Homeಕರ್ನಾಟಕತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

- Advertisement -
- Advertisement -

ನಾಟಕ ಪ್ರದರ್ಶನಗಳು ಉತ್ಕೃಷ್ಟವಾಗಿ ಪ್ರೇಕ್ಷಕರನ್ನು ತಲುಪುವಂತೆ ಗುಬ್ಬಿ ವೀರಣ್ಣವನ್ನು ವಿನ್ಯಾಸಗೊಳಿಸಿ, ‘ಬಯಲು ಸೀಮೆ ರಂಗಾಯಣ’ ಸ್ಥಾಪಿಸಿ ಎಂದು ತುಮಕೂರು ರಂಗ ಕಲಾವಿದರ ಒಕ್ಕೂಟವು ಒತ್ತಾಯಿಸಿದೆ.

ತುಮಕೂರು ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕ್ರೀಯಾಶೀಲ ರಂಗಭೂಮಿಯನ್ನು ಒಳಗೊಂಡ ಜಿಲ್ಲೆಯಾಗಿದೆ. ಇಲ್ಲಿ ಜನಪದ ರಂಗಭೂಮಿಯಾದ ಮೂಢಲಪಾಯ, ಬಯಲಾಟ, ಪೌರಾಣಿಕ ನಾಟಕಗಳು ಮತ್ತು ಆಧುನಿಕ ನಾಟಕಗಳು ಹೆಚ್ಚಿನದಾಗಿ ನಡೆಯುತ್ತಿವೆ. ಆದರೆ ಇತ್ತಿಚಿಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾದ ತುಮಕೂರು ಜಿಲ್ಲೆಯ ರಂಗಭೂಮಿ ಸಾಕಷ್ಟು ಸಾಧ್ಯತೆಗಳನ್ನು ಕಳೆದುಕೊಳ್ಳುತ್ತಿದೆ ಎಂದು ಕಲಾವಿದರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಗುಬ್ಬಿ ವೀರಣ್ಣ, ನರಸಿಂಹರಾಜು ಅಂತಹ ಹಲುವು ರಂಗಭೂಮಿ ಮತ್ತು ಸಿನೆಮಾ ದಿಗ್ಗಜರ ಜಿಲ್ಲೆ ಇನ್ನಷ್ಟು ಹೆಚ್ಚು ಪ್ರತಿಭಾವಂತರನ್ನು ಹೊರತರುವ ವಾತವಾರಣವನ್ನು ಸರ್ಕಾರ ಸೃಷ್ಟಿಸುವ ಅವಶ್ಯಕತೆಯಿದೆ. ಆದರೆ ಇಲ್ಲಿನ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನ ಇಲ್ಲಿ ರಂಗಭೂಮಿ ಚಟುವಟಿಕೆಗಳು ಇನ್ನಷ್ಟು ಚಿಗುರಲು ತಡೆಯಾಗಿದ್ದಾರೆ. ನಗರದ ಗುಬ್ಬಿ ವೀರಣ್ಣ ರಂಗಮಂದಿರವನ್ನು ಇಲಾಖೆ ಪ್ರತಿವರ್ಷ ಲಕ್ಷ ಲಕ್ಷ ಖರ್ಚು ಮಾಡಿ ರಿಪೇರಿ ಮಾಡುತ್ತಿದ್ದರು ಸಹ ಇದುವರೆಗೂ ಆಧುನಿಕ ರಂಗಭೂಮಿಯ ನಾಟಕಗಳನ್ನು ಪ್ರದರ್ಶಿಸಲು ಯೋಗ್ಯವಾಗಿಲ್ಲ ಎಂದು ಹಲವಾರು ಆರೋಪಗಳು ಬಂದಿವೆ.

ಇದೇ ಅಲ್ಲದೇ ಎಲ್ಲಾ ತಾಲ್ಲೂಕುಗಳಲ್ಲೂ ಉತ್ತಮವಾದ ರಂಗ ಮಂದಿರಗಳಿಲ್ಲ. ಇರುವ ರಂಗಮಂದಿರಗಳು ಬಳಸಲು ಯೋಗ್ಯವಲ್ಲದ ರೀತಿಯಲ್ಲಿ ಹಾಳಾಗಿವೆ. ಜಿಲ್ಲೆಯಲ್ಲಿ ಹೀಗಾಗಲೆ ಇರುವ ಹಲವು ರಂಗ ನಿರ್ದೇಶಕರು, ವಿನ್ಯಾಸಕಾರು, ನಟರು, ತಂತ್ರಜ್ಞರನ್ನು ಬಳಸಿಕೊಂಡು ಉತ್ತಮವಾದ ರಂಗಕಾರ್ಯ ಮಾಡಬಹುದಾಗಿದೆ. ಈ ಕುರಿತು ರಂಗಭೂಮಿ ಕಲಾವಿದರ ಒಕ್ಕೂಟ ಈ ಕೆಳಗಿನ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

1. ಜಿಲ್ಲೆಗೆ ರಂಗಾಯಣ : ರಾಜ್ಯದ ಹಾಗೂ ರಾಷ್ಟ್ರದ ರಂಪ್ರಯೋಗಗಳನ್ನು ನೋಡುವ, ಚರ್ಚಿಸುವ ಮೂಲಕ ಜಿಲ್ಲೆಯಲ್ಲಿಯೇ ಒಂದು ರೀತಿಯ ರಂಗ ಸಂವೇದನೆ ಬರುತ್ತದೆ. 20 ಜನ ಕಲಾವಿದರಿಗೆ ಕೆಲಸ ಸಿಗುತ್ತದೆ. ತುಮಕೂರು ಜಿಲ್ಲೆಯ ಘನತೆ ಹೆಚ್ಚಾಗುತ್ತದೆ. ಹಾಗಾಗಿ ಜಿಲ್ಲೆಗೆ ‘ಬಯಲು ಸೀಮೆ ರಂಗಾಯಣ’ ಒದಗಿಸಬೇಕು.

2. ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ : ಇಲ್ಲಿ ಸಮಾರು 500 ಜನ ಕುಳಿತುಕೊಳ್ಳುವ ರಂಗಮಂದಿರ, ಬಯಲು ರಂಗಮಂದಿರ ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರ, ತಾಲೀಮು ಕೊಠಡಿ, ಮಕ್ಕಳ ರಂಗಭೂಮಿ ಚಟುವಟಿಕೆಗಳಿಗೆ ಸ್ಥಳ ರಂಗ ಗ್ರಂಥಾಲಯ, ಕ್ಯಾಂಟೀನ್, ಹೊರಗಿನಿಂದ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಅತಿಥಿ ಗೃಹ , ಆಡಿಯೋ , ವಿಷುವಲ್ ಸ್ಟುಡಿಯೋ, ಇದಕ್ಕಾಗಿ 3 ರಿಂದ 5 ಎಕರೆಯಲ್ಲಿ ಬೆಂಗಳೂರಿನ ಕಲಾಗ್ರಾಮ ಮಾದರಿಯಲ್ಲಿ ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ ಸ್ಥಾಪಿಸಬೇಕು. ಸ್ಮಾರ್ಟ್ ಸಿಟಿಯ ಯೋಜನೆಯ ಒಳಗೆ ಈ ಯೋಜನಯನ್ನೂ ತರಬಹುದು.

3. ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ : ಆಧುನಿಕ ಸವಲತ್ತುಗಳು ಮತ್ತು ಅದರ ಉಸ್ತುವಾರಿ ಸಮಿತಿಯಲ್ಲಿ ರಂಗತಜ್ಞರನ್ನು ಸೇರಿಸುವುದು. ರಂಗಮಂದಿರದ ನಿರ್ವಹಣೆಗೆ ರಂಗಭೂಮಿಯ ಪದವೀದರರನ್ನು ನೇಮಿಸುವುದು.

4. ತುಮಕೂರಿನ 10 ತಾಲೂಕುಗಳಿಗೂ ಒಂದೊಂದು ಪುಟ್ಟ ರಂಗಮಂದಿರ : ಈಗಾಗಲೇ ಕೆಲವು ತಾಲ್ಲೂಕಿನಲ್ಲಿ ರಂಗಮಂದಿರ ಕಟ್ಟುತ್ತಿದ್ದರೆ ಅದರ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ನೆರವು ಕೂಡುವುದು.

5. ಪ್ರತಿವರ್ಷ ಬಯಲುಸೀಮೆ ನಾಟಕೋತ್ಸವ : ತಾಲ್ಲೂಕಿನ ಆಯ್ದ ನಾಟಕಗಳ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಅಪರೂಪದ ನಾಟಕಗಳನ್ನೊಳಗೊಂಡ ನಾಟಕೋತ್ಸವ ಏರ್ಪಡಿಸುವುದು. ಒಂದೊಂದು ವರ್ಷ ಒಂದೊಂದು ತಾಲ್ಲೂಕಿನಲ್ಲಿ ಏರ್ಪಡಿಸುವುದು.

ಈ ಬೇಡಿಕೆಗಳಿಗೆ ಸ್ಮಂದಿಸಿ ನಮ್ಮ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ಅಭಿವ್ಯಕ್ತಿಯನ್ನು ಶ್ರೀಮಂತಗೊಳಿಸಲು ಒತ್ತಾಸೆಯಾಗಿ ನಿಲ್ಲಬೇಕೆಂದು ಕಲಾವಿದರ ಒಕ್ಕೂಟ ಒತ್ತಾಯಿಸಿದೆ. ರಂಗಭೂಮಿ ಕಲಾವಿದರ ಒಕ್ಕೂಟದ ಪರವಾಗಿ ಅಪರ ಜಿಲ್ಲಾಧಿಕಾರಿಗಳಾದ ಕೆ.ಚನ್ನಬಸಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಒಕ್ಕೂಟದ ಸಂಚಾಲಕರಾದ ನಟರಾಜ್ ಹೊನ್ನವಳ್ಳಿ, ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜನಾಥ್, ಉಗಮ ಶ್ರೀನಿವಾಸ್, ನಾಟಕ ಮನೆ ಮಹಲಿಂಗು, ಚನ್ನಬಸಯ್ಯ ಗುಬ್ಬಿ, ದಿನೇಶ್ ಕುಮಾರ್, ಚೇತನ್, ಸುನೀಲ ಜಾರಂದಗುಡ್ಡೆ, ರಂಗಾಯಣ ರವಿಶಂಕರ್, ನಿಜಲಿಂಗಪ್ಪ ಮತ್ತು ಹೋರಾಟಗಾರರಾದ ಉಜ್ಜಜಿ ರಾಜಣ್ಣ, ತಿಪಟೂರು ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...