Homeಕರ್ನಾಟಕದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

ದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

- Advertisement -
- Advertisement -

ಚಿತ್ರದುರ್ಗದ ಸಂಸದರಾದ ಎ.ನಾರಾಯಣಸ್ವಾಮಿಯವರನ್ನು ದಲಿತರೆಂಬ ಕಾರಣಕ್ಕೆ ಪಾವಗಡದ ಪೆಮ್ಮನಹಳ್ಳಿಯ ಗೊಲ್ಲರಹಟ್ಟಿಯ ಪ್ರವೇಶ ನಿರಾಕರಿಸಿರುವ ಘಟನೆಗೆ ಎಲ್ಲೆಡೆ ತೀವ್ರ ಆಕ್ರೋಶ, ಟೀಕೆ ವ್ಯಕ್ತವಾಗಿದೆ. ಇದನ್ನು ಅಸ್ಪೃಶ್ಯತೆ ಅನ್ನದೇ ಮತ್ತೆ ಏನನ್ನಬೇಕು ಎಂದು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮ ದೇಶದ ಪ್ರಜೆಗಳು ಜಾತಿಯ ವಿಚಾರದಲ್ಲಿ ಎಷ್ಟು ವಿಷ ರಕ್ತ ಹೊಂದಿದ್ದಾರೆ ಎಂಬುದನ್ನು ಸೂಚಿಸುತ್ತದೆ .
ಒಬ್ಬ ಸಂಸದರಿಗೆ ಗ್ರಾಮದ ಒಳಗೆ ಪ್ರವೇಶ ನಿರಾಕರಣೆ ಮಾಡಿದರೆ ಇನ್ನು ಸಾಮಾನ್ಯ ಪ್ರಜೆಗಳ ಸ್ಥಿತಿ ಹೇಗೆ ಊಹಿಸಲು ಸಾದ್ಯವಿಲ್ಲ !!! ಎಂದು ಹನುಮಂತ ನಂದಿಹಾಳ್ ರವರು ಪ್ರತಿಕ್ರಿಯಿಸಿದ್ದಾರೆ.

ವಿಕಾಸ್ ಆರ್.ಮೌರ್ಯ ರವರು ಫೇಸ್ ಬುಕ್ ನಲ್ಲಿ ಹೀಗೆ ಬರೆದಿದ್ದಾರೆ.

ಇದಕ್ಕೇ #ಪೂನಾ_ಪ್ಯಾಕ್ಟ್ ದಲಿತರ ಬದುಕನ್ನೇ ಕಿತ್ತುಕೊಂಡಿತು ಎನ್ನುವುದು

ಸಂಸದ ನಾರಾಯಣಸ್ವಾಮಿಯವರನ್ನು ಗೊಲ್ಲರು ತಮ್ಮ ಹಟ್ಟಿಗೆ ಬಿಟ್ಟುಕೊಳ್ಳದೆ ಸಂಸದರು ಅಂಗಲಾಚಿದರೂ ಒಪ್ಪದೇ ಹಟ್ಟಿಯಿಂದ ಹೊರಗೇ ಎಲ್ಲವನ್ನು ವಿಚಾರಿಸಿ ಅಟ್ಟಿದ್ದಾರೆ. ಸಂವಿಧಾನದ ಕಲಂ 17 ಅಸ್ಪೃಶ್ಯತೆ ನಿಷೇಧಿಸಲಾಗಿದೆ ಎನ್ನುತ್ತದೆ. ಆದರೆ ಈ ಘಟನೆಯಲ್ಲಿ ಕಾನೂನು ನಯಾಪೈಸೆಯ ಕೆಲಸ ಮಾಡಿಲ್ಲ, ಮಾಡಲ್ಲ. ಇದು ನಿಜ ಭಾರತದ ಸ್ಥಿತಿ. ಇರಲಿ. ಇಲ್ಲಿ ಸಂಸದರು ಆ ಅಮಾನವೀಯ ಜನರ ವಿರುದ್ಧ ಕ್ರಮ ಏಕೆ ಕೈಗೊಳ್ಳಲಿಲ್ಲ? ಅದಕ್ಕೆ ಕಾರಣ ಅವರೇ ಹೇಳಿದ್ದಾರೆ. ಶೇ. 80 ಗೊಲ್ಲ ಸಮುದಾಯ ಅವರಿಗೆ ಮತ ನೀಡಿ ಗೆಲ್ಲಿಸಿದೆ. ಹೀಗಿರುವಾಗ ಸಂಸದರೇನಾದರೂ ಕಾನೂನು ರೀತಿಯ ಕ್ರಮ ಕೈಗೊಂಡರೆ ಮುಂದಿನ ಬಾರಿ ಅವರು ಸೋಲುವುದು ಖಚಿತ.

ಈ ಕಾರಣಕ್ಕಾಗಿಯೇ ಅಂಬೇಡ್ಕರರು 1933 ರ ಪೂನಾ ಒಪ್ಪಂದವನ್ನು ಕಂಠಮಟ್ಟ ವಿರೋಧಿಸಿದ್ದು. ಏಕೆಂದರೆ ದುಂಡು ಮೇಜಿನ ಸಭೆಯಲ್ಲಿ ದಲಿತರಿಗೆ ಎರಡು ಓಟು ನೀಡುವ ಹಕ್ಕು ಸಿಕ್ಕಿತ್ತು. ಆಂದರೆ ದಲಿತ ಮೀಸಲು ಕ್ಷೇತ್ರಗಳಲ್ಲಿ ದಲಿತರಿಂದ ದಲಿತರಿಗಾಗಿ ದಲಿತರಿಗೋಸ್ಕರ ಆರಿಸಿ ಬರುವ ದಲಿತರನ್ನು ಅಯ್ಕೆ ಮಾಡಲು ಒಂದು ಓಟು. ಅದೇ ಕ್ಷೇತ್ರದಲ್ಲಿ ದಲಿತೇತರರನ್ನು ಆಯ್ಕೆ ಮಾಡಲು ಒಂದು ಓಟು. ಇದನ್ನೇ ಪ್ರತ್ಯೇಕ ಮತಕ್ಷೇತ್ರವೆನ್ನುವರು. ಇವತ್ತು ಸಿಖ್ ಜನಾಂಗ ಬಲಿಷ್ಟವಾಗಿರುವುದಕ್ಕೆ ಕಾರಣ ಅವರಿಗೆ ದಕ್ಕಿದ ಪ್ರತ್ಯೇಕ ಮತಕ್ಷೇತ್ರವೇ ಆಗಿದೆ. ಆದರೆ ಇದು ದಲಿತರಿಗೆ ಸಿಗಲಿಲ್ಲ. ಇದಕ್ಕೆ ನೇರವಾಗಿ ಗಾಂಧಿಯವರನ್ನು ನಾವು ಹೊಣೆ ಮಾಡುತ್ತೇವೆ. ಅದು ಸತ್ಯವಾದರೂ ಅವರಷ್ಟೇ ಹೊಣೆಗಾರರು ಅವರಿಗೆ ಬೇಷರತ್ ಬೆಂಬಲ ನೀಡಿದ ಅಖಿಲ ಭಾರತ ಹಿಂದೂ ಮಹಾಸಭಾ, ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಗಾಂಧಿವಾದಿ ದಲಿತರು.

ಅಂಬೇಡ್ಕರರು ಜುಲೈ 1947 ರವರೆಗೂ ಹಾಗೂ ಸಂವಿಧಾನ ಸಭೆಯಲ್ಲೂ ಮತ್ತೆ ದಲಿತರಿಗೆ ಪ್ರತ್ಯೇಕ ಮತಕ್ಷೇತ್ರ ಸಿಗಬೇಕೆಂದು ಹೋರಾಡಿದರು. ಆದರೆ ಗಾಂಧಿವಾದಿ ದಲಿತರು ಹಾಗೂ ಕಾಂಗ್ರೆಸ್ ಅದನ್ನು ಕಂಠಮಟ್ಟ ವಿರೋಧಿಸಿ ಮೂಲೆಗುಂಪು ಮಾಡಿದರು. ಅವರ ಮುಂದೆ ಅಂಬೇಡ್ಕರ್ ಸೋಲೊಪ್ಪಲೇಬೇಕಾಯಿತು.

ಇಂದು ಯಾವುದೇ ದಲಿತ ಜನಪ್ರತಿನಿದಿ ಲೋಕಸಭೆಗೆ ಅಗಲೀ, ವಿಧಾನಸಭೆಗೆ ಆಗಲೀ ಆರಿಸಿ ಬರುತ್ತಿರುವುದು ದಲಿತೇತರರ ಓಟಿನಿಂದ. ದಲಿತರ ಓಟುಗಳಿಗೆ ಇಲ್ಲಿ ಬಿಡಿಗಾಸಿನ ಬೆಲೆಯಿಲ್ಲ. ಯಾವ ದಲಿತ ಅಥವಾ ಯಾವ ಜಾತಿಯ ದಲಿತ, ಶಾಸಕ ಅಥವಾ ಸಂಸದ ಆಗಬೇಕೆನ್ನುವುದನ್ನು ತೀರ್ಮಾನ ಮಾಡುವವರು ದಲಿತೇತರರೇ ಆಗಿರುವಾಗ ಯಾವ ದಲಿತ ರಾಜಕೀಯ ನಾಯಕ ತಾನೇ ದಲಿತೇತರರ ಓಟೆಂಬ ಭಿಕ್ಷೆಯ ವಿರುದ್ಧ ನಿಲ್ಲುತ್ತಾನೆ? ತನ್ನ ಸ್ವಾಭಿಮಾನವನ್ನು ತಾನೇ ಕೊಲೆ ಮಾಡಿಕೊಂಡು ಶಾಸಕ, ಸಂಸದನಾಗುತ್ತಾನೆ. ಅಷ್ಟೆ.

“ನನ್ನ ಮುತ್ತಾತಂದಿರು ಮತಾಂತರ ಆದದ್ದಕ್ಕೆ ಕಾರಣ ಇದು. ಅಂದು ಕೀಳು ಜಾತಿ ಅಂತ ಅವಮಾನಿಸಿದಿರಿ, ಇಂದು ದೇಶ ವಿರೋಧಿಗಳು ಅಂತ ಅನುಮಾನಿಸುತ್ತಿದ್ದೀರಿ” ಎಂದು ಅಬ್ದುಲ್ ಮುನೀರ್ ಪ್ರತಿಕ್ರಿಯಿಸಿದ್ದಾರೆ.

ಈ ಸಂಸದರಿಗೆ ದೇಶದ ಜ್ವಲಂತ ಸಮಸ್ಯೆ ಯಾವುದು ಎಂದು ಮನದಟ್ಟು ಮಾಡಿಕೊಟ್ಟ ಆ ಹಳ್ಳಿಗರಿಗೆ ವಂದನೆಗಳು. ಇನ್ನಾದರೂ ಅವರು ಸಂಸತ್ತಿನಲ್ಲಿ ಈ ಸಮಸ್ಯೆಯ ಬಗ್ಗೆ ದನಿ ಎತ್ತಬೇಕು. ಆಗಿಲ್ಲವೆಂದರೆ ಊರ ಹೊರಗೆ ಕುರ್ಚಿ ಹಾಕಿ ಕಾರ್ಯಕ್ರಮ ನಡೆಸಲಿ. ಅದೂ ಆಗಿಲ್ಲವೆಂದರೆ ರಾಜೀನಾಮೆ ನೀಡಿ ಹೋರಾಟಕ್ಕೆ ಮುಂದಾಗಲಿ ಎಂದು ಸಂತೋಷ್ ಗುಡ್ಡಿಯಂಗಡಿಯವರು ಪ್ರತಿಕ್ರಿಯಿಸಿದ್ದಾರೆ.

ಬೆಳಗ್ಗೆಯಿಂದ ಒಂದಷ್ಟು ಗೊಲ್ಲ ಸಮುದಾಯದ ಸ್ನೇಹಿತರು ಪೋನ್ ಮಾಡಿ ಸಂಸದರಿಗೆ ತಟ್ಟಿದ ಅಸ್ಪೃಶ್ಯತೆ ಬಗ್ಗೆ ತೀವ್ರ ಸಂಕಟ ಹೊರಹಾಕಿದರು..ಅರಿವು ,ಬದ್ದತೆ ಇರುವ ಆ ಸಮುದಾಯದ ಗೆಳೆಯರೊಂದಿಗೆ ನಾವೆಲ್ಲರೂ ಸೇರಿ ಜಾಗೃತಿ ಮೂಡಿಸುವ ಅಥವಾ ಮನಸ್ಸು ಗಳನ್ನ ಪರಿವರ್ತಿಸುವ ಕೆಲಸ ಈ ಕ್ಷಣದ ತುರ್ತು…
ಶಿಕ್ಷೆಯಿಂದ ಎಲ್ಲಾ ಬದಲಾಗುವಂತಿದ್ದರೆ ಹೆಚ್ಚೂಕಮ್ಮಿ ಮೌಡ್ಯ ಇರುವ ಎಲ್ಲಾ ಗೊಲ್ಲರಟ್ಟಿಯವರ ಮೇಲೆ ಎರಡೂ ದಲಿತ ದೌರ್ಜನ್ಯ ಪ್ರಕರಣಗಳು ದಾಖಲಗುತ್ತಿದ್ದವು .
ಹಟ್ಟಿಗಳ ಪರಿವರ್ತನೆ ಗೆ ಇದು ರೈಟ್ ಟೈಮ್ ಎಂದು ಕೊಟ್ಟ ಶಂಕರ್ ರವರು ತಿಳಿಸಿದ್ದಾರೆ.

ಈ ವಿಚಾರ ಪತ್ರಿಕೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಕೂಡಲೇ ಗೊಲ್ಲರಹಟ್ಟಿಯ ಜನ ಎಚ್ಚೆತ್ತುಕೊಂಡಿದ್ದಾರೆ. “ನಮ್ಮ ನಡವಳಿಕೆಗಳಿಂದ ಸಂಸದರಿಗೆ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ, ನೀವು ಮತ್ತೊಮ್ಮೆ ನಮ್ಮ ಹಟ್ಟಿಗೆ ಬಂದು ನಮ್ಮ ಸಮಸ್ಯೆ ಆಲಿಸಿ, ನಮಗೆಲ್ಲಾ ಮನೆ ಕಟ್ಟಿಕೊಡಿ” ಎಂದು ಮನವಿ ಮಾಡಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...