Homeಮುಖಪುಟನಾಗಾ ಮಹಿಳೆಯ ಹತ್ಯೆ: 9 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ನಾಗಾ ಮಹಿಳೆಯ ಹತ್ಯೆ: 9 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರದ ವೇಳೆ ನಾಗಾ ಜನಾಂಗದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ 9 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ಅಸ್ಸಾಂನ ಗುವಾಹಟಿಯಲ್ಲಿರುವ ವಿಶೇಷ ಸಿಬಿಐ ನ್ಯಾಯಾಧೀಶರ ಮುಂದೆ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಪ್ರಕರಣದ ಬಗ್ಗೆ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ.

ಆಗಸ್ಟ್‌ನಲ್ಲಿ ನಾಗಾ ಸಮುದಾಯದ ಮಹಿಳೆಯ ಹತ್ಯೆಯ ವಿಡಿಯೋ ವ್ಯಾಪಕವಾಗಿ ವೈರಲ್‌ ಆಗಿತ್ತು. ಹತ್ಯೆಗೀಡಾದ ಮಹಿಳೆಯ ಕುಟುಂಬವು ಜುಲೈ 23 ರಂದು ವೀಡಿಯೊವನ್ನು ನೋಡಿದೆ ಎಂದು ಹೇಳಿದೆ. ಆದರೆ ಆ.4ರಂದು ಈ ಕುರಿತ ವಿಡಿಯೋ ವ್ಯಾಪಕವಾಗಿ ವೈರಲ್‌ ಆಗಿತ್ತು. ವಿಡಿಯೋದಲ್ಲಿ ಲೂಸಿ ಮರಿಂಗ್(55) ಎಂಬ ಮಹಿಳೆಯ ತೆಲೆಗೆ 20 ಬಾರಿ ಶೂಟ್‌ ಮಾಡಲಾಗಿದೆ. ವಿಡಿಯೋದಲ್ಲಿ ಮಹಿಳೆಯ ತಲೆ ಛಿದ್ರವಾಗಿರುವುದು ಕಂಡು ಬಂದಿತ್ತು.

2023ರ ಜುಲೈ 15ರಂದು ಮಧ್ಯಾಹ್ನ 12:10ರ ಸುಮಾರಿಗೆ ಸಶಸ್ತ್ರದಾರಿ ದುಷ್ಕರ್ಮಿಗಳು ಸೇರಿದಂತೆ ಸುಮಾರು 100 ಜನರ ಗುಂಪೊಂದು ಸಾವೊಂಬಂಗ್ ಗೇಟ್‌ನಲ್ಲಿ ಒಬ್ಬ ಮಹಿಳೆಯನ್ನು ಅಪಹರಿಸಿದ್ದರು. ಅದೇ ದಿನ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆಯಲ್ಲಿ 9 ಆರೋಪಿಗಳು ಭಾಗಿಯಾಗಿರುವುದು ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಇತರ ಆರೋಪಿಗಳನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಂಫಾಲ್ ಪೂರ್ವ ಜಿಲ್ಲೆಯ ಲಾಮಲೈ ಪೊಲೀಸ್ ಠಾಣೆಯು ಮೊದಲು ಈ ಕುರಿತು ಪ್ರಕರಣ ದಾಖಲಿಸಿತ್ತು. ಬಳಿಕ ಮಣಿಪುರ ಸರ್ಕಾರ ಪ್ರಕರಣವನ್ನು ಸಿಬಿಐಗೆ ನೀಡಿತ್ತು. ಪ್ರಕರಣದಲ್ಲಿ ಐವರು ಮಹಿಳೆಯರು ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿತ್ತು.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಮಾರಿಂಗ್ ಬುಡಕಟ್ಟಿಗೆ ಸೇರಿದ ಲೂಸಿಯನ್ನು ಒಂದು ಗುಂಪು ಅಪಹರಿಸಿ ಇಂಫಾಲ್ ಪೂರ್ವದ ಸಾವೊಂಬಂಗ್‌ಗೆ ಕರೆಯದ್ದು ಹತ್ಯೆ ನಡೆಸಿದೆ. ಇಂಫಾಲ್ ಪಶ್ಚಿಮದಲ್ಲಿರುವ ತನ್ನ ಮನೆಯಿಂದ ಸುಮಾರು 10 ಕಿಮೀ ದೂರದಲ್ಲಿ ಘಟನೆ ನಡೆದಿದೆ.

ಮಣಿಪುರದಲ್ಲಿ ಮೈತೈ-ಕುಕಿ ಸಮುದಾಯದ ನಡುವಿನ ಸಂಘರ್ಷದ ನಡುವೆ ಮಹಿಳೆಯ ಹತ್ಯೆಯು ನಾಗಾ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಯುನೈಟೆಡ್ ನಾಗಾ ಕೌನ್ಸಿಲ್ ಕೃತ್ಯವನ್ನು ಖಂಡಿಸಿ ಪ್ರತಿಭಟಿಸಿತ್ತು. ಬಂದ್‌ಗೆ ಕರೆ ನೀಡಿತ್ತು.

ಮಣಿಪುರದಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದ ಹಿಂಸಾಚಾರದಲ್ಲಿ 194 ಜನರು ಮೃತಪಟ್ಟು 67,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಮಣಿಪುರದ ಜನಸಂಖ್ಯೆಯ ಶೇಕಡ 53ರಷ್ಟಿರುವ ಮೈತೈ ಸಮುದಾಯದವರು ಇಂಫಾಲ್‌ ಕಣಿವೆಯಲ್ಲಿ ವಾಸಿಸುತ್ತಿದ್ದು, ಇವರ ಮೀಸಲಾತಿ ಬೇಡಿಕೆಯನ್ನು ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ, ರಾಜ್ಯದ ಜನಸಂಖ್ಯೆಯಲ್ಲಿ ಶೇ 40ರಷ್ಟಿರುವ ನಾಗಾ ಮತ್ತು ಕುಕಿ ಬುಡಕಟ್ಟು ಸಮುದಾಯಗಳು ವಿರೋಧಿಸಿ ಪ್ರತಿಭಟನೆ ನಡೆಸಿದವು. ಈ ವೇಳೆ ಹಿಂಸಾಚಾರ ನಡೆದಿತ್ತು.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...