Homeಮುಖಪುಟಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ, ಸಿ ಕೆ ನಾಣು ಉಚ್ಚಾಟನೆ

ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ, ಸಿ ಕೆ ನಾಣು ಉಚ್ಚಾಟನೆ

- Advertisement -
- Advertisement -

ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾಣು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ ದೇವೆಗೌಡರು, ಕಾರ್ಯಕಾರಿಣಿಗೆ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ನಾಯಕರು ಹೊರತುಪಡಿಸಿ, ಹರಿಯಾಣ, ಪಂಜಾಬ್, ಜಮ್ಮು ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ್, ಮಹಾರಾಷ್ಟ್ರ, ತಮಿಳುನಾಡು ಮತ್ತು ಬಿಹಾರ ರಾಜ್ಯಗಳ ನಾಯಕರು ಆಗಮಿಸಿದ್ದರು. ಸಭೆಯಲ್ಲಿ ಎರಡು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದರು.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಪಕ್ಷಕ್ಕೆ ಹಾನಿಯಾಗುವ ಹೇಳಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಅವರನ್ನು ಅಮಾನತ್ತು ಮಾಡಲಾಗಿತ್ತು. ಇಂದು ಉಚ್ಚಾಟನೆ ಮಾಡಲಾಗಿದೆ. ಅದೇ ರೀತಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾಣು ರಾಷ್ಟ್ರೀಯ ಅಧ್ಯಕ್ಷರು ಜೀವಂತ ಇರುವಾಗಲೇ ಪ್ರತ್ಯೇಖ ಸಭೆ ಕರೆದು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಹಾಗಾಗಿ, ಅವರನ್ನೂ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದರು.

ಪಕ್ಷದ ಬಲ ವರ್ಧನೆಗೆ ಬಿಜೆಪಿ ಜೊತೆ ಮೈತ್ರಿ

ಪಕ್ಷ ಸಂಘಟನೆ ಮಾಡಲು, ಬಲವರ್ಧಿಸಲು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ನಿರ್ಧರಿಸಲಾಗಿದೆ ಎಂದು ದೇವೇಗೌಡು ಹೇಳಿದರು.

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಡೆದ ಆರಂಭಿಕ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಇದ್ದರು. ಬಳಿಕ ಅವರು ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಈ ಕಾರಣಕ್ಕೆ ರಾಜ್ಯಾಧ್ಯಕ್ಷರನ್ನೊಳಗೊಂಡ ಜೆಡಿಎಸ್ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ದೇವೇಗೌಡರು ತಿಳಿಸಿದರು.

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ದೇವೇಗೌಡರು ಮತ್ತು ಕುಮಾರಸ್ವಾಮಿ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದ ಸಿಎಂ ಇಬ್ರಾಹಿಂ ಬಹಿರಂಗ ಹೇಳಿಕೆಗಳನ್ನು ನೀಡಿದ್ದರು. ಅಲ್ಲದೆ, ತನ್ನ ಬೆಂಬಲಿಗರು ಮತ್ತು ಅಲ್ಪ ಸಂಖ್ಯಾತ ನಾಯಕರ ಪ್ರತ್ಯೇಖ ಸಭೆ ನಡೆಸಿದ್ದರು. ಈ ಬೆಳವಣಿಗೆ ಬಳಿಕ ಸಭೆ ನಡೆಸಿದ ದೇವೇಗೌಡರು ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಿದ್ದರು.

ಪಕ್ಷದಿಂದ ಅಮಾನತ್ತಾದರೂ, ಸಿಎಂ ಇಬ್ರಾಹಿಂ ಮಾತ್ರ ಜೆಡಿಎಸ್ ಪಕ್ಷ ದೇವೇಗೌಡರು, ಕುಮಾರಸ್ವಾಮಿಗೆ ಮಾತ್ರ ಸೇರಿದ್ದಲ್ಲ. ನಾನು ರಾಜ್ಯಾಧ್ಯಕ್ಷ ಎನ್ನುತ್ತಿದ್ದರು. ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್‌ನ ಕೆಲ ರಾಷ್ಟ್ರೀಯ ನಾಯಕರು ಬೆಂಬಲ ವ್ಯಕ್ತಪಡಿಸಿದ್ದರು. ಈ ಪೈಕಿ ಸಿ.ಕೆ ನಾಣು ಒಬ್ಬರು.

ಡಿಸೆಂಬರ್ 11ರಂದು ನಾಣು ಅವರು ಜೆಡಿಎಸ್ ಕಾರ್ಯಕಾರಿಣಿ ಸಭೆ ಕರೆದಿರುವುದಾಗಿ ಸಿಎಂ ಇಬ್ರಾಹಿಂ ಶುಕ್ರವಾರ ಮಾಹಿತಿ ನೀಡಿದ್ದರು. ಈ ಬೆನ್ನಲ್ಲೇ ಇಬ್ಬರನ್ನೂ ದೇವೇಗೌಡರು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಇದನ್ನೂ ಓದಿ : ಬಿಜೆಪಿಯವರೇ ಬಿಜೆಪಿಯವರಿಗೆ ಕೊಟ್ಟಿರುವ ಹೆಸರು ‘ಬಕೆಟ್ ಜನತಾ ಪಾರ್ಟಿ’: ಕಾಂಗ್ರೆಸ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...