Homeಕರ್ನಾಟಕದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

ದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

- Advertisement -
- Advertisement -

ಚಿತ್ರದುರ್ಗದ ಸಂಸದರಾದ ಎ.ನಾರಾಯಣಸ್ವಾಮಿಯವರನ್ನು ದಲಿತರೆಂಬ ಕಾರಣಕ್ಕೆ ಪಾವಗಡದ ಪೆಮ್ಮನಹಳ್ಳಿಯ ಗೊಲ್ಲರಹಟ್ಟಿಯ ಪ್ರವೇಶ ನಿರಾಕರಿಸಿರುವ ಘಟನೆಗೆ ಎಲ್ಲೆಡೆ ತೀವ್ರ ಆಕ್ರೋಶ, ಟೀಕೆ ವ್ಯಕ್ತವಾಗಿದೆ. ಇದನ್ನು ಅಸ್ಪೃಶ್ಯತೆ ಅನ್ನದೇ ಮತ್ತೆ ಏನನ್ನಬೇಕು ಎಂದು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮ ದೇಶದ ಪ್ರಜೆಗಳು ಜಾತಿಯ ವಿಚಾರದಲ್ಲಿ ಎಷ್ಟು ವಿಷ ರಕ್ತ ಹೊಂದಿದ್ದಾರೆ ಎಂಬುದನ್ನು ಸೂಚಿಸುತ್ತದೆ .
ಒಬ್ಬ ಸಂಸದರಿಗೆ ಗ್ರಾಮದ ಒಳಗೆ ಪ್ರವೇಶ ನಿರಾಕರಣೆ ಮಾಡಿದರೆ ಇನ್ನು ಸಾಮಾನ್ಯ ಪ್ರಜೆಗಳ ಸ್ಥಿತಿ ಹೇಗೆ ಊಹಿಸಲು ಸಾದ್ಯವಿಲ್ಲ !!! ಎಂದು ಹನುಮಂತ ನಂದಿಹಾಳ್ ರವರು ಪ್ರತಿಕ್ರಿಯಿಸಿದ್ದಾರೆ.

ವಿಕಾಸ್ ಆರ್.ಮೌರ್ಯ ರವರು ಫೇಸ್ ಬುಕ್ ನಲ್ಲಿ ಹೀಗೆ ಬರೆದಿದ್ದಾರೆ.

ಇದಕ್ಕೇ #ಪೂನಾ_ಪ್ಯಾಕ್ಟ್ ದಲಿತರ ಬದುಕನ್ನೇ ಕಿತ್ತುಕೊಂಡಿತು ಎನ್ನುವುದು

ಸಂಸದ ನಾರಾಯಣಸ್ವಾಮಿಯವರನ್ನು ಗೊಲ್ಲರು ತಮ್ಮ ಹಟ್ಟಿಗೆ ಬಿಟ್ಟುಕೊಳ್ಳದೆ ಸಂಸದರು ಅಂಗಲಾಚಿದರೂ ಒಪ್ಪದೇ ಹಟ್ಟಿಯಿಂದ ಹೊರಗೇ ಎಲ್ಲವನ್ನು ವಿಚಾರಿಸಿ ಅಟ್ಟಿದ್ದಾರೆ. ಸಂವಿಧಾನದ ಕಲಂ 17 ಅಸ್ಪೃಶ್ಯತೆ ನಿಷೇಧಿಸಲಾಗಿದೆ ಎನ್ನುತ್ತದೆ. ಆದರೆ ಈ ಘಟನೆಯಲ್ಲಿ ಕಾನೂನು ನಯಾಪೈಸೆಯ ಕೆಲಸ ಮಾಡಿಲ್ಲ, ಮಾಡಲ್ಲ. ಇದು ನಿಜ ಭಾರತದ ಸ್ಥಿತಿ. ಇರಲಿ. ಇಲ್ಲಿ ಸಂಸದರು ಆ ಅಮಾನವೀಯ ಜನರ ವಿರುದ್ಧ ಕ್ರಮ ಏಕೆ ಕೈಗೊಳ್ಳಲಿಲ್ಲ? ಅದಕ್ಕೆ ಕಾರಣ ಅವರೇ ಹೇಳಿದ್ದಾರೆ. ಶೇ. 80 ಗೊಲ್ಲ ಸಮುದಾಯ ಅವರಿಗೆ ಮತ ನೀಡಿ ಗೆಲ್ಲಿಸಿದೆ. ಹೀಗಿರುವಾಗ ಸಂಸದರೇನಾದರೂ ಕಾನೂನು ರೀತಿಯ ಕ್ರಮ ಕೈಗೊಂಡರೆ ಮುಂದಿನ ಬಾರಿ ಅವರು ಸೋಲುವುದು ಖಚಿತ.

ಈ ಕಾರಣಕ್ಕಾಗಿಯೇ ಅಂಬೇಡ್ಕರರು 1933 ರ ಪೂನಾ ಒಪ್ಪಂದವನ್ನು ಕಂಠಮಟ್ಟ ವಿರೋಧಿಸಿದ್ದು. ಏಕೆಂದರೆ ದುಂಡು ಮೇಜಿನ ಸಭೆಯಲ್ಲಿ ದಲಿತರಿಗೆ ಎರಡು ಓಟು ನೀಡುವ ಹಕ್ಕು ಸಿಕ್ಕಿತ್ತು. ಆಂದರೆ ದಲಿತ ಮೀಸಲು ಕ್ಷೇತ್ರಗಳಲ್ಲಿ ದಲಿತರಿಂದ ದಲಿತರಿಗಾಗಿ ದಲಿತರಿಗೋಸ್ಕರ ಆರಿಸಿ ಬರುವ ದಲಿತರನ್ನು ಅಯ್ಕೆ ಮಾಡಲು ಒಂದು ಓಟು. ಅದೇ ಕ್ಷೇತ್ರದಲ್ಲಿ ದಲಿತೇತರರನ್ನು ಆಯ್ಕೆ ಮಾಡಲು ಒಂದು ಓಟು. ಇದನ್ನೇ ಪ್ರತ್ಯೇಕ ಮತಕ್ಷೇತ್ರವೆನ್ನುವರು. ಇವತ್ತು ಸಿಖ್ ಜನಾಂಗ ಬಲಿಷ್ಟವಾಗಿರುವುದಕ್ಕೆ ಕಾರಣ ಅವರಿಗೆ ದಕ್ಕಿದ ಪ್ರತ್ಯೇಕ ಮತಕ್ಷೇತ್ರವೇ ಆಗಿದೆ. ಆದರೆ ಇದು ದಲಿತರಿಗೆ ಸಿಗಲಿಲ್ಲ. ಇದಕ್ಕೆ ನೇರವಾಗಿ ಗಾಂಧಿಯವರನ್ನು ನಾವು ಹೊಣೆ ಮಾಡುತ್ತೇವೆ. ಅದು ಸತ್ಯವಾದರೂ ಅವರಷ್ಟೇ ಹೊಣೆಗಾರರು ಅವರಿಗೆ ಬೇಷರತ್ ಬೆಂಬಲ ನೀಡಿದ ಅಖಿಲ ಭಾರತ ಹಿಂದೂ ಮಹಾಸಭಾ, ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಗಾಂಧಿವಾದಿ ದಲಿತರು.

ಅಂಬೇಡ್ಕರರು ಜುಲೈ 1947 ರವರೆಗೂ ಹಾಗೂ ಸಂವಿಧಾನ ಸಭೆಯಲ್ಲೂ ಮತ್ತೆ ದಲಿತರಿಗೆ ಪ್ರತ್ಯೇಕ ಮತಕ್ಷೇತ್ರ ಸಿಗಬೇಕೆಂದು ಹೋರಾಡಿದರು. ಆದರೆ ಗಾಂಧಿವಾದಿ ದಲಿತರು ಹಾಗೂ ಕಾಂಗ್ರೆಸ್ ಅದನ್ನು ಕಂಠಮಟ್ಟ ವಿರೋಧಿಸಿ ಮೂಲೆಗುಂಪು ಮಾಡಿದರು. ಅವರ ಮುಂದೆ ಅಂಬೇಡ್ಕರ್ ಸೋಲೊಪ್ಪಲೇಬೇಕಾಯಿತು.

ಇಂದು ಯಾವುದೇ ದಲಿತ ಜನಪ್ರತಿನಿದಿ ಲೋಕಸಭೆಗೆ ಅಗಲೀ, ವಿಧಾನಸಭೆಗೆ ಆಗಲೀ ಆರಿಸಿ ಬರುತ್ತಿರುವುದು ದಲಿತೇತರರ ಓಟಿನಿಂದ. ದಲಿತರ ಓಟುಗಳಿಗೆ ಇಲ್ಲಿ ಬಿಡಿಗಾಸಿನ ಬೆಲೆಯಿಲ್ಲ. ಯಾವ ದಲಿತ ಅಥವಾ ಯಾವ ಜಾತಿಯ ದಲಿತ, ಶಾಸಕ ಅಥವಾ ಸಂಸದ ಆಗಬೇಕೆನ್ನುವುದನ್ನು ತೀರ್ಮಾನ ಮಾಡುವವರು ದಲಿತೇತರರೇ ಆಗಿರುವಾಗ ಯಾವ ದಲಿತ ರಾಜಕೀಯ ನಾಯಕ ತಾನೇ ದಲಿತೇತರರ ಓಟೆಂಬ ಭಿಕ್ಷೆಯ ವಿರುದ್ಧ ನಿಲ್ಲುತ್ತಾನೆ? ತನ್ನ ಸ್ವಾಭಿಮಾನವನ್ನು ತಾನೇ ಕೊಲೆ ಮಾಡಿಕೊಂಡು ಶಾಸಕ, ಸಂಸದನಾಗುತ್ತಾನೆ. ಅಷ್ಟೆ.

“ನನ್ನ ಮುತ್ತಾತಂದಿರು ಮತಾಂತರ ಆದದ್ದಕ್ಕೆ ಕಾರಣ ಇದು. ಅಂದು ಕೀಳು ಜಾತಿ ಅಂತ ಅವಮಾನಿಸಿದಿರಿ, ಇಂದು ದೇಶ ವಿರೋಧಿಗಳು ಅಂತ ಅನುಮಾನಿಸುತ್ತಿದ್ದೀರಿ” ಎಂದು ಅಬ್ದುಲ್ ಮುನೀರ್ ಪ್ರತಿಕ್ರಿಯಿಸಿದ್ದಾರೆ.

ಈ ಸಂಸದರಿಗೆ ದೇಶದ ಜ್ವಲಂತ ಸಮಸ್ಯೆ ಯಾವುದು ಎಂದು ಮನದಟ್ಟು ಮಾಡಿಕೊಟ್ಟ ಆ ಹಳ್ಳಿಗರಿಗೆ ವಂದನೆಗಳು. ಇನ್ನಾದರೂ ಅವರು ಸಂಸತ್ತಿನಲ್ಲಿ ಈ ಸಮಸ್ಯೆಯ ಬಗ್ಗೆ ದನಿ ಎತ್ತಬೇಕು. ಆಗಿಲ್ಲವೆಂದರೆ ಊರ ಹೊರಗೆ ಕುರ್ಚಿ ಹಾಕಿ ಕಾರ್ಯಕ್ರಮ ನಡೆಸಲಿ. ಅದೂ ಆಗಿಲ್ಲವೆಂದರೆ ರಾಜೀನಾಮೆ ನೀಡಿ ಹೋರಾಟಕ್ಕೆ ಮುಂದಾಗಲಿ ಎಂದು ಸಂತೋಷ್ ಗುಡ್ಡಿಯಂಗಡಿಯವರು ಪ್ರತಿಕ್ರಿಯಿಸಿದ್ದಾರೆ.

ಬೆಳಗ್ಗೆಯಿಂದ ಒಂದಷ್ಟು ಗೊಲ್ಲ ಸಮುದಾಯದ ಸ್ನೇಹಿತರು ಪೋನ್ ಮಾಡಿ ಸಂಸದರಿಗೆ ತಟ್ಟಿದ ಅಸ್ಪೃಶ್ಯತೆ ಬಗ್ಗೆ ತೀವ್ರ ಸಂಕಟ ಹೊರಹಾಕಿದರು..ಅರಿವು ,ಬದ್ದತೆ ಇರುವ ಆ ಸಮುದಾಯದ ಗೆಳೆಯರೊಂದಿಗೆ ನಾವೆಲ್ಲರೂ ಸೇರಿ ಜಾಗೃತಿ ಮೂಡಿಸುವ ಅಥವಾ ಮನಸ್ಸು ಗಳನ್ನ ಪರಿವರ್ತಿಸುವ ಕೆಲಸ ಈ ಕ್ಷಣದ ತುರ್ತು…
ಶಿಕ್ಷೆಯಿಂದ ಎಲ್ಲಾ ಬದಲಾಗುವಂತಿದ್ದರೆ ಹೆಚ್ಚೂಕಮ್ಮಿ ಮೌಡ್ಯ ಇರುವ ಎಲ್ಲಾ ಗೊಲ್ಲರಟ್ಟಿಯವರ ಮೇಲೆ ಎರಡೂ ದಲಿತ ದೌರ್ಜನ್ಯ ಪ್ರಕರಣಗಳು ದಾಖಲಗುತ್ತಿದ್ದವು .
ಹಟ್ಟಿಗಳ ಪರಿವರ್ತನೆ ಗೆ ಇದು ರೈಟ್ ಟೈಮ್ ಎಂದು ಕೊಟ್ಟ ಶಂಕರ್ ರವರು ತಿಳಿಸಿದ್ದಾರೆ.

ಈ ವಿಚಾರ ಪತ್ರಿಕೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಕೂಡಲೇ ಗೊಲ್ಲರಹಟ್ಟಿಯ ಜನ ಎಚ್ಚೆತ್ತುಕೊಂಡಿದ್ದಾರೆ. “ನಮ್ಮ ನಡವಳಿಕೆಗಳಿಂದ ಸಂಸದರಿಗೆ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ, ನೀವು ಮತ್ತೊಮ್ಮೆ ನಮ್ಮ ಹಟ್ಟಿಗೆ ಬಂದು ನಮ್ಮ ಸಮಸ್ಯೆ ಆಲಿಸಿ, ನಮಗೆಲ್ಲಾ ಮನೆ ಕಟ್ಟಿಕೊಡಿ” ಎಂದು ಮನವಿ ಮಾಡಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....