Homeಮುಖಪುಟಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ, ಸೆಕ್ಸ್‌ ವರ್ಕ್‌? ಸಂಸದೀಯ ಸಮಿತಿ ಸಲಹೆ ತಿರಸ್ಕರಿಸಿದ ಪಿಎಂ

ಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ, ಸೆಕ್ಸ್‌ ವರ್ಕ್‌? ಸಂಸದೀಯ ಸಮಿತಿ ಸಲಹೆ ತಿರಸ್ಕರಿಸಿದ ಪಿಎಂ

- Advertisement -
- Advertisement -

ಸ್ವಾತಂತ್ರ್ಯ ಪೂರ್ವದಲ್ಲಿ ಜಾರಿಯಾಗಿರುವ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಮುಂದಾಗಿರುವ ‘ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆ’ಗಳನ್ನು ಮಂಡಿಸಲು ಕೇಂದ್ರ ಸಂಪುಟ ಸಭೆಯು ಗೃಹ ಸಚಿವ ಅಮಿತ್ ಶಾ ಅವರಿಗೆ ಅನುಮತಿ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸೆಕ್ಸ್‌ವರ್ಕ್‌ ಮತ್ತು ಸಲಿಂಗ ಸಂಬಂಧಗಳನ್ನು ಕ್ರಿಮಿನಲ್ ವ್ಯಾಪ್ತಿಗೆ ತರುವುದಕ್ಕೆ ಗೃಹ ಇಲಾಖೆಗೆ ಸಂಸದೀಯ ಸ್ಥಾಯಿ ಸಮಿತಿ ನೀಡಿದ ಎರಡು ಪ್ರಮುಖ ಸಲಹೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಕಚೇರಿ ಒಪ್ಪಲಿಲ್ಲ ಎನ್ನಲಾಗಿದೆ. ಏಕೆಂದರೆ, ಇವುಗಳನ್ನು ಕ್ರಿಮಿನಲ್ ವ್ಯಾಪ್ತಿಗೆ ತರುವುದರಿಂದ ಸರ್ಕಾರವು ದೂರಗಾಮಿ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮುಖ್ಯವಾಗಿ, ಸುಪ್ರೀಂಕೋರ್ಟ್ ಮತ್ತು ಅದರ ತೀರ್ಪುಗಳಿಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗುತ್ತದೆ ಎಂಬ ಕಾರಣಕ್ಕೆ ನಿರಾಕರಿಸಿದೆ ಎನ್ನಲಾಗಿದೆ.

2023ರ ಭಾರತೀಯ ನ್ಯಾಯ ಸಂಹಿತಾ ಮಸೂದೆಯಲ್ಲಿ ವ್ಯಭಿಚಾರದ ಅಪರಾಧವನ್ನು ಉಳಿಸಿಕೊಳ್ಳಬೇಕೆಂದು ಸಮಿತಿಯು ಶಿಫಾರಸು ಮಾಡಿತ್ತು. ಆದರೆ 2018 ರಲ್ಲಿ ಸುಪ್ರೀಂಕೋರ್ಟ್ ಇದನ್ನು ಅಪರಾಧ ಎಂದು ಕರೆಯುವುದಕ್ಕೆ ನಿರಾಕರಿಸಿತ್ತು. ಈ ನಿರ್ಧಾರವು ಮಹಿಳೆಯರ ವಿರುದ್ಧ ತಾರತಮ್ಯವನ್ನು ಶಾಶ್ವತಗೊಳಿಸುತ್ತದೆ ಮತ್ತು ಮಹಿಳೆಯರ ಘನತೆಯನ್ನು ಕುಗ್ಗಿಸುತ್ತದೆ ಎಂದು ಹೇಳಿತ್ತು.

ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 377ರ ಅಡಿಯಲ್ಲಿ ಒಮ್ಮತವಿಲ್ಲದ ಕಾರ್ಯಗಳಿಗೆ ದಂಡ ವಿಧಿಸುವುದು ಸ್ಥಾಯಿ ಸಮಿತಿಯ ಮತ್ತೊಂದು ಶಿಫಾರಸು. ಒಪ್ಪಿಗೆಯ ವಯಸ್ಕರ ನಡುವಿನ ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವುದನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದರೂ ಸಹ, ಹೊಸ ಮಸೂದೆಯಲ್ಲಿ ಈ ನಿಬಂಧನೆಯನ್ನು ಉಳಿಸಿಕೊಳ್ಳಲು ಗೃಹ ಇಲಾಖೆ ಮನವಿ ಮಾಡಿದೆ. ಪುರುಷ, ಮಹಿಳೆ, ತೃತೀಯಲಿಂಗಿಗಳ ಸಮ್ಮತಿಯಿಲ್ಲದ ಲೈಂಗಿಕ ಅಪರಾಧಕ್ಕೆ ಶಿಕ್ಷೆ ವಿಧಿಸುವುದಕ್ಕೆ ಯಾವುದೇ ನಿಬಂಧನೆ ಇಲ್ಲ ಎಂದು ಹೇಳಿದ್ದಾರೆ.

ವ್ಯಭಿಚಾರದ ಅಪರಾಧದಲ್ಲಿ ಮಹಿಳೆಯ ಸ್ವಾಯತ್ತತೆಯನ್ನು ಕಡೆಗಣಿಸಿ ಪುರುಷನಿಗೆ ಮಾತ್ರ ದಂಡ ವಿಧಿಸುವ ಮೂಲಕ ಹೆಂಡತಿಯನ್ನು ಗಂಡನ ಆಸ್ತಿಯಂತೆ ಪರಿಗಣಿಸಲಾಗಿದೆ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಈ ಹಿಂದೆ ಹೇಳಿದೆ. ಸಂಸದೀಯ ಸಮಿತಿಯು ವೈವಾಹಿಕ ವ್ಯವಸ್ಥೆಯನ್ನು ಪವಿತ್ರವೆಂದು ಪರಿಗಣಿಸಲಾಗಿದೆ ಮತ್ತು ಭಾರತೀಯ ಸಮಾಜದಲ್ಲಿ ಅದನ್ನು ರಕ್ಷಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಆದರೆ, ಪ್ರಧಾನಿ ಕಚೇರಿ ಮತ್ತು ಸಚಿವ ಸಂಪುಟ ಈ ಶಿಫಾರಸನ್ನು ಒಪ್ಪಿಕೊಳ್ಳದಿರುವ ನಿರ್ಧಾರಕ್ಕೆ ಬಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ; ‘ಇತಿಹಾಸವೊಂದೇ ಅಂತಿಮ ತೀರ್ಪುಗಾರ’; ಸುಪ್ರೀಂ ತೀರ್ಪಿನ ಬಳಿಕ ಕಪಿಲ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...