Homeಮುಖಪುಟಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

ಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ ಬಳಕೆಗೆ ಆಗ್ರಹಿಸಿದ್ದು, ಇವಿಎಂಗಳನ್ನು ನೇರವಾಗಿ ಉಲ್ಲೇಖಿಸದೆ ಈ ಯಂತ್ರಗಳು ಮತ್ತು ಮತದಾನದ ಫಲಿತಾಂಶಗಳು ಜನರ ಮನಸ್ಸಿನಲ್ಲಿ ಅಪನಂಬಿಕೆಯ ಭಾವನೆಯನ್ನು ಮೂಡಿಸಿವೆ ಎಂದು ಹೇಳಿದ್ದಾರೆ.

ಅಮೆರಿಕ ಚುನಾವಣೆಯ ಬಗ್ಗೆ ಉದಾಹರಣೆಯನ್ನು ನೀಡಿದ ಯಾದವ್, ಭಾರತವು ಬರ್ಗರ್, ಪಿಝ್ಝಾ ಮತ್ತು ಜೀನ್ಸ್‌ನಲ್ಲಿ ಅಮೆರಿಕನ್ನರನ್ನು ಅನುಸರಿಸುತ್ತಿದೆ. ಅದರಂತೆ ಬ್ಯಾಲೆಟ್ ಪೇಪರ್‌ಗಳ ಬಳಕೆಯನ್ನು ಕೂಡ ಅನುಸರಿಸಬೇಕು ಎಂದು ಹೇಳಿದ್ದಾರೆ.

ನಾವು ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುತ್ತೇವೆ ಎಂದು ನಾನು ಹಲವಾರು ಬಾರಿ ಹೇಳಿದ್ದೆ. ನಾವು ತಂತ್ರಜ್ಞಾನದೊಂದಿಗೆ ಬೆಳೆದಿದ್ದೇವೆ. ಯುಪಿಯಲ್ಲಿ ಎಸ್‌ಪಿ ಸರ್ಕಾರವು ಗರಿಷ್ಠ ಸಂಖ್ಯೆಯ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದೆ ಎಂದು ಹೇಳಿದ್ದಾರೆ.

ವಿಶ್ವದ ಅತ್ಯಂತ ಶಕ್ತಿಶಾಲಿ ದೇಶ ಅಮೆರಿಕ. ಅಲ್ಲಿ ತಿಂಗಳುಗಟ್ಟಲೆ ಮತದಾನ ಮಾಡಲಾಗುತ್ತದೆ ಮತ್ತು ನಂತರ ಎಣಿಕೆಗಾಗಿ ಸಮಯಾವಕಾಶವನ್ನು ತೆಗೆದುಕೊಳ್ಳಲಾಗುತ್ತದೆ. ಅಷ್ಟು ಪಾರದರ್ಶಕತೆಯಿಂದ ಮಾಡುತ್ತಾರೆ ಎಂದು ಹೇಳಿದ್ದಾರೆ.

140 ಕೋಟಿಗೂ ಹೆಚ್ಚು ಜನರು ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ನೀವು 3 ಗಂಟೆಗಳಲ್ಲಿ ಫಲಿತಾಂಶವನ್ನು ಏಕೆ ಬಯಸುತ್ತೀರಿ? ಒಂದು ತಿಂಗಳು ಏಕೆ ಎಣಿಕೆ ಮಾಡಬಾರದು? ಇಂದು ನಾವು ಬರ್ಗರ್, ಪಿಝ್ಝಾ ಅಥವಾ ಜೀನ್ಸ್ ಪ್ರತಿಯೊಂದು ವಿಚಾರದಲ್ಲೂ ಯುಎಸ್‌ನ್ನು ಅನುಸರಿಸುತ್ತಿದ್ದೇವೆ. ಅದರಂತೆ ನಾವು ಬ್ಯಾಲೆಟ್ ಪೇಪರ್‌ಗಳನ್ನು ಕೂಡ ನಕಲಿಸಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ಉತ್ತರಾಖಂಡದ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಯುಎಸ್ ಯಂತ್ರಗಳು ವಿಫಲವಾಗಿದ್ದವು. ದೇಶದ ಯುವಕರು ಪ್ರಾಣವನ್ನು ಉಳಿಸಿದರು. 2022ರಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಯಾದವ್‌ ಮತ್ತು ಮುಸ್ಲಿಂ ಸಮುದಾಯದ ಮತದಾರರನ್ನು ಸಾಮೂಹಿಕವಾಗಿ ಅಳಿಸಲಾಗಿದೆ ಎಂಬ ಆರೋಪವನ್ನು ಸಾಬೀತುಪಡಿಸಲು ಭಾರತದ ಚುನಾವಣಾ ಆಯೋಗವು ನನಗೆ ನೋಟಿಸ್ ನೀಡಿದೆ. ನಾನು ಮತದಾರರ ಹೆಸರುಗಳನ್ನು  ಅಫಿಡವಿಟ್‌ಗಳೊಂದಿಗೆ ಚುನಾವಣಾ ಆಯೋಗಕ್ಕೆ ಕಳುಹಿಸಿದ್ದೆ, ಆದರೆ ಆ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು  ಅವರು ಇದೇ ವೇಳೆ ಹೇಳಿದ್ದಾರೆ.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಇತರ ಹಲವು ನಾಯಕರು, ಡೇಟಾ ದುರ್ಬಳಕೆ ಮತ್ತು ತಿರುಚುವಿಕೆ ಸಾಧ್ಯತೆ ಇರುವುದರಿಂದ ಎಲೆಕ್ಟ್ರಾನಿಕ್ ಯಂತ್ರಗಳನ್ನು ಬಳಸಬಾರದು. ಹಲವು ದೇಶಗಳಲ್ಲಿ ಇವಿಎಂ ಬಳಸುತ್ತಿಲ್ಲ ಎಂದು ಹೇಳಿದ್ದರು. ಎಕ್ಸಿಟ್ ಪೋಲ್‌ಗಳು ಪ್ರತಿಪಕ್ಷಗಳ ಗೆಲುವಿನ ಭವಿಷ್ಯ ನುಡಿದಿರುವ ಛತ್ತೀಸ್‌ಗಢದಂತಹ ರಾಜ್ಯಗಳಲ್ಲಿಯೂ ಕೂಡ ಬಿಜೆಪಿ ಚುನಾವಣೆಯನ್ನು ಗೆದ್ದ ನಂತರ ಇವಿಎಂ ದುರ್ಬಳಕೆಯ ಬಗ್ಗೆ ಮತ್ತೆ ಪ್ರಶ್ನೆಗಳು ಕಾಡುತ್ತಿದೆ.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...