Homeಮುಖಪುಟನಾಗಾ ಮಹಿಳೆಯ ಹತ್ಯೆ: 9 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ನಾಗಾ ಮಹಿಳೆಯ ಹತ್ಯೆ: 9 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರದ ವೇಳೆ ನಾಗಾ ಜನಾಂಗದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ 9 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ಅಸ್ಸಾಂನ ಗುವಾಹಟಿಯಲ್ಲಿರುವ ವಿಶೇಷ ಸಿಬಿಐ ನ್ಯಾಯಾಧೀಶರ ಮುಂದೆ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಪ್ರಕರಣದ ಬಗ್ಗೆ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ.

ಆಗಸ್ಟ್‌ನಲ್ಲಿ ನಾಗಾ ಸಮುದಾಯದ ಮಹಿಳೆಯ ಹತ್ಯೆಯ ವಿಡಿಯೋ ವ್ಯಾಪಕವಾಗಿ ವೈರಲ್‌ ಆಗಿತ್ತು. ಹತ್ಯೆಗೀಡಾದ ಮಹಿಳೆಯ ಕುಟುಂಬವು ಜುಲೈ 23 ರಂದು ವೀಡಿಯೊವನ್ನು ನೋಡಿದೆ ಎಂದು ಹೇಳಿದೆ. ಆದರೆ ಆ.4ರಂದು ಈ ಕುರಿತ ವಿಡಿಯೋ ವ್ಯಾಪಕವಾಗಿ ವೈರಲ್‌ ಆಗಿತ್ತು. ವಿಡಿಯೋದಲ್ಲಿ ಲೂಸಿ ಮರಿಂಗ್(55) ಎಂಬ ಮಹಿಳೆಯ ತೆಲೆಗೆ 20 ಬಾರಿ ಶೂಟ್‌ ಮಾಡಲಾಗಿದೆ. ವಿಡಿಯೋದಲ್ಲಿ ಮಹಿಳೆಯ ತಲೆ ಛಿದ್ರವಾಗಿರುವುದು ಕಂಡು ಬಂದಿತ್ತು.

2023ರ ಜುಲೈ 15ರಂದು ಮಧ್ಯಾಹ್ನ 12:10ರ ಸುಮಾರಿಗೆ ಸಶಸ್ತ್ರದಾರಿ ದುಷ್ಕರ್ಮಿಗಳು ಸೇರಿದಂತೆ ಸುಮಾರು 100 ಜನರ ಗುಂಪೊಂದು ಸಾವೊಂಬಂಗ್ ಗೇಟ್‌ನಲ್ಲಿ ಒಬ್ಬ ಮಹಿಳೆಯನ್ನು ಅಪಹರಿಸಿದ್ದರು. ಅದೇ ದಿನ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆಯಲ್ಲಿ 9 ಆರೋಪಿಗಳು ಭಾಗಿಯಾಗಿರುವುದು ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಇತರ ಆರೋಪಿಗಳನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಂಫಾಲ್ ಪೂರ್ವ ಜಿಲ್ಲೆಯ ಲಾಮಲೈ ಪೊಲೀಸ್ ಠಾಣೆಯು ಮೊದಲು ಈ ಕುರಿತು ಪ್ರಕರಣ ದಾಖಲಿಸಿತ್ತು. ಬಳಿಕ ಮಣಿಪುರ ಸರ್ಕಾರ ಪ್ರಕರಣವನ್ನು ಸಿಬಿಐಗೆ ನೀಡಿತ್ತು. ಪ್ರಕರಣದಲ್ಲಿ ಐವರು ಮಹಿಳೆಯರು ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿತ್ತು.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಮಾರಿಂಗ್ ಬುಡಕಟ್ಟಿಗೆ ಸೇರಿದ ಲೂಸಿಯನ್ನು ಒಂದು ಗುಂಪು ಅಪಹರಿಸಿ ಇಂಫಾಲ್ ಪೂರ್ವದ ಸಾವೊಂಬಂಗ್‌ಗೆ ಕರೆಯದ್ದು ಹತ್ಯೆ ನಡೆಸಿದೆ. ಇಂಫಾಲ್ ಪಶ್ಚಿಮದಲ್ಲಿರುವ ತನ್ನ ಮನೆಯಿಂದ ಸುಮಾರು 10 ಕಿಮೀ ದೂರದಲ್ಲಿ ಘಟನೆ ನಡೆದಿದೆ.

ಮಣಿಪುರದಲ್ಲಿ ಮೈತೈ-ಕುಕಿ ಸಮುದಾಯದ ನಡುವಿನ ಸಂಘರ್ಷದ ನಡುವೆ ಮಹಿಳೆಯ ಹತ್ಯೆಯು ನಾಗಾ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಯುನೈಟೆಡ್ ನಾಗಾ ಕೌನ್ಸಿಲ್ ಕೃತ್ಯವನ್ನು ಖಂಡಿಸಿ ಪ್ರತಿಭಟಿಸಿತ್ತು. ಬಂದ್‌ಗೆ ಕರೆ ನೀಡಿತ್ತು.

ಮಣಿಪುರದಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದ ಹಿಂಸಾಚಾರದಲ್ಲಿ 194 ಜನರು ಮೃತಪಟ್ಟು 67,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಮಣಿಪುರದ ಜನಸಂಖ್ಯೆಯ ಶೇಕಡ 53ರಷ್ಟಿರುವ ಮೈತೈ ಸಮುದಾಯದವರು ಇಂಫಾಲ್‌ ಕಣಿವೆಯಲ್ಲಿ ವಾಸಿಸುತ್ತಿದ್ದು, ಇವರ ಮೀಸಲಾತಿ ಬೇಡಿಕೆಯನ್ನು ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ, ರಾಜ್ಯದ ಜನಸಂಖ್ಯೆಯಲ್ಲಿ ಶೇ 40ರಷ್ಟಿರುವ ನಾಗಾ ಮತ್ತು ಕುಕಿ ಬುಡಕಟ್ಟು ಸಮುದಾಯಗಳು ವಿರೋಧಿಸಿ ಪ್ರತಿಭಟನೆ ನಡೆಸಿದವು. ಈ ವೇಳೆ ಹಿಂಸಾಚಾರ ನಡೆದಿತ್ತು.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...