Homeಕರ್ನಾಟಕತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

- Advertisement -
- Advertisement -

ನಾಟಕ ಪ್ರದರ್ಶನಗಳು ಉತ್ಕೃಷ್ಟವಾಗಿ ಪ್ರೇಕ್ಷಕರನ್ನು ತಲುಪುವಂತೆ ಗುಬ್ಬಿ ವೀರಣ್ಣವನ್ನು ವಿನ್ಯಾಸಗೊಳಿಸಿ, ‘ಬಯಲು ಸೀಮೆ ರಂಗಾಯಣ’ ಸ್ಥಾಪಿಸಿ ಎಂದು ತುಮಕೂರು ರಂಗ ಕಲಾವಿದರ ಒಕ್ಕೂಟವು ಒತ್ತಾಯಿಸಿದೆ.

ತುಮಕೂರು ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕ್ರೀಯಾಶೀಲ ರಂಗಭೂಮಿಯನ್ನು ಒಳಗೊಂಡ ಜಿಲ್ಲೆಯಾಗಿದೆ. ಇಲ್ಲಿ ಜನಪದ ರಂಗಭೂಮಿಯಾದ ಮೂಢಲಪಾಯ, ಬಯಲಾಟ, ಪೌರಾಣಿಕ ನಾಟಕಗಳು ಮತ್ತು ಆಧುನಿಕ ನಾಟಕಗಳು ಹೆಚ್ಚಿನದಾಗಿ ನಡೆಯುತ್ತಿವೆ. ಆದರೆ ಇತ್ತಿಚಿಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾದ ತುಮಕೂರು ಜಿಲ್ಲೆಯ ರಂಗಭೂಮಿ ಸಾಕಷ್ಟು ಸಾಧ್ಯತೆಗಳನ್ನು ಕಳೆದುಕೊಳ್ಳುತ್ತಿದೆ ಎಂದು ಕಲಾವಿದರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಗುಬ್ಬಿ ವೀರಣ್ಣ, ನರಸಿಂಹರಾಜು ಅಂತಹ ಹಲುವು ರಂಗಭೂಮಿ ಮತ್ತು ಸಿನೆಮಾ ದಿಗ್ಗಜರ ಜಿಲ್ಲೆ ಇನ್ನಷ್ಟು ಹೆಚ್ಚು ಪ್ರತಿಭಾವಂತರನ್ನು ಹೊರತರುವ ವಾತವಾರಣವನ್ನು ಸರ್ಕಾರ ಸೃಷ್ಟಿಸುವ ಅವಶ್ಯಕತೆಯಿದೆ. ಆದರೆ ಇಲ್ಲಿನ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನ ಇಲ್ಲಿ ರಂಗಭೂಮಿ ಚಟುವಟಿಕೆಗಳು ಇನ್ನಷ್ಟು ಚಿಗುರಲು ತಡೆಯಾಗಿದ್ದಾರೆ. ನಗರದ ಗುಬ್ಬಿ ವೀರಣ್ಣ ರಂಗಮಂದಿರವನ್ನು ಇಲಾಖೆ ಪ್ರತಿವರ್ಷ ಲಕ್ಷ ಲಕ್ಷ ಖರ್ಚು ಮಾಡಿ ರಿಪೇರಿ ಮಾಡುತ್ತಿದ್ದರು ಸಹ ಇದುವರೆಗೂ ಆಧುನಿಕ ರಂಗಭೂಮಿಯ ನಾಟಕಗಳನ್ನು ಪ್ರದರ್ಶಿಸಲು ಯೋಗ್ಯವಾಗಿಲ್ಲ ಎಂದು ಹಲವಾರು ಆರೋಪಗಳು ಬಂದಿವೆ.

ಇದೇ ಅಲ್ಲದೇ ಎಲ್ಲಾ ತಾಲ್ಲೂಕುಗಳಲ್ಲೂ ಉತ್ತಮವಾದ ರಂಗ ಮಂದಿರಗಳಿಲ್ಲ. ಇರುವ ರಂಗಮಂದಿರಗಳು ಬಳಸಲು ಯೋಗ್ಯವಲ್ಲದ ರೀತಿಯಲ್ಲಿ ಹಾಳಾಗಿವೆ. ಜಿಲ್ಲೆಯಲ್ಲಿ ಹೀಗಾಗಲೆ ಇರುವ ಹಲವು ರಂಗ ನಿರ್ದೇಶಕರು, ವಿನ್ಯಾಸಕಾರು, ನಟರು, ತಂತ್ರಜ್ಞರನ್ನು ಬಳಸಿಕೊಂಡು ಉತ್ತಮವಾದ ರಂಗಕಾರ್ಯ ಮಾಡಬಹುದಾಗಿದೆ. ಈ ಕುರಿತು ರಂಗಭೂಮಿ ಕಲಾವಿದರ ಒಕ್ಕೂಟ ಈ ಕೆಳಗಿನ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

1. ಜಿಲ್ಲೆಗೆ ರಂಗಾಯಣ : ರಾಜ್ಯದ ಹಾಗೂ ರಾಷ್ಟ್ರದ ರಂಪ್ರಯೋಗಗಳನ್ನು ನೋಡುವ, ಚರ್ಚಿಸುವ ಮೂಲಕ ಜಿಲ್ಲೆಯಲ್ಲಿಯೇ ಒಂದು ರೀತಿಯ ರಂಗ ಸಂವೇದನೆ ಬರುತ್ತದೆ. 20 ಜನ ಕಲಾವಿದರಿಗೆ ಕೆಲಸ ಸಿಗುತ್ತದೆ. ತುಮಕೂರು ಜಿಲ್ಲೆಯ ಘನತೆ ಹೆಚ್ಚಾಗುತ್ತದೆ. ಹಾಗಾಗಿ ಜಿಲ್ಲೆಗೆ ‘ಬಯಲು ಸೀಮೆ ರಂಗಾಯಣ’ ಒದಗಿಸಬೇಕು.

2. ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ : ಇಲ್ಲಿ ಸಮಾರು 500 ಜನ ಕುಳಿತುಕೊಳ್ಳುವ ರಂಗಮಂದಿರ, ಬಯಲು ರಂಗಮಂದಿರ ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರ, ತಾಲೀಮು ಕೊಠಡಿ, ಮಕ್ಕಳ ರಂಗಭೂಮಿ ಚಟುವಟಿಕೆಗಳಿಗೆ ಸ್ಥಳ ರಂಗ ಗ್ರಂಥಾಲಯ, ಕ್ಯಾಂಟೀನ್, ಹೊರಗಿನಿಂದ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಅತಿಥಿ ಗೃಹ , ಆಡಿಯೋ , ವಿಷುವಲ್ ಸ್ಟುಡಿಯೋ, ಇದಕ್ಕಾಗಿ 3 ರಿಂದ 5 ಎಕರೆಯಲ್ಲಿ ಬೆಂಗಳೂರಿನ ಕಲಾಗ್ರಾಮ ಮಾದರಿಯಲ್ಲಿ ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ ಸ್ಥಾಪಿಸಬೇಕು. ಸ್ಮಾರ್ಟ್ ಸಿಟಿಯ ಯೋಜನೆಯ ಒಳಗೆ ಈ ಯೋಜನಯನ್ನೂ ತರಬಹುದು.

3. ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ : ಆಧುನಿಕ ಸವಲತ್ತುಗಳು ಮತ್ತು ಅದರ ಉಸ್ತುವಾರಿ ಸಮಿತಿಯಲ್ಲಿ ರಂಗತಜ್ಞರನ್ನು ಸೇರಿಸುವುದು. ರಂಗಮಂದಿರದ ನಿರ್ವಹಣೆಗೆ ರಂಗಭೂಮಿಯ ಪದವೀದರರನ್ನು ನೇಮಿಸುವುದು.

4. ತುಮಕೂರಿನ 10 ತಾಲೂಕುಗಳಿಗೂ ಒಂದೊಂದು ಪುಟ್ಟ ರಂಗಮಂದಿರ : ಈಗಾಗಲೇ ಕೆಲವು ತಾಲ್ಲೂಕಿನಲ್ಲಿ ರಂಗಮಂದಿರ ಕಟ್ಟುತ್ತಿದ್ದರೆ ಅದರ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ನೆರವು ಕೂಡುವುದು.

5. ಪ್ರತಿವರ್ಷ ಬಯಲುಸೀಮೆ ನಾಟಕೋತ್ಸವ : ತಾಲ್ಲೂಕಿನ ಆಯ್ದ ನಾಟಕಗಳ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಅಪರೂಪದ ನಾಟಕಗಳನ್ನೊಳಗೊಂಡ ನಾಟಕೋತ್ಸವ ಏರ್ಪಡಿಸುವುದು. ಒಂದೊಂದು ವರ್ಷ ಒಂದೊಂದು ತಾಲ್ಲೂಕಿನಲ್ಲಿ ಏರ್ಪಡಿಸುವುದು.

ಈ ಬೇಡಿಕೆಗಳಿಗೆ ಸ್ಮಂದಿಸಿ ನಮ್ಮ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ಅಭಿವ್ಯಕ್ತಿಯನ್ನು ಶ್ರೀಮಂತಗೊಳಿಸಲು ಒತ್ತಾಸೆಯಾಗಿ ನಿಲ್ಲಬೇಕೆಂದು ಕಲಾವಿದರ ಒಕ್ಕೂಟ ಒತ್ತಾಯಿಸಿದೆ. ರಂಗಭೂಮಿ ಕಲಾವಿದರ ಒಕ್ಕೂಟದ ಪರವಾಗಿ ಅಪರ ಜಿಲ್ಲಾಧಿಕಾರಿಗಳಾದ ಕೆ.ಚನ್ನಬಸಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಒಕ್ಕೂಟದ ಸಂಚಾಲಕರಾದ ನಟರಾಜ್ ಹೊನ್ನವಳ್ಳಿ, ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜನಾಥ್, ಉಗಮ ಶ್ರೀನಿವಾಸ್, ನಾಟಕ ಮನೆ ಮಹಲಿಂಗು, ಚನ್ನಬಸಯ್ಯ ಗುಬ್ಬಿ, ದಿನೇಶ್ ಕುಮಾರ್, ಚೇತನ್, ಸುನೀಲ ಜಾರಂದಗುಡ್ಡೆ, ರಂಗಾಯಣ ರವಿಶಂಕರ್, ನಿಜಲಿಂಗಪ್ಪ ಮತ್ತು ಹೋರಾಟಗಾರರಾದ ಉಜ್ಜಜಿ ರಾಜಣ್ಣ, ತಿಪಟೂರು ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...