Homeಮುಖಪುಟದೇಶಿ ಮುಸ್ಲಿಮರ ಗಣತಿಗೆ ಅಸ್ಸಾಂ ಸಂಪುಟ ಅನುಮೋದನೆ

ದೇಶಿ ಮುಸ್ಲಿಮರ ಗಣತಿಗೆ ಅಸ್ಸಾಂ ಸಂಪುಟ ಅನುಮೋದನೆ

- Advertisement -
- Advertisement -

ರಾಜ್ಯದ ದೇಶಿ ಮುಸ್ಲಿಮರ ಆರ್ಥಿಕ-ಸಾಮಾಜಿಕ ಸಮೀಕ್ಷೆಗೆ ಸಮೀಕ್ಷೆಗೆ ಅಸ್ಸಾಂ ಸಂಪುಟ ಸಭೆ ಶುಕ್ರವಾರ ಅನುಮೋದನೆ ನೀಡಿದೆ.

ಮುಸ್ಲಿಂ ಜನಾಂಗದ ಐದು ಸಮುದಾಯಗಳನ್ನು ದೇಶಿಯ ಅಸ್ಸಾಂ ಮುಸ್ಲಿಮರು ಎಂದು ಹಿಮಂತ್ ಬಿಶ್ವ ಶರ್ಮಾ ನೇತೃತ್ವದ ಸರ್ಕಾರ ಬಿಜೆಪಿ ಸರ್ಕಾರ ಮಾನ್ಯ ಮಾಡಿದ ಒಂದು ವರ್ಷದ ಬಳಿಕ ಸಮೀಕ್ಷೆಗೆ ಸಂಪುಟ ನಿರ್ಧಾರ ಕೈಗೊಂಡಿದೆ.

ಡೈರೆಕ್ಟೋರೇಟ್ ಆಫ್ ಚಾರ್ ಏರಿಯಾಸ್ ಡೆವಲಪ್‌ಮೆಂಟ್ ಅನ್ನು ಡೈರೆಕ್ಟೋರೇಟ್ ಮೈನಾರಿಟಿ ಅಫೈರ್ಸ್‌ ಅಂಡ್‌ ಚಾರ್ ಏರಿಯಾಸ್ ಡೆವಲಪ್‌ಮೆಂಟ್ ಎಂದು ಮರುನಾಮಕರಣ ಮಾಡಲಾಗಿದೆ. ಇದು ದೇಶಿ ಮುಸ್ಲಿಮರ ಆರ್ಥಿಕ-ಸಾಮಾಜಿಕ ಸಮೀಕ್ಷೆ ನಡೆಸಿ ವರದಿ ನೀಡಲಿದೆ ಎಂದು ಸಂಪುಟ ಟಿಪ್ಪಣಿಯಲ್ಲಿ ವಿವರಿಸಿದೆ.

2011ರ ಜನಗಣತಿಯ ಪ್ರಕಾರ, ಮುಸ್ಲಿಮರು ಅಸ್ಸಾಂನ ಒಟ್ಟು ಜನ ಸಂಖ್ಯೆಯ ಶೇ. 34ಕ್ಕಿಂತ ಹೆಚ್ಚು ಇದ್ದಾರೆ. ಲಕ್ಷದ್ವೀಪ ಮತ್ತು ಜಮ್ಮು ಕಾಶ್ಮೀರದ ನಂತರ ಅತೀ ಹೆಚ್ಚು ಮುಸ್ಲಿಮರಿರುವ ಮೂರನೇ ರಾಜ್ಯವಾಗಿದೆ ಅಸ್ಸಾಂ. ರಾಜ್ಯದ ಒಟ್ಟು 3.1 ಕೋಟಿ ಜನ ಸಂಖ್ಯೆಯಲ್ಲಿ 1 ಕೋಟಿಗೂ ಹೆಚ್ಚು ಮುಸ್ಲಿಮರಿದ್ದಾರೆ. ಈ ಪೈಕಿ ಸುಮಾರು 40 ಲಕ್ಷ ಜನರು ಮಾತ್ರ ಸ್ಥಳೀಯರು, ಅಸ್ಸಾಮಿ ಮಾತನಾಡುವ ಮುಸ್ಲಿಮರು. ಉಳಿದವರು ಬಾಂಗ್ಲಾದೇಶ ಮೂಲದವರು, ಬಂಗಾಳಿ ಮಾತನಾಡುವ ವಲಸಿಗರು ಎಂದು ವರದಿಗಳು ಹೇಳಿವೆ.

ಅಕ್ಟೋಬರ್‌ನಲ್ಲಿ, ಹಿಮಂತ ಬಿಶ್ವ ಶರ್ಮಾ ಸರ್ಕಾರವು ಸ್ಥಳೀಯ ಮುಸ್ಲಿಂ ಸಮುದಾಯಗಳ ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಸುವ ಬಗ್ಗೆ ಪ್ರಕಟಿಸಿತ್ತು. “ಈ ಸಮೀಕ್ಷೆ ರಾಜ್ಯದ ಸ್ಥಳೀಯ ಅಲ್ಪಸಂಖ್ಯಾತರ ಸಮಗ್ರ ಸಾಮಾಜಿಕ-ರಾಜಕೀಯ ಮತ್ತು ಶೈಕ್ಷಣಿಕ ಉನ್ನತಿಗೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸಹಕಾರಿಯಾಗಲಿದೆ” ಎಂದು ಸಿಎಂ ಶರ್ಮಾ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಗೋರಿಯಾ, ಮೋರಿಯಾ, ಜೋಲಾಹ್ (ಕೇವಲ ಚಹಾ ತೋಟಗಳಲ್ಲಿ ವಾಸಿಸುವವರು), ದೇಸಿ ಮತ್ತು ಸೈಯದ್ ( ಅಸ್ಸಾಮಿ ಭಾಷೆ ಮಾತ್ರ ಮಾತನಾಡುವರು) ಸಮುದಾಯಗಳನ್ನು ಸ್ಥಳೀಯ ಅಸ್ಸಾಮಿ ಮುಸ್ಲಿಮರು ಎಂದು ಮಾನ್ಯ ಮಾಡಿದೆ. ಇವರು ಹಿಂದಿನ ಪೂರ್ವ ಪಾಕಿಸ್ತಾನ ಅಥವಾ ಈಗಿನ ಬಾಂಗ್ಲಾದೇಶದಿಂದ ಬಂದವರಲ್ಲ ಎಂದು ಹೇಳಿದೆ.

ಇದನ್ನೂ ಓದಿ : ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...