಾಗಾಗಿ ಶಾಂತಿಯನ್ನು ಅಮೆರಿಕ ಬಯಸಿದರೂ ತಕ್ಷಣದ ಕದನ ವಿರಾಮ ನಿರ್ಣಯವನ್ನು ಬೆಂಬಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ 17,487 ಪ್ಯಾಲೆಸ್ತೀನ್‌ ನಾಗರಿಕರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಗಾಝಾದ ವಿಶಾಲ ಪ್ರದೇಶಗಳು ಪಾಳುಭೂಮಿಯಾಗಿ ಮಾರ್ಪಟ್ಟಿವೆ. ಸುಮಾರು 80 ಪ್ರತಿಶತ ಜನಸಂಖ್ಯೆಯು ಸ್ಥಳಾಂತರಗೊಂಡಿದ್ದು, ಆಹಾರ, ಇಂಧನ, ನೀರು ಮತ್ತು ಔಷಧಿಗಳ ಭೀಕರ ಕೊರತೆಯನ್ನು ಎದುರಿಸುತ್ತಿದ್ದಾರೆ ಮತ್ತು ಸಾಂಕ್ರಾಮಿ ರೋಗದ ಭೀತಿ ಎದುರಾಗಿದೆ ಎಂದು UN ಹೇಳಿದೆ.

ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಅವರು ತುರ್ತು ಭದ್ರತಾ ಮಂಡಳಿಯ ಸಭೆಯನ್ನು ಕರೆದು ಕದನ ವಿರಾಮಕ್ಕೆ ಆಗ್ರಹಿಸಿದ್ದಾರೆ. ಒತ್ತೆಯಾಳುಗಳ ಬಿಡುಗಡೆಗೆ ಒತ್ತಾಯಿಸಿದ್ದು, ಹಮಾಸ್ ನಡೆಸಿದ ಕ್ರೌರ್ಯಕ್ಕೆ ಪ್ಯಾಲೆಸ್ತೀನ್‌ ಜನರ ಸಾಮೂಹಿಕ ಶಿಕ್ಷೆಯನ್ನು ಎಂದಿಗೂ ಸಮರ್ಥಿಸುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ಗೆ ಯುದ್ಧಕ್ಕೆ ಬಿಲಿಯನ್‌ಗಟ್ಟಲೆ ಡಾಲರ್‌ಗಳ ಮಿಲಿಟರಿ ಸಹಾಯವನ್ನು ಪೂರೈಸುವ ಯುಎಸ್, ನಿರ್ಣಯವನ್ನು ತಿರಸ್ಕರಿಸಿದೆ. ಭದ್ರತಾ ಮಂಡಳಿಯ 5 ಖಾಯಂ ಸದಸ್ಯ ರಾಷ್ಟ್ರಗಳಲ್ಲಿ ಒಂದಾಗಿರುವ ಅಮೆರಿಕ, ಹಮಾಸ್ ದಾಳಿಯ ವಿರುದ್ಧ ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ವಾದಿಸಿ ನಿರ್ಣಯವನ್ನು ತಿರಸ್ಕರಿಸಿದೆ. ಮತದಾನದಿಂದ ಬ್ರಿಟನ್ ದೂರ ಉಳಿದಿದ್ದು, ಫ್ರಾನ್ಸ್‌ ಸೇರಿ ಕೆಲವು ಯುಎಸ್ ಮಿತ್ರರಾಷ್ಟ್ರಗಳು ಕದನ ವಿರಾಮಕ್ಕೆ ಮತ ಹಾಕಿದೆ.

ಕೌನ್ಸಿಲ್‌ನಲ್ಲಿ ಯುನೈಟೆಡ್ ಸ್ಟೇಟ್ಸ್‌ನ್ನು ಪ್ರತಿನಿಧಿಸುತ್ತಿದ್ದ ರಾಬರ್ಟ್ ಎ.ವುಡ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಬೇಷರತ್ತಾದ ಮತ್ತು ತಕ್ಷಣದ ಕದನ ವಿರಾಮದ ನಿರ್ಣಯವು ಅವಾಸ್ತವಿಕ ಮಾತ್ರವಲ್ಲ ಅಪಾಯಕಾರಿಯಾಗಿದೆ.  ಹಮಾಸ್ ಇದು ಮರುಸಂಘಟಿಸಲು ಸಾಧ್ಯವಾಗುತ್ತದೆ ಮತ್ತು ಅ.7ರಂದು ಮಾಡಿದ್ದನ್ನು ಪುನರಾವರ್ತಿಸುತ್ತದೆ  ಎಂದು ಹೇಳಿದ್ದಾರೆ.

ಎರಡು ತಿಂಗಳ ಯುದ್ಧದ ನಂತರ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುತ್ತಿರುವ ನಾಗರಿಕರಿಗೆ ಆಹಾರ, ಔಷಧಿ ಮತ್ತು ಅಡುಗೆ ಅನಿಲದಂತಹ ಅಗತ್ಯ ವಸ್ತುಗಳನ್ನು ತಲುಪಿಸಲು ವಿಫಲವಾಗುತ್ತಿದೆ. ನಾಗರಿಕರ ಸುವ್ಯವಸ್ಥೆ ಹದಗೆಡುತ್ತಿದೆ. ಯುಎನ್ ವಾಹನಗಳಿಗೆ ಕಲ್ಲೆಸೆಯಲಾಗುತ್ತಿದೆ. ಆಹಾರ ಸಾಮಾಗ್ರಿಗಳನ್ನು ಲೂಟಿ ಮಾಡಲಾಗುತ್ತಿದೆ. ಪರಿಸ್ಥಿತಿ ಗಂಭೀರವಾಗಿದೆ ಎಂದು ವಿಶ್ವಸಂಸ್ಥೆಯ ಪರಿಹಾರ ಸಂಸ್ಥೆಯ ನಿರ್ದೇಶಕ ಥಾಮಸ್ ವೈಟ್ ಹೇಳಿದ್ದಾರೆ.

ದಕ್ಷಿಣ ಗಾಝಾದ ಅತಿದೊಡ್ಡ ನಗರವಾದ ಖಾನ್ ಯೂನಿಸ್ ಮತ್ತು ಉತ್ತರ ಗಾಝಾದ ಮೇಲೆ ದಾಳಿ ನಡೆಯುತ್ತಿವೆ. ಇಸ್ರೇಲ್‌ ಪಡೆಗಳು ಗಾಝಾ ನಗರದ ಶಾಜೈ ನೆರೆಹೊರೆಯ ಮೇಲೆ ಮತ್ತು ನಗರದ ಉತ್ತರಕ್ಕೆ ಜನನಿಬಿಡ ಪ್ರದೇಶವಾದ ಜಬಾಲಿಯಾ ಮೇಲೆ ದಾಳಿ ನಡೆಸುತ್ತಿದೆ. ಅಲ್ಲಿ ಹಮಾಸ್ ಕಾರ್ಯಕರ್ತರಿದ್ದಾರೆ ಎಂದು ಇಸ್ರೇಲ್‌ ಆರೋಪಿಸಿದೆ.

ಇದನ್ನು ಓದಿ: ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...