Homeಕರ್ನಾಟಕತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

- Advertisement -
- Advertisement -

ನಾಟಕ ಪ್ರದರ್ಶನಗಳು ಉತ್ಕೃಷ್ಟವಾಗಿ ಪ್ರೇಕ್ಷಕರನ್ನು ತಲುಪುವಂತೆ ಗುಬ್ಬಿ ವೀರಣ್ಣವನ್ನು ವಿನ್ಯಾಸಗೊಳಿಸಿ, ‘ಬಯಲು ಸೀಮೆ ರಂಗಾಯಣ’ ಸ್ಥಾಪಿಸಿ ಎಂದು ತುಮಕೂರು ರಂಗ ಕಲಾವಿದರ ಒಕ್ಕೂಟವು ಒತ್ತಾಯಿಸಿದೆ.

ತುಮಕೂರು ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕ್ರೀಯಾಶೀಲ ರಂಗಭೂಮಿಯನ್ನು ಒಳಗೊಂಡ ಜಿಲ್ಲೆಯಾಗಿದೆ. ಇಲ್ಲಿ ಜನಪದ ರಂಗಭೂಮಿಯಾದ ಮೂಢಲಪಾಯ, ಬಯಲಾಟ, ಪೌರಾಣಿಕ ನಾಟಕಗಳು ಮತ್ತು ಆಧುನಿಕ ನಾಟಕಗಳು ಹೆಚ್ಚಿನದಾಗಿ ನಡೆಯುತ್ತಿವೆ. ಆದರೆ ಇತ್ತಿಚಿಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾದ ತುಮಕೂರು ಜಿಲ್ಲೆಯ ರಂಗಭೂಮಿ ಸಾಕಷ್ಟು ಸಾಧ್ಯತೆಗಳನ್ನು ಕಳೆದುಕೊಳ್ಳುತ್ತಿದೆ ಎಂದು ಕಲಾವಿದರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಗುಬ್ಬಿ ವೀರಣ್ಣ, ನರಸಿಂಹರಾಜು ಅಂತಹ ಹಲುವು ರಂಗಭೂಮಿ ಮತ್ತು ಸಿನೆಮಾ ದಿಗ್ಗಜರ ಜಿಲ್ಲೆ ಇನ್ನಷ್ಟು ಹೆಚ್ಚು ಪ್ರತಿಭಾವಂತರನ್ನು ಹೊರತರುವ ವಾತವಾರಣವನ್ನು ಸರ್ಕಾರ ಸೃಷ್ಟಿಸುವ ಅವಶ್ಯಕತೆಯಿದೆ. ಆದರೆ ಇಲ್ಲಿನ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನ ಇಲ್ಲಿ ರಂಗಭೂಮಿ ಚಟುವಟಿಕೆಗಳು ಇನ್ನಷ್ಟು ಚಿಗುರಲು ತಡೆಯಾಗಿದ್ದಾರೆ. ನಗರದ ಗುಬ್ಬಿ ವೀರಣ್ಣ ರಂಗಮಂದಿರವನ್ನು ಇಲಾಖೆ ಪ್ರತಿವರ್ಷ ಲಕ್ಷ ಲಕ್ಷ ಖರ್ಚು ಮಾಡಿ ರಿಪೇರಿ ಮಾಡುತ್ತಿದ್ದರು ಸಹ ಇದುವರೆಗೂ ಆಧುನಿಕ ರಂಗಭೂಮಿಯ ನಾಟಕಗಳನ್ನು ಪ್ರದರ್ಶಿಸಲು ಯೋಗ್ಯವಾಗಿಲ್ಲ ಎಂದು ಹಲವಾರು ಆರೋಪಗಳು ಬಂದಿವೆ.

ಇದೇ ಅಲ್ಲದೇ ಎಲ್ಲಾ ತಾಲ್ಲೂಕುಗಳಲ್ಲೂ ಉತ್ತಮವಾದ ರಂಗ ಮಂದಿರಗಳಿಲ್ಲ. ಇರುವ ರಂಗಮಂದಿರಗಳು ಬಳಸಲು ಯೋಗ್ಯವಲ್ಲದ ರೀತಿಯಲ್ಲಿ ಹಾಳಾಗಿವೆ. ಜಿಲ್ಲೆಯಲ್ಲಿ ಹೀಗಾಗಲೆ ಇರುವ ಹಲವು ರಂಗ ನಿರ್ದೇಶಕರು, ವಿನ್ಯಾಸಕಾರು, ನಟರು, ತಂತ್ರಜ್ಞರನ್ನು ಬಳಸಿಕೊಂಡು ಉತ್ತಮವಾದ ರಂಗಕಾರ್ಯ ಮಾಡಬಹುದಾಗಿದೆ. ಈ ಕುರಿತು ರಂಗಭೂಮಿ ಕಲಾವಿದರ ಒಕ್ಕೂಟ ಈ ಕೆಳಗಿನ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

1. ಜಿಲ್ಲೆಗೆ ರಂಗಾಯಣ : ರಾಜ್ಯದ ಹಾಗೂ ರಾಷ್ಟ್ರದ ರಂಪ್ರಯೋಗಗಳನ್ನು ನೋಡುವ, ಚರ್ಚಿಸುವ ಮೂಲಕ ಜಿಲ್ಲೆಯಲ್ಲಿಯೇ ಒಂದು ರೀತಿಯ ರಂಗ ಸಂವೇದನೆ ಬರುತ್ತದೆ. 20 ಜನ ಕಲಾವಿದರಿಗೆ ಕೆಲಸ ಸಿಗುತ್ತದೆ. ತುಮಕೂರು ಜಿಲ್ಲೆಯ ಘನತೆ ಹೆಚ್ಚಾಗುತ್ತದೆ. ಹಾಗಾಗಿ ಜಿಲ್ಲೆಗೆ ‘ಬಯಲು ಸೀಮೆ ರಂಗಾಯಣ’ ಒದಗಿಸಬೇಕು.

2. ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ : ಇಲ್ಲಿ ಸಮಾರು 500 ಜನ ಕುಳಿತುಕೊಳ್ಳುವ ರಂಗಮಂದಿರ, ಬಯಲು ರಂಗಮಂದಿರ ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರ, ತಾಲೀಮು ಕೊಠಡಿ, ಮಕ್ಕಳ ರಂಗಭೂಮಿ ಚಟುವಟಿಕೆಗಳಿಗೆ ಸ್ಥಳ ರಂಗ ಗ್ರಂಥಾಲಯ, ಕ್ಯಾಂಟೀನ್, ಹೊರಗಿನಿಂದ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಅತಿಥಿ ಗೃಹ , ಆಡಿಯೋ , ವಿಷುವಲ್ ಸ್ಟುಡಿಯೋ, ಇದಕ್ಕಾಗಿ 3 ರಿಂದ 5 ಎಕರೆಯಲ್ಲಿ ಬೆಂಗಳೂರಿನ ಕಲಾಗ್ರಾಮ ಮಾದರಿಯಲ್ಲಿ ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ ಸ್ಥಾಪಿಸಬೇಕು. ಸ್ಮಾರ್ಟ್ ಸಿಟಿಯ ಯೋಜನೆಯ ಒಳಗೆ ಈ ಯೋಜನಯನ್ನೂ ತರಬಹುದು.

3. ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ : ಆಧುನಿಕ ಸವಲತ್ತುಗಳು ಮತ್ತು ಅದರ ಉಸ್ತುವಾರಿ ಸಮಿತಿಯಲ್ಲಿ ರಂಗತಜ್ಞರನ್ನು ಸೇರಿಸುವುದು. ರಂಗಮಂದಿರದ ನಿರ್ವಹಣೆಗೆ ರಂಗಭೂಮಿಯ ಪದವೀದರರನ್ನು ನೇಮಿಸುವುದು.

4. ತುಮಕೂರಿನ 10 ತಾಲೂಕುಗಳಿಗೂ ಒಂದೊಂದು ಪುಟ್ಟ ರಂಗಮಂದಿರ : ಈಗಾಗಲೇ ಕೆಲವು ತಾಲ್ಲೂಕಿನಲ್ಲಿ ರಂಗಮಂದಿರ ಕಟ್ಟುತ್ತಿದ್ದರೆ ಅದರ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ನೆರವು ಕೂಡುವುದು.

5. ಪ್ರತಿವರ್ಷ ಬಯಲುಸೀಮೆ ನಾಟಕೋತ್ಸವ : ತಾಲ್ಲೂಕಿನ ಆಯ್ದ ನಾಟಕಗಳ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಅಪರೂಪದ ನಾಟಕಗಳನ್ನೊಳಗೊಂಡ ನಾಟಕೋತ್ಸವ ಏರ್ಪಡಿಸುವುದು. ಒಂದೊಂದು ವರ್ಷ ಒಂದೊಂದು ತಾಲ್ಲೂಕಿನಲ್ಲಿ ಏರ್ಪಡಿಸುವುದು.

ಈ ಬೇಡಿಕೆಗಳಿಗೆ ಸ್ಮಂದಿಸಿ ನಮ್ಮ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ಅಭಿವ್ಯಕ್ತಿಯನ್ನು ಶ್ರೀಮಂತಗೊಳಿಸಲು ಒತ್ತಾಸೆಯಾಗಿ ನಿಲ್ಲಬೇಕೆಂದು ಕಲಾವಿದರ ಒಕ್ಕೂಟ ಒತ್ತಾಯಿಸಿದೆ. ರಂಗಭೂಮಿ ಕಲಾವಿದರ ಒಕ್ಕೂಟದ ಪರವಾಗಿ ಅಪರ ಜಿಲ್ಲಾಧಿಕಾರಿಗಳಾದ ಕೆ.ಚನ್ನಬಸಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಒಕ್ಕೂಟದ ಸಂಚಾಲಕರಾದ ನಟರಾಜ್ ಹೊನ್ನವಳ್ಳಿ, ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜನಾಥ್, ಉಗಮ ಶ್ರೀನಿವಾಸ್, ನಾಟಕ ಮನೆ ಮಹಲಿಂಗು, ಚನ್ನಬಸಯ್ಯ ಗುಬ್ಬಿ, ದಿನೇಶ್ ಕುಮಾರ್, ಚೇತನ್, ಸುನೀಲ ಜಾರಂದಗುಡ್ಡೆ, ರಂಗಾಯಣ ರವಿಶಂಕರ್, ನಿಜಲಿಂಗಪ್ಪ ಮತ್ತು ಹೋರಾಟಗಾರರಾದ ಉಜ್ಜಜಿ ರಾಜಣ್ಣ, ತಿಪಟೂರು ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...