Homeಮುಖಪುಟಉತ್ತರ ಪ್ರದೇಶ: ಪಾಸ್‌ಪೋರ್ಟ್‌ ವೆರಿಫಿಕೇಶ್‌ನ್‌ಗಾಗಿ ತೆರಳಿದ್ದ ಮಹಿಳೆ ತಲೆಗೆ ಗುಂಡು ಹಾರಿಸಿದ ಎಸ್‌ಐ!

ಉತ್ತರ ಪ್ರದೇಶ: ಪಾಸ್‌ಪೋರ್ಟ್‌ ವೆರಿಫಿಕೇಶ್‌ನ್‌ಗಾಗಿ ತೆರಳಿದ್ದ ಮಹಿಳೆ ತಲೆಗೆ ಗುಂಡು ಹಾರಿಸಿದ ಎಸ್‌ಐ!

- Advertisement -
- Advertisement -

ಉಮ್ರಾ ಯಾತ್ರೆ ಕೈಗೊಳ್ಳಲು ಪಾಸ್‌ಪೋರ್ಟ್‌ ಪರಿಶೀಲನೆಗಾಗಿ ಪೊಲೀಸ್ ಔಟ್‌ಪೋಸ್ಟ್‌ಗೆ ತೆರಳಿದ್ದ ಮಹಿಳೆಯೊಬ್ಬರ ತಲೆಗೆ ಸಬ್‌ ಇನ್ಸ್‌ಪೆಕ್ಟರ್ ಒಬ್ಬರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಆಲಿಗಢ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ (ಡಿ.8) ನಡೆದಿರುವ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಬ್ ಇನ್ಸ್‌ಪೆಕ್ಟರ್ ಒಬ್ಬರು ಮೇಜಿನ ಹಿಂದೆ ನಿಂತು ಇನ್ನೊಬ್ಬ ಪೊಲೀಸರಿಂದ ಪಿಸ್ತೂಲ್ ತೆಗೆದುಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಗನ್‌ನಿಂದ ಗುಂಡು ಹಾರಿಸುವ ಕೆಲವೇ ಕ್ಷಣಗಳ ಮೊದಲು ಎಸ್‌ಐ ಅದನ್ನು ಕಾಕ್ ಮಾಡಿದ್ದಾರೆ. ಟೇಬಲ್‌ ಮುಂದೆ ನಿಂತಿದ್ದ ಮಹಿಳೆ ತಲೆಗೆ ಇನ್ಸ್‌ಪೆಕ್ಟರ್ ಹಾರಿಸಿದ ಗುಂಡು ತಗುಲಿದ್ದು, ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ.

‘ತನ್ನ ತಾಯಿಯ ಕೆಲಸವನ್ನು ಆದಷ್ಟು ಬೇಗ ಮಾಡಿಕೊಂಡುವಂತೆ ಕೇಳಿದ್ದಕ್ಕೆ ಕೋಪಗೊಂಡಿದ್ದ ಎಸ್‌ಐ ಉದ್ದೇಶಪೂರ್ವಕವಾಗಿ ತನ್ನ ತಾಯಿಯ ಮೇಲೆ ಗುಂಡು ಹಾರಿಸಿದ್ದಾರೆ’ ಎಂದು ಘಟನೆ ಸಂದರ್ಭದಲ್ಲಿ ಆಕೆಯ ಜೊತೆಗಿದ್ದ ಪುತ್ರ ದೂರು ನೀಡಿದ್ದಾರೆ.

ಘಟನೆಯ ನಂತರ ಸ್ಥಳಕ್ಕಾಗಮಿಸಿದ ಅಲಿಗಢದ ಹಿರಿಯ ಪೊಲೀಸ್ ಅಧೀಕ್ಷಕ ಕಲಾನಿಧಿ ನೈತಾನಿ, ‘ಭೋಜ್‌ಪುರ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಈ ಘಟನೆ ಸಂಭವಿಸಿದೆ, ಅಲ್ಲಿ ಇಶ್ರತ್ ನಿಗರ್ ತನ್ನ ಮಗನೊಂದಿಗೆ ಪಾಸ್‌ಪೋರ್ಟ್ ಪರಿಶೀಲನೆಗೆ ತೆರಳಿದ್ದರು. ಎಸ್‌ಐ ಮನೋಜ್ ಶರ್ಮಾ ಅವರ ಪಿಸ್ತೂಲ್‌ನಿಂದ ಹಾರಿದ ಬುಲೆಟ್ ಮಹಿಳೆಯ ತಲೆಗೆ ತಗುಲಿದೆ. ನಾವು ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಿದ್ದೇವೆ’ ಎಂದು ಹೇಳಿದ್ದಾರೆ.

‘ಮಹಿಳೆ ತಲೆಗೆ ಹೊಕ್ಕಿರುವ ಗುಂಡು ಇನ್ನೂ ಹಾಗೇ ಇದೆ. ಆಕೆಗೆ ಆಪರೇಷನ್ ಮಾಡಬೇಕೋ, ಬೇಡವೋ ಎಂಬ ಬಗ್ಗೆ ಇನ್ನೂ ಪರಿಶೀಲಿಸಲಾಗುತ್ತಿದೆ’ ಎಂದು ಮಹಿಳೆ ದಾಖಲಾಗಿರುವ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜೂರ್ ಹ್ಯಾರಿಸ್ ಖಾನ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಹಣಕ್ಕೆ ಬೇಡಿಕೆ ಇಟ್ಟಿದ್ದರೇ ಸಬ್‌ ಇನ್ ಸ್ಪೆಕ್ಟರ್?

ಮೇಲ್ನೋಟಕ್ಕೆ ಇದು ‘ಮಿಸ್‌ ಫೈರ್’ ಎಂದು ಹೇಳಲಾಗುತ್ತಿದ್ದರೂ, ಅವರ ಪುತ್ರ ಉದ್ದೇಶಪೂರ್ವಕ ಎಂದು ಆರೋಪಿಸಿದ್ದಾರೆ. ಪಾಸ್‌ಪೋರ್ಟ್‌ ವೆರಿಫಿಕೇಶನ್‌ ಮಾಡಲು ಸಬ್‌ ಇನ್ಸ್‌ಪೆಕ್ಟರ್ ಶರ್ಮಾ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಈಗಾಗಲೇ ಮನೋಜ್ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯ ಸಂದರ್ಭದಲ್ಲಿ ನಿರ್ಲಕ್ಷ್ಯದ ಕಾರಣಕ್ಕೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಘಟನೆ ನಂತರ ಮನೋಜ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ‘ದ್ವೇಷಪೂರಿತ’ ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...