Homeಮುಖಪುಟ‘ಇತಿಹಾಸವೊಂದೇ ಅಂತಿಮ ತೀರ್ಪುಗಾರ’; ಸುಪ್ರೀಂ ತೀರ್ಪಿನ ಬಳಿಕ ಕಪಿಲ್ ಪ್ರತಿಕ್ರಿಯೆ

‘ಇತಿಹಾಸವೊಂದೇ ಅಂತಿಮ ತೀರ್ಪುಗಾರ’; ಸುಪ್ರೀಂ ತೀರ್ಪಿನ ಬಳಿಕ ಕಪಿಲ್ ಪ್ರತಿಕ್ರಿಯೆ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಬೆಂಬಲಿಸುವ ಸುಪ್ರೀಂಕೋರ್ಟಿನ ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ವಕೀಲ ಕಪಿಲ್ ಸಿಬಲ್, ‘ಕೆಲವು ಯುದ್ಧಗಳು ಕಳೆದುಹೋಗಲು ಹೋರಾಡುತ್ತವೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

2019ರ ಆಗಸ್ಟ್ ನಲ್ಲಿ ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಕೋರ್ಟಿನಲ್ಲಿ ಪ್ರಶ್ನಿಸಿದ್ದ ಅರ್ಜಿದಾರರ ಪರ ವಕೀಲರಾಗಿ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕೆಲವು ಯುದ್ಧಗಳು ಕಳೆದುಹೋಗಲು ಹೋರಾಡುತ್ತವೆ. ಇತಿಹಾಸವು ತಲೆಮಾರುಗಳಿಗೆ ಅಹಿತಕರವಾದ ಸಂಗತಿಗಳನ್ನು ದಾಖಲಿಸಬೇಕು. ಸಾಂಸ್ಥಿಕ ಕ್ರಮಗಳ ಸರಿ ಮತ್ತು ತಪ್ಪುಗಳು ಮುಂಬರುವ ವರ್ಷಗಳಲ್ಲಿ ಚರ್ಚೆಯಾಗುತ್ತವೆ. ಇತಿಹಾಸವೊಂದೇ ಅಂತಿಮ ತೀರ್ಪುಗಾರ; ಐತಿಹಾಸಿಕ ನಿರ್ಧಾರಗಳ ನೈತಿಕ ದಿಕ್ಸೂಚಿ’ ಎಂದು ಕಪಿಲ್ ಸಿಬಲ್ ಪ್ರತಿಕ್ರಿಯಿಸಿದ್ದಾರೆ.

ಕಾಶ್ಮೀರದಲ್ಲಿ ಆದಷ್ಟು ಬೇಗ ಚುನಾವಣೆ ನಡೆಸಬೇಕು: ಓವೈಸಿ

370ನೇ ವಿಧಿ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಂಎಂ ಮುಖಂಡ ಅಸಾದುದ್ದೀನ್ ಓವೈಸಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘2019ರಲ್ಲಿ ನಡೆದ ಸೆಮಿನಾರ್‌ನಲ್ಲಿ ಮಾತನಾಡಿದ ಸಿಜೆಐ, ‘ಸಾರ್ವಜನಿಕರ ಅನುಪಸ್ಥಿತಿಯಲ್ಲಿ ಅಧಿಕಾರವನ್ನು ಸ್ಥಾಪಿಸಿದವರಿಗೆ ಆ ಕುರಿತ ಚರ್ಚೆ ಯಾವಾಗಲೂ ಬೆದರಿಕೆಯಾಗಿರುತ್ತದೆ’ ಎಂದು ಹೇಳಿದ್ದರು. 356ನೇ ವಿಧಿಗೆ ಒಳಪಟ್ಟಿರುವಾಗ. ರಾಜ್ಯದಲ್ಲಿ ಚುನಾಯಿತ ವಿಧಾನಸಭೆ ಅಸ್ತಿತ್ವದಲ್ಲಿ ಇಲ್ಲದೆ ಇದ್ದರೂ ಇಡೀ ರಾಜ್ಯವನ್ನು ಕರ್ಫ್ಯೂನಲ್ಲಿ ಇರಿಸುವ ಮೂಲಕ ನೀವು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಬಹುದೇ ಎಂಬುದು ಪ್ರಶ್ನೆ’ ಎಂದಿದ್ದಾರೆ.

‘ಒಕ್ಕೂಟವು (ಫೆಡರಲಿಸಂ) ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಸುಪ್ರೀಂಕೋರ್ಟ್ ಬೊಮ್ಮಾಯಿ (ಎಸ್ಆರ್ ಬೊಮ್ಮಾಯಿ ತೀರ್ಪು) ತೀರ್ಪಿನಲ್ಲಿ ಹೇಳಿರುವುದನ್ನು ನಾವು ಸ್ಪಷ್ಟಪಡಿಸೋಣ. ಫೆಡರಲಿಸಂ ಎಂದರೆ ರಾಜ್ಯವು ತನ್ನದೇ ಆದ ಧ್ವನಿ ಹೊಂದಿದ್ದು, ಅದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಂಪೂರ್ಣ ಸ್ವಾತಂತ್ರ್ಯವನ್ನು ಹೊಂದಿದೆ. ರಾಜ್ಯದ ಕುರಿತು ವಿಧಾನಸಭೆ ಬದಲಿಗೆ ಲೋಕಸಭೆ ಹೇಗೆ ಮಾತನಾಡಬಹುದು? ಸಂವಿಧಾನದಲ್ಲಿ ವಿಧಾನಸಭೆ ಅಂಗೀಕರಿಸಬೇಕಾದ ನಿರ್ಣಯವನ್ನು ಸಂಸತ್ತು ಹೇಗೆ ಅಂಗೀಕರಿಸಬಹುದು? 370 ಅನ್ನು ರದ್ದುಪಡಿಸಿದ ವಿಧಾನವು ಸಾಂವಿಧಾನಿಕ ನೈತಿಕತೆಯ ಉಲ್ಲಂಘನೆಯಾಗಿದೆ. ಇನ್ನೂ ಕೆಟ್ಟ ನಿರ್ಧಾರವೆಂದರೆ, ಸ್ವತಂತ್ರ ರಾಜ್ಯದ ಸ್ಥಾನಮಾನ ರದ್ದುಗೊಳಿಸಿ ವಿಭಜಿಸಿರುವುದು. ಕೇಂದ್ರಾಡಳಿತ ಪ್ರದೇಶದ ತಳಮಟ್ಟಕ್ಕಿಳಿಸಿರುವುದು ಕಾಶ್ಮೀರದ ಜನರಿಗೆ ಒಕ್ಕೂಟ ಸರ್ಕಾರ ಎಸಗಿದ ಗಂಭೀರ ಮಹಾ ದ್ರೋಹವಾಗಿದೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

‘ನಾನು ಒಮ್ಮೆ ಹೇಳಿದ್ದೇನೆ, ಮತ್ತೊಮ್ಮೆ ಹೇಳುತ್ತೇನೆ. ಒಮ್ಮೆ ಇದನ್ನು ಕಾನೂನುಬದ್ಧಗೊಳಿಸಿದರೆ, ಚೆನ್ನೈ, ಕೋಲ್ಕತ್ತಾ, ಹೈದರಾಬಾದ್ ಅಥವಾ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ಅಡ್ಡಿಯಿಲ್ಲ. ಲಡಾಖ್ ಪ್ರಕರಣವನ್ನು ನೋಡೋಣ, ಇದು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ. ಅಲ್ಲಿ ಯಾವುದೇ ಪ್ರಜಾಸತ್ತಾತ್ಮಕ ಪ್ರಾತಿನಿಧ್ಯವಿಲ್ಲ’ ಎಂದು ಹೇಳಿದ್ದಾರೆ.

‘ರಾಜ್ಯವು ಭಾರತದ ಅವಿಭಾಜ್ಯ ಅಂಗ ಎಂಬುದರಲ್ಲಿ ಸಂದೇವಿಲ್ಲ. ಆದರೆ, ಒಂದು ಅವಿಭಾಜ್ಯ ಅಂಗವಾಗಿರುವುದರಿಂದ ಅದು ಒಕ್ಕೂಟದೊಂದಿಗೆ ವಿಶಿಷ್ಟವಾದ ಸಾಂವಿಧಾನಿಕ ಸಂಬಂಧವನ್ನು ಹೊಂದಿಲ್ಲ ಎಂದು ಅರ್ಥವಲ್ಲ. ಕಾಶ್ಮೀರದ ಸಂವಿಧಾನ ಸಭೆಯ ವಿಸರ್ಜನೆಯ ನಂತರ ಈ ಸಾಂವಿಧಾನಿಕ ಸಂಬಂಧವನ್ನು ಶಾಶ್ವತಗೊಳಿಸಲಾಯಿತು’ ಎಂದಿದ್ದಾರೆ.

‘ಒಕ್ಕೂಟದ ನಿರ್ಧಾರದಿಂದ ಸೋತವರು ಜಮ್ಮುವಿನ ಡೋಗ್ರಾಸ್ ಮತ್ತು ಲಡಾಖ್‌ನ ಬೌದ್ಧರು, ಅವರು ಜನಸಂಖ್ಯಾ ಬದಲಾವಣೆಯನ್ನು ಎದುರಿಸಬೇಕಾಗುತ್ತದೆ. ರಾಜ್ಯತ್ವವನ್ನು ಮರುಸ್ಥಾಪಿಸುವ ಬಗ್ಗೆ ಟೈಮ್‌ಲೈನ್‌ ಏಕೆ ಇಲ್ಲ? ಕಾಶ್ಮೀರದಲ್ಲಿ ದೆಹಲಿ ಆಡಳಿತಕ್ಕೆ ಈಗಾಗಲೇ ಐದು ವರ್ಷಗಳಾಗಿವೆ. 2024ರ ಲೋಕಸಭೆ ಚುನಾವಣೆ ಜತೆಗೆ ರಾಜ್ಯದಲ್ಲಿ ಆದಷ್ಟು ಬೇಗ ವಿಧಾನಸಭೆ ಚುನಾವಣೆ ನಡೆಯಬೇಕು’ ಎಂದು ಓವೈಸಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ; ತೀರ್ಪಿಗೂ ಮುನ್ನ ನಮ್ಮನ್ನು ಗೃಹಬಂಧನದಲ್ಲಿಟ್ಟಿದ್ದರು: ಒಮರ್ ಅಬ್ದುಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...