Homeಮುಖಪುಟಪಕ್ಷ ವಿರೋಧಿ ಚಟುವಟಿಕೆ: ಬಿಎಸ್ಪಿಯಿಂದ ಸಂಸದ ಡ್ಯಾನಿಶ್ ಅಲಿ ಅಮಾನತು

ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ಪಿಯಿಂದ ಸಂಸದ ಡ್ಯಾನಿಶ್ ಅಲಿ ಅಮಾನತು

- Advertisement -
- Advertisement -

ಕೆಲ ತಿಂಗಳ ಹಿಂದೆ ಸಂಸತ್ತಿನಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿಯಿಂದ ಅವಾಚ್ಯ ಶಬ್ದಗಳ ನಿಂದನೆ ಎದುರಿಸಿ ಸುದ್ದಿಯಾಗಿದ್ದ ಉತ್ತರ ಪ್ರದೇಶದ ಅಮ್ರೋಹ್ ಸಂಸದ ಡ್ಯಾನಿಶ್ ಅಲಿ ಅವರನ್ನು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷದಿಂದ (ಬಿಎಸ್ಪಿ) ಅಮಾನತುಗೊಳಿಸಲಾಗಿದೆ.

“ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಕ್ಕಾಗಿ ಸಂಸದ ಡ್ಯಾನಿಶ್ ಅಲಿ ಅವರನ್ನು ಇಂದು(ನವೆಂಬರ್‌ 9,2023) ಪಕ್ಷದಿಂದ ಅಮಾನತುಗೊಳಿಸಲಾಗಿದೆ” ಎಂದು ಬಿಎಸ್ಪಿ ಪ್ರಕಟನೆಯಲ್ಲಿ ತಿಳಿಸಿದೆ.

“ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ನಿಮಗೆ ಮೊದಲೇ ಸೂಚನೆ ನೀಡಲಾಗಿತ್ತು. ನೀವು ಯಾವಾಗಲೂ ಪಕ್ಷದ ಮಾರ್ಗವನ್ನು ಅನುಸರಿಸುತ್ತೀರಿ ಎಂದು ಭರವಸೆ ನೀಡಿದ ದೇವೇಗೌಡರ ಒತ್ತಾಯದ ಮೇರೆಗೆ ನಿಮಗೆ ಪಕ್ಷದಿಂದ ಟಿಕೆಟ್ ನೀಡಲಾಗಿತ್ತು. ಆದರೆ, ಪಕ್ಷಕ್ಕೆ ಸೇರ್ಪಡೆಗೊಳ್ಳುವಾಗ ನೀಡಿದ ಭರವಸೆಗಳನ್ನು ನೀವು ಮರೆತಿದ್ದೀರಿ. ಹೀಗಾಗಿ ನಿಮ್ಮನ್ನು ಅಮಾನತು ಮಾಡಲಾಗುತ್ತಿದೆ” ಎಂದು ಡ್ಯಾನಿಶ್ ಅಲಿ ಅವರಿಗೆ ನೀಡಿದ ನೋಟಿಸ್‌ನಲ್ಲಿ ಬಿಎಸ್ಪಿ ಹೇಳಿದೆ. ಸಂಸದರ ಅಮಾನತಿಗೆ ಯಾವುದೇ ನಿರ್ದಿಷ್ಟ ಕಾರಣ ನೋಟಿಸ್‌ನಲ್ಲಿ ಉಲ್ಲೇಖಿಸಿಲ್ಲ” ಎಂದು ಹಿಂದುಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಬಿಜೆಪಿ ಸಂಸದ ರಮೇಶ್ ಬಿಧುರಿಯಿಂದ ಆಕ್ಷೇಪಾರ್ಹ ನಿಂದನೆ ಎದುರಿಸಿದ ಬಳಿಕ ಡ್ಯಾನಿಶ್ ಅಲಿ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಹಲವರು ರಮೇಶ್ ಬಿಧುರಿ ಹೇಳಿಕೆಯನ್ನು ಖಂಡಿಸಿದ್ದರು. ಡ್ಯಾನಿಶ್ ಅಲಿ ಬೆನ್ನಿಗೆ ನಿಂತಿದ್ದರು.

ನಿನ್ನೆ (ಡಿ.8) ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಿದ ಬಳಿಕ ಪ್ರತಿಭಟಿಸಿದವರಲ್ಲಿ ಡ್ಯಾನಿಶ್ ಅಲಿ ಮುಂಚೂಣಿಯಲ್ಲಿದ್ದರು. ತಾನು ಸಂಸತ್‌ನಲ್ಲಿ ನಿಂದನೆ ಎದುರಿಸಿದ್ದಾಗ ಧ್ವನಿಯೆತ್ತಿದ್ದ ಮಹುವಾ ಅವರಿಗೆ ಬೆಂಬಲ ವ್ಯಕ್ತಪಡಿಸಿ ಡ್ಯಾನಿಶ್ ಅಲಿ ಸಂಸತ್ತಿನ ಮುಂದೆ ಪ್ರತಿಭಟಿಸಿದ್ದರು. ಆದರೆ, ಇಂದು ಅವರನ್ನೇ ಪಕ್ಷ ಅಮಾನತ್ತು ಮಾಡಿದೆ.

ಗಮನಾರ್ಹ ಸಂಗತಿಯೆಂದರೆ ಮಾಯಾವತಿ ನೇತೃತ್ವದ ಬಿಎಸ್ಪಿ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಈ ಎರಡೂ ಒಕ್ಕೂಟಗಳನ್ನು ಸೇರಿಲ್ಲ. ಡ್ಯಾನಿಶ್ ಅಲಿ ಇಂಡಿಯಾ ಒಕ್ಕೂಟದ ನಾಯಕರ ಜೊತೆ ಕಾಣಿಸಿಕೊಂಡಿದ್ದಕ್ಕೆ ಪಕ್ಷದಿಂದ ಮಾನತು ಮಾಡಿರಬಹುದಾ? ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಯಾಚಿಸಿದ ಬಿಜೆಪಿ ಸಂಸದ ರಮೇಶ್ ಬಿಧುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...