Homeಕರ್ನಾಟಕ'ಕೈ ನಾಯಕರೊಬ್ಬರು ಬಿಜೆಪಿ ನಾಯಕರನ್ನು ಸಂಪರ್ಕಿಸಿದ್ದಾರೆ; ಮುಂದೆ ಏನಾದರೂ ಆಗಬಹುದು'

‘ಕೈ ನಾಯಕರೊಬ್ಬರು ಬಿಜೆಪಿ ನಾಯಕರನ್ನು ಸಂಪರ್ಕಿಸಿದ್ದಾರೆ; ಮುಂದೆ ಏನಾದರೂ ಆಗಬಹುದು’

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ‘ಪಕ್ಷದ ಉನ್ನತ ನಾಯಕರೊಬ್ಬರು ಲೋಕಸಭೆ ಚುನಾವಣೆ ನಂತರ 50 ಜನ ಶಾಸಕರೊಟ್ಟಿಗೆ ಬಿಜೆಪಿ ಸೇರುವ ಬಗ್ಗೆ ಈಗಾಗಲೇ ಕೇಂದ್ರ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ’ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಪರೋಕ್ಷವಾಗಿ ಹೇಳಿದರು. ‘ಕಾಂಗ್ರೆಸ್‌ನ ನಾಯಕರೊಬ್ಬರು ಕೇಂದ್ರದ ಬಿಜೆಪಿ ಹಿರಿಯ ನಾಯಕರನ್ನು ಸಂಪರ್ಕಿಸಿ 50 ಶಾಸಕರೊಂದಿಗೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಇದೆ. ಲೋಕಸಭಾ ಚುನಾವಣೆಯ ನಂತರ ತಮ್ಮೊಂದಿಗೆ ಸೇರಿಕೊಳ್ಳಲು ನಾಯಕರೊಬ್ಬರು ಕೇಂದ್ರದ ನಾಯಕರ ಬಳಿ ಅರ್ಜಿ ಸಲ್ಲಿಸಿದ್ದಾರೆ. 50 ಅಥವಾ 60 ಶಾಸಕರೊಂದಿಗೆ ಸೇರಲು ಅವರು ಇನ್ನೂ ಆರು ತಿಂಗಳ ಕಾಲ ಸಮಯ ಕೇಳಿದ್ದಾರೆ’ ಎಂದು ಅವರು ಹೇಳಿದರು.

‘ನಾನು 50 ಶಾಸಕರನ್ನು ಕರೆದುಕೊಂಡು ಬರುತ್ತೇನೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಕೇಂದ್ರ ಬಿಜೆಪಿ ನಾಯಕರೊಬ್ಬರ ಬಳಿ ವ್ಯಾಪಾರ ಮಾಡಲು ಹೋಗಿದ್ದರು. ಅವರು ಮಾಡಿರುವ ಅಕ್ರಮಗಳನೆಲ್ಲ ಸರಿಪಡಿಸಿಕೊಳ್ಳಲು ಕೇಂದ್ರದ ಮುಂದೆ ಹೋಗಿದ್ದಾರೆ’ ಎಂದ ಅವರು, ಆ ‘ನಾಯಕ’ ಯಾರು ಎಂಬ ಗುಟ್ಟನ್ನು ಮಾತ್ರ ಬಿಟ್ಟುಕೊಡಲಿಲ್ಲ.

ಬಿಜೆಪಿಗೆ 50-60 ಜನ ಶಾಸಕರನ್ನು ಕರೆದುಕೊಂಡು ಬರ್ತೀನಿ ಎಂದು ಹೈಕಮಾಂಡ್ ನಾಯಕರ ಬಳಿ ಪ್ರಸ್ತಾಪಿಸುವುದಕ್ಕೆ ಒಬ್ಬರು ಹೊಗಿದ್ದರು ಎಂದು ನನಗೆ ಮಾಹಿತಿ ಸಿಕ್ಕಿದೆ. ಚುನಾವಣೆ ನಂತರ ನಾನು ನಿಮ್ಮೊಟ್ಟಿಗೆ ಬರುತ್ತೇನೆ. ಐದಾರು ತಿಂಗಳು ‘ರಿಲೀಫ್’ ಕೊಡಿ ಎಂದು ಕೇಳಿಕೊಂಡಿದ್ದಾರೆ. ಯಾರನ್ನೆಲ್ಲಾ ಮುಂದೆ ಬಿಟ್ಟು ಇದನ್ನೆಲ್ಲಾ ನಡೆಸುತ್ತಿದ್ದಾರೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆ ಮುಂಗಿದ ಬಳಿಕ ಎಲ್ಲವೂ ಗೊತ್ತಾಗಲಿದೆ. ಮಹಾರಾಷ್ಟ್ರದಲ್ಲಿ ಆದಂತೆ ಇಲ್ಲಿಯು ಸಹ ಯಾರಾದರೂ ಒಬ್ಬರು ದಂಗೆ ಏಳಲಿದ್ದಾರೆ. ಈ ದೇಶದಲ್ಲಿ ಇಂದಿನ ರಾಜಕೀಯ ಬೆಳವಣಿಗೆಗಳನ್ನು ನೋಡಿದಾಗ ಮುಂದೆ ಏನಾದರೂ ಆಗಬಹುದು. ಇಲ್ಲಿ ಯಾರಿಗೂ ಪ್ರಾಮಾಣಿಕತೆ ಮತ್ತು ನಿಷ್ಠೆ ಎಂಬುದಿಲ್ಲ. ಇವತ್ತು ಇಲ್ಲಿರುತ್ತಾರೆ, ಅನುಕೂಲ ಸಿಕ್ಕರೆ ನಾಳೆ ಇನ್ನೊಂದು ಕಡೆ ಹೋಗುತ್ತಾರೆ. ಹಲವಾರು ವರ್ಷಗಳಿಂದ ಇದು ನಡೆದುಕೊಂಡು ಬರುತ್ತಿದೆ’ ಎಂದರು.

ಇದನ್ನೂ ಓದಿ; ಬುಡಕಟ್ಟು ಮುಖಂಡ ವಿಷ್ಣುದೇವ್ ಸಾಯಿ ಛತ್ತೀಸ್‌ಘಡದ ನೂತನ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...