Homeಮುಖಪುಟಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

ಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

- Advertisement -
- Advertisement -

ಬಿಹಾರ ಮೂಲದ ಅಪ್ರಾಪ್ತ ಬಾಲಕಿಯನ್ನು (13 ವರ್ಷ) ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದೂ ಅಲ್ಲದೆ, ಆಕೆಗೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿರುವುದು ಶುಕ್ರವಾರ (ಡಿ.8) ಬೆಳಕಿದೆ ಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಉದ್ಯೋಗದಾತ ಹಾಗೂ ಆತನ ಮಕ್ಕಳು ದೈಹಿಕ ಮತ್ತು ಲೈಂಗಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಆರೋಪಿಸಿದ್ದು, ಕಳೆದ ಆರು ತಿಂಗಳಿನಿಂದ ಮನೆ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಮನೆಗೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವ ಬಾಲಕಿಯ ತಾಯಿಗೆ ಕಳೆದ ನಾಲ್ಕು ತಿಂಗಳಿಂದ ತನ್ನ ಮಗಳನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಸೆಕ್ಟರ್ 51 ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತಾನು ಈ ಹಿಂದೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ ತನ್ನ ಮಗಳು ಕೆಲಸ ಮಾಡುತ್ತಿದ್ದರಿಂದ ಮಹಿಳೆಯು ಮನೆ ಮಾಲೀಕರಿಗೆ ಹಲವು ಬಾರಿ ಮಗಳ ಜೊತೆ ಮಾತನಾಡಲು ಕರೆ ಮಾಡಿದ್ದರು. ಆದರೆ ಮಾತನಾಡಲು ಅವರು ಅವಕಾಶ ನೀಡಿರಲಿಲ್ಲ. ‘ಹಲವು ಬಾರಿ ಕರೆ ಮಾಡಿ ನನ್ನ ಮಗಳನ್ನು ಭೇಟಿಯಾಗಲು ಏಕೆ ಬಿಡುತ್ತಿಲ್ಲ ಎಂದು ನಾನು ಕೇಳಿದೆ, ಅವರು ನನ್ನ ಕರೆಯನ್ನು ಕಟ್ ಮಾಡಲು ಆರಂಭಿಸಿದರು. ಏನೋ ತಪ್ಪಾಗಿದೆ ಎಂದು ತಿಳಿದು ಅವರ ಮನೆಗೆ ಹೊರಟೆವು’ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಬಾಲಕಿಯ ಪೋಷಕರು ಆರೋಪಿಯ ಮನೆಗೆ ತೆರಳಿದಾಗ ತನ್ನ ಮಗಳನ್ನು ಗುರುತಿಸಲು ಅವರಿಗೆ ಸಾಧ್ಯವಾಗಿಲ್ಲ. ಏಕೆಂದರೆ, ಮನೆ ಮಾಲೀಕರು ಆಕೆಯ ಕೂದಲನ್ನು ಕಿತ್ತುಹಾಕಿದ್ದರು. ಸಾಲದ್ದಕ್ಕೆ ಆಕೆಯ ಕೈಯನ್ನು ಆಸಿಡ್‌ನಿಂದ ಸುಟ್ಟು ಹಾಕಿದ್ದರು. ಆಕೆಯ ಕುತ್ತಿಗೆಯಲ್ಲಿ ಮತ್ತು ಮುಖದಲ್ಲಿ ಹಲವು ಗಾಯದ ಗುರುತುಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

‘ಅವರು ತನ್ನ ಮೇಲೆ ಸುತ್ತಿಗೆ ಮತ್ತು ರಾಡ್‌ಗಳಿಂದ ಹಲ್ಲೆ ಮಾಡುತ್ತಿದ್ದರು. ಮನೆ ಮಾಲೀಕರ ಇಬ್ಬರು ಪುತ್ರರು ನನ್ನ ಬಟ್ಟೆ ಬಿಚ್ಚಿಸಿ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ. ಯಾರಿಗಾದರೂ ಹೇಳಿದರೆ ತಂದೆ-ತಾಯಿಯನ್ನು ಕೊಲ್ಲುವುದಾಗಿ ಬೆದರಿಸಿದ್ದಾರೆ. ತಾನು ನೆಲ ಒರೆಸುತ್ತಿದ್ದಾಗ ಆರೋಪಿಗಳು ಹಿಂದಿನಿಂದ ಬಂದು ಕೈ ಮೇಲೆ ಆಸಿಡ್ ಸುರಿದಿದ್ದಾರೆ ಎಂದು ಹೇಳಿದ್ದಾಳೆ. ಮಲಗಲು ಹೊದಿಕೆಗಳನ್ನೂ ನೀಡಲಿಲ್ಲ; ನೆಲದ ಮೇಲೆಯೇ ಮಲಗಬೇಕಿತ್ತು. ಥಳಿಸುವಾಗ ಶಬ್ಧ ಬರಬಾರದು ಎಂಬ ಕಾರಣಕ್ಕೆ ಬಾಯಿಗೆ ಬಟ್ಟೆಗಳನ್ನು ತುರುಕುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ’ ಎಂದು ಅವರು ಹೇಳಿದರು.

ಬಾಲಕಿಗೆ ನಾಯಿಗಳು ಕಚ್ಚಿವೆ ಎಂದು ಅಧಿಕಾರಿಗಳು ಹೇಳಿದ್ದು, ‘ಮನೆ ಮಾಲೀಕರು ಮತ್ತು ಅವರ ಮಕ್ಕಳು ನೆಲದ ಮೇಲೆ ಬಿಸ್ಕೆಟ್ ಅನ್ನುಎಸೆಯುತ್ತಿದ್ದರು, ಅವುಗಳನ್ನು ತೆಗೆದುಕೊಳ್ಳಲು ನನಗೆ ಹೇಳುತ್ತಿದ್ದ ಅವರು, ನಾಯಿಯನ್ನು ಛೂ ಬಿಟ್ಟು ಕಚ್ಚಲು ಆದೇಶಿಸುತ್ತಿದ್ದರು ಎಂದೂ ಬಾಲಕಿ ಹೇಳಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ದಿನಕ್ಕೆ ಒಮ್ಮೆ ಮಾತ್ರ ಸಂಜೆ 4 ಗಂಟೆಗೆ ಬಾಲಕಿಗೆ ಆಹಾರ ನೀಡಲಾಗುತ್ತಿತ್ತು. ಕೆಲವೊಮ್ಮೆ ಮೂರು ದಿನಕ್ಕೊಮ್ಮೆ ಮಾತ್ರ ಊಟ ಕೊಡುತ್ತಿದ್ದರು. ಆಹಾರ ತಿನ್ನಲು ಯತ್ನಿಸಿದರೆ ಮಾಲೀಕರು ಬಾಲಕಿಯನ್ನು ಹೊಡೆಯುತ್ತಿದ್ದರು ಎನ್ನಲಾಗಿದೆ. ಪ್ರಸ್ತುತ ಆಕೆಯನ್ನು ಸೆಕ್ಟರ್ 10ರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...