Homeಕರ್ನಾಟಕಸರ್ಕಾರದ ನಕಲಿ ಸುದ್ದಿ ವಿರೋಧಿ ಘಟಕಕ್ಕೆ 'ನಾನು ಗೌರಿ -ಏನ್ ಸುದ್ದಿ' ಆಯ್ಕೆ

ಸರ್ಕಾರದ ನಕಲಿ ಸುದ್ದಿ ವಿರೋಧಿ ಘಟಕಕ್ಕೆ ‘ನಾನು ಗೌರಿ -ಏನ್ ಸುದ್ದಿ’ ಆಯ್ಕೆ

- Advertisement -
- Advertisement -

ಬಲಪಂಥೀಯ ಸಂಘಟನೆಗಳು ಮತ್ತು ಅದರ ಪಕ್ಷಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ಪತ್ತೆಹಚ್ಚಲು (Fact Check) ಸರ್ಕಾರ ಆಯ್ಕೆ ಮಾಡಿರುವ ಮಾಧ್ಯಮ ಸಂಸ್ಥೆಗಳಲ್ಲಿ ಗೌರಿ ಮೀಡಿಯಾ ಕೂಡಾ ಆಯ್ಕೆಯಾಗಿದೆ. ಹಿಂದುತ್ವ ಸಂಘಟನೆಗಳ ಕಾರ್ಯಕರ್ತರಿಂದ ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನು ಗೌರಿ.ಕಾಂ ಮತ್ತು ಏನ್ ಸುದ್ದಿ ಮಾಧ್ಯಮ ಸಂಸ್ಥೆಗಳು ಸರ್ಕಾರದ ನಕಲಿ ಸುದ್ದಿ ವಿರೋಧಿ ಘಟಕವನ್ನು ನಡೆಸಲು ಆಯ್ಕೆಯಾಗಿರುವ ಐದು ಕಂಪನಿಗಳಲ್ಲಿ ಸೇರಿವೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಈ ಸಂಸ್ಥೆಗಳು ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ.

2024ರ ಲೋಕಸಭೆ ಚುನಾವಣೆ ಮತ್ತು ರಾಜ್ಯದ ಬಲಪಂಥೀಯ ಸಂಘಟನೆಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಜೂನ್‌ನಲ್ಲೇ ನಕಲಿ ಸುದ್ದಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಆದೇಶಿಸಿದ್ದರು.

ನಕಲಿ ಸುದ್ದಿಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಕರ್ನಾಟಕ ಮಾಹಿತಿ ಅಸ್ವಸ್ಥತೆ ನಿವಾರಣಾ ಘಟಕ (IDTU) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಈ ಐದು ಸಂಸ್ಥೆಗಳು ಕಾರ್ಯನಿರ್ವಹಿಸಲಿವೆ.

ಗೌರಿ ಮೀಡಿಯಾ, ಲಾಜಿಕಲಿ ಇನ್ಫೋ ಮೀಡಿಯಾ ಪ್ರೈವೇಟ್ ಲಿಮಿಟೆಡ್, ಟ್ರೈಲಿಕಾ ಟೆಕ್ನಾಲಜಿ ಲಿಮಿಟೆಡ್, ನ್ಯೂಸ್ಪ್ಲಸ್ ಕಮ್ಯುನಿಕೇಷನ್ಸ್ ಮತ್ತು ಒಡಬ್ಲ್ಯೂ ಡಾಟಾಲೀಡ್ಸ್ ಆಂಟಿ ಫೇಕ್ ನ್ಯೂಸ್ ಯೂನಿಟ್ ಸಂಸ್ಥೆಗಳು ಸುಳ್ಳು ಸುದ್ದಿ ವಿರುದ್ಧ ಕಾರ್ಯಾಚರಣೆ ನಡೆಸಲು ಸರ್ಕಾರದಿಂದ ಅರ್ಹತೆ ಪಡೆದುಕೊಂಡಿವೆ.

ಈ ಫ್ಯಾಕ್ಟ್ ಚೆಕ್ ಸಂಸ್ಥೆಗಳು ಬಲಪಂಥೀಯ ಗುಂಪುಗಳು ಹರಡುವ ಸುಳ್ಳು ಹಾಗೂ ತಪ್ಪು ಮಾಹಿತಿಯನ್ನು ಪತ್ತೆ ಮಾಡಿ ನೈಜತೆಯನ್ನು ಜನರ ಮುಂದಿಡುತ್ತವೆ. ಜನಸಮೂಹದಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಡೇಟಾ ವಿಶ್ಲೇಷಣೆ ಜತೆಗೆ ಕೃತಕ ಬುದ್ಧಿಮತ್ತೆಯಂತಹ ಸುಧಾರಿತ ತಂತ್ರಜ್ಞಾನಗಳನ್ನು ಬಳಸುತ್ತದೆ. ಜತೆಗೆ, ಸುಳ್ಳು ಸುದ್ದಿಗಳನ್ನು ಹಿಮ್ಮೆಟ್ಟಿಸಲು ಸುಳ್ಳು ಸುದ್ದಿಗಳ ದುಷ್ಟಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಜಾಗೃತಿ ಅಭಿಯಾನಗಳನ್ನು ನಡೆಸುತ್ತದೆ.

ನಕಲಿ ಸುದ್ದಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿರು ಸಂಸ್ಥೆಗಳಿಂದ ಗುಣಮಟ್ಟ ಮತ್ತು ವೇಗವನ್ನು ಸರ್ಕಾರ ಬಯಸುತ್ತದೆ. ಇದು ಸಾರ್ವಜನಿಕ ಹಿತಕ್ಕಾಗಿ ಮಾಡುತ್ತಿರುವ ಕೆಲಸವಾಗಿರುವದರಿಂದ ನಾವು ಏನು ಮಾಡುತ್ತೇವೆ ಎಂಬುದನ್ನು ಜನರಿಗೆ ತಿಳಿಸಬೇಕು. ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಇರುತ್ತದೆ. ನಕಲಿ ಸುದ್ದಿಗಳು ಕೆಲವೇ ಗಂಟೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹರಡಬಹುದಾಗಿದ್ದು ಅವರ ವಿರುದ್ಧದ ಕಾರ್ಯಾಚರಣೆ ತ್ವರಿತವಾಗಿರಬೇಕು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ; ಮಹಿಳೆಯರ ಮೇಲೆ ಆ್ಯಸಿಡ್ ದಾಳಿ: ಅಗ್ರಸ್ಥಾನದಲ್ಲಿರುವ ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...