Homeಕರ್ನಾಟಕತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

- Advertisement -
- Advertisement -

ನಾಟಕ ಪ್ರದರ್ಶನಗಳು ಉತ್ಕೃಷ್ಟವಾಗಿ ಪ್ರೇಕ್ಷಕರನ್ನು ತಲುಪುವಂತೆ ಗುಬ್ಬಿ ವೀರಣ್ಣವನ್ನು ವಿನ್ಯಾಸಗೊಳಿಸಿ, ‘ಬಯಲು ಸೀಮೆ ರಂಗಾಯಣ’ ಸ್ಥಾಪಿಸಿ ಎಂದು ತುಮಕೂರು ರಂಗ ಕಲಾವಿದರ ಒಕ್ಕೂಟವು ಒತ್ತಾಯಿಸಿದೆ.

ತುಮಕೂರು ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕ್ರೀಯಾಶೀಲ ರಂಗಭೂಮಿಯನ್ನು ಒಳಗೊಂಡ ಜಿಲ್ಲೆಯಾಗಿದೆ. ಇಲ್ಲಿ ಜನಪದ ರಂಗಭೂಮಿಯಾದ ಮೂಢಲಪಾಯ, ಬಯಲಾಟ, ಪೌರಾಣಿಕ ನಾಟಕಗಳು ಮತ್ತು ಆಧುನಿಕ ನಾಟಕಗಳು ಹೆಚ್ಚಿನದಾಗಿ ನಡೆಯುತ್ತಿವೆ. ಆದರೆ ಇತ್ತಿಚಿಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾದ ತುಮಕೂರು ಜಿಲ್ಲೆಯ ರಂಗಭೂಮಿ ಸಾಕಷ್ಟು ಸಾಧ್ಯತೆಗಳನ್ನು ಕಳೆದುಕೊಳ್ಳುತ್ತಿದೆ ಎಂದು ಕಲಾವಿದರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಗುಬ್ಬಿ ವೀರಣ್ಣ, ನರಸಿಂಹರಾಜು ಅಂತಹ ಹಲುವು ರಂಗಭೂಮಿ ಮತ್ತು ಸಿನೆಮಾ ದಿಗ್ಗಜರ ಜಿಲ್ಲೆ ಇನ್ನಷ್ಟು ಹೆಚ್ಚು ಪ್ರತಿಭಾವಂತರನ್ನು ಹೊರತರುವ ವಾತವಾರಣವನ್ನು ಸರ್ಕಾರ ಸೃಷ್ಟಿಸುವ ಅವಶ್ಯಕತೆಯಿದೆ. ಆದರೆ ಇಲ್ಲಿನ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನ ಇಲ್ಲಿ ರಂಗಭೂಮಿ ಚಟುವಟಿಕೆಗಳು ಇನ್ನಷ್ಟು ಚಿಗುರಲು ತಡೆಯಾಗಿದ್ದಾರೆ. ನಗರದ ಗುಬ್ಬಿ ವೀರಣ್ಣ ರಂಗಮಂದಿರವನ್ನು ಇಲಾಖೆ ಪ್ರತಿವರ್ಷ ಲಕ್ಷ ಲಕ್ಷ ಖರ್ಚು ಮಾಡಿ ರಿಪೇರಿ ಮಾಡುತ್ತಿದ್ದರು ಸಹ ಇದುವರೆಗೂ ಆಧುನಿಕ ರಂಗಭೂಮಿಯ ನಾಟಕಗಳನ್ನು ಪ್ರದರ್ಶಿಸಲು ಯೋಗ್ಯವಾಗಿಲ್ಲ ಎಂದು ಹಲವಾರು ಆರೋಪಗಳು ಬಂದಿವೆ.

ಇದೇ ಅಲ್ಲದೇ ಎಲ್ಲಾ ತಾಲ್ಲೂಕುಗಳಲ್ಲೂ ಉತ್ತಮವಾದ ರಂಗ ಮಂದಿರಗಳಿಲ್ಲ. ಇರುವ ರಂಗಮಂದಿರಗಳು ಬಳಸಲು ಯೋಗ್ಯವಲ್ಲದ ರೀತಿಯಲ್ಲಿ ಹಾಳಾಗಿವೆ. ಜಿಲ್ಲೆಯಲ್ಲಿ ಹೀಗಾಗಲೆ ಇರುವ ಹಲವು ರಂಗ ನಿರ್ದೇಶಕರು, ವಿನ್ಯಾಸಕಾರು, ನಟರು, ತಂತ್ರಜ್ಞರನ್ನು ಬಳಸಿಕೊಂಡು ಉತ್ತಮವಾದ ರಂಗಕಾರ್ಯ ಮಾಡಬಹುದಾಗಿದೆ. ಈ ಕುರಿತು ರಂಗಭೂಮಿ ಕಲಾವಿದರ ಒಕ್ಕೂಟ ಈ ಕೆಳಗಿನ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

1. ಜಿಲ್ಲೆಗೆ ರಂಗಾಯಣ : ರಾಜ್ಯದ ಹಾಗೂ ರಾಷ್ಟ್ರದ ರಂಪ್ರಯೋಗಗಳನ್ನು ನೋಡುವ, ಚರ್ಚಿಸುವ ಮೂಲಕ ಜಿಲ್ಲೆಯಲ್ಲಿಯೇ ಒಂದು ರೀತಿಯ ರಂಗ ಸಂವೇದನೆ ಬರುತ್ತದೆ. 20 ಜನ ಕಲಾವಿದರಿಗೆ ಕೆಲಸ ಸಿಗುತ್ತದೆ. ತುಮಕೂರು ಜಿಲ್ಲೆಯ ಘನತೆ ಹೆಚ್ಚಾಗುತ್ತದೆ. ಹಾಗಾಗಿ ಜಿಲ್ಲೆಗೆ ‘ಬಯಲು ಸೀಮೆ ರಂಗಾಯಣ’ ಒದಗಿಸಬೇಕು.

2. ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ : ಇಲ್ಲಿ ಸಮಾರು 500 ಜನ ಕುಳಿತುಕೊಳ್ಳುವ ರಂಗಮಂದಿರ, ಬಯಲು ರಂಗಮಂದಿರ ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರ, ತಾಲೀಮು ಕೊಠಡಿ, ಮಕ್ಕಳ ರಂಗಭೂಮಿ ಚಟುವಟಿಕೆಗಳಿಗೆ ಸ್ಥಳ ರಂಗ ಗ್ರಂಥಾಲಯ, ಕ್ಯಾಂಟೀನ್, ಹೊರಗಿನಿಂದ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಅತಿಥಿ ಗೃಹ , ಆಡಿಯೋ , ವಿಷುವಲ್ ಸ್ಟುಡಿಯೋ, ಇದಕ್ಕಾಗಿ 3 ರಿಂದ 5 ಎಕರೆಯಲ್ಲಿ ಬೆಂಗಳೂರಿನ ಕಲಾಗ್ರಾಮ ಮಾದರಿಯಲ್ಲಿ ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ ಸ್ಥಾಪಿಸಬೇಕು. ಸ್ಮಾರ್ಟ್ ಸಿಟಿಯ ಯೋಜನೆಯ ಒಳಗೆ ಈ ಯೋಜನಯನ್ನೂ ತರಬಹುದು.

3. ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ : ಆಧುನಿಕ ಸವಲತ್ತುಗಳು ಮತ್ತು ಅದರ ಉಸ್ತುವಾರಿ ಸಮಿತಿಯಲ್ಲಿ ರಂಗತಜ್ಞರನ್ನು ಸೇರಿಸುವುದು. ರಂಗಮಂದಿರದ ನಿರ್ವಹಣೆಗೆ ರಂಗಭೂಮಿಯ ಪದವೀದರರನ್ನು ನೇಮಿಸುವುದು.

4. ತುಮಕೂರಿನ 10 ತಾಲೂಕುಗಳಿಗೂ ಒಂದೊಂದು ಪುಟ್ಟ ರಂಗಮಂದಿರ : ಈಗಾಗಲೇ ಕೆಲವು ತಾಲ್ಲೂಕಿನಲ್ಲಿ ರಂಗಮಂದಿರ ಕಟ್ಟುತ್ತಿದ್ದರೆ ಅದರ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ನೆರವು ಕೂಡುವುದು.

5. ಪ್ರತಿವರ್ಷ ಬಯಲುಸೀಮೆ ನಾಟಕೋತ್ಸವ : ತಾಲ್ಲೂಕಿನ ಆಯ್ದ ನಾಟಕಗಳ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಅಪರೂಪದ ನಾಟಕಗಳನ್ನೊಳಗೊಂಡ ನಾಟಕೋತ್ಸವ ಏರ್ಪಡಿಸುವುದು. ಒಂದೊಂದು ವರ್ಷ ಒಂದೊಂದು ತಾಲ್ಲೂಕಿನಲ್ಲಿ ಏರ್ಪಡಿಸುವುದು.

ಈ ಬೇಡಿಕೆಗಳಿಗೆ ಸ್ಮಂದಿಸಿ ನಮ್ಮ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ಅಭಿವ್ಯಕ್ತಿಯನ್ನು ಶ್ರೀಮಂತಗೊಳಿಸಲು ಒತ್ತಾಸೆಯಾಗಿ ನಿಲ್ಲಬೇಕೆಂದು ಕಲಾವಿದರ ಒಕ್ಕೂಟ ಒತ್ತಾಯಿಸಿದೆ. ರಂಗಭೂಮಿ ಕಲಾವಿದರ ಒಕ್ಕೂಟದ ಪರವಾಗಿ ಅಪರ ಜಿಲ್ಲಾಧಿಕಾರಿಗಳಾದ ಕೆ.ಚನ್ನಬಸಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಒಕ್ಕೂಟದ ಸಂಚಾಲಕರಾದ ನಟರಾಜ್ ಹೊನ್ನವಳ್ಳಿ, ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜನಾಥ್, ಉಗಮ ಶ್ರೀನಿವಾಸ್, ನಾಟಕ ಮನೆ ಮಹಲಿಂಗು, ಚನ್ನಬಸಯ್ಯ ಗುಬ್ಬಿ, ದಿನೇಶ್ ಕುಮಾರ್, ಚೇತನ್, ಸುನೀಲ ಜಾರಂದಗುಡ್ಡೆ, ರಂಗಾಯಣ ರವಿಶಂಕರ್, ನಿಜಲಿಂಗಪ್ಪ ಮತ್ತು ಹೋರಾಟಗಾರರಾದ ಉಜ್ಜಜಿ ರಾಜಣ್ಣ, ತಿಪಟೂರು ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...