Homeಮುಖಪುಟಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ ನಾಣು ಆಯ್ಕೆ: ಸಿಎಂ ಇಬ್ರಾಹಿಂ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ ನಾಣು ಆಯ್ಕೆ: ಸಿಎಂ ಇಬ್ರಾಹಿಂ

- Advertisement -
- Advertisement -

ಜನತಾದಳ ಸೆಕ್ಯೂಲರ್‌(ಜೆಡಿಎಸ್‌) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಕರ್ನಾಟಕ ರಾಜ್ಯಾಧ್ಯಕ್ಷ ಸಿಎಂ. ಇಬ್ರಾಹಿಂ ಅವರನ್ನು ಉಲ್ಲೇಖಿಸಿ ಡೆಕ್ಕಾನ್ ಹೆರಾಲ್ಡ್ ವರದಿ ಮಾಡಿದೆ.

ಬೆಂಗಳೂರಿನ ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್‌ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಗಿದೆ ಎಂದು ತಿಳಿದು ಬಂದಿದೆ.

ಸಭೆಯ ಬಳಿಕ ಮಾತನಾಡಿ ಸಿಎಂ ಇಬ್ರಾಹಿಂ “ಜಾತ್ಯತೀತ ಸಿದ್ಧಾಂತದ ಮೇಲೆ ನಿಂತಿರುವ ಜೆಡಿಎಸ್‌, ಮಹಾತ್ಮಾ ಗಾಂಧೀಜಿ ಅವರ ತತ್ವಗಳನ್ನು ಪಾಲಿಸುವ ಪಕ್ಷವಾಗಿದೆ. ಆದರೆ, ಗಾಂಧೀಜಿ ಅವರನ್ನು ವಿರೋಧಿಸುವವರೊಂದಿಗೆ ಜೆಡಿಎಸ್‌ ಸಖ್ಯ ಬೆಳೆಸುವುದು ಸರಿಯೇ?’ಎಂದು ಪ್ರಶ್ನಿಸಿದ್ದಾರೆ.

ಪಕ್ಷದಲ್ಲಿನ ಇತರರ ಅಭಿಪ್ರಾಯಕ್ಕೆ ಮನ್ನಣೆ ಕೊಡದೆ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದರೆ ಇದನ್ನು ಪ್ರಶ್ನಿಸುವ ಅಧಿಕಾರ ಪಕ್ಷದಲ್ಲಿರುವ ನಾನೂ ಸೇರಿದಂತೆ ಇತರರಿಗೂ ಇದೆ. ಗಾಂಧೀಜಿಯವರ ತತ್ವಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ಹೆಚ್.ಡಿ.ದೇವೇಗೌಡರ ವರ್ತನೆಯನ್ನು ಇಂದಿನ ಸಭೆಯಲ್ಲಿ ನಾವು ಖಂಡಿಸುತ್ತೇವೆ ಎಂದು ಇಬ್ರಾಹಿಂ ಹೇಳಿದ್ದಾರೆ.

ಎರಡು ಲೋಕಸಭಾ ಸ್ಥಾನ ಮತ್ತು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ದೇವೇಗೌಡರು 92ನೇ ವಯಸ್ಸಿನಲ್ಲಿ ತಮ್ಮ ಸಿದ್ದಾಂತವನ್ನು ತ್ಯಾಗ ಮಾಡಿದ್ದಾರೆ ಎಂದು ಸಿಎಂ ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ದೇವೇಗೌಡರಿಗೆ ಮೂರು ಅವಕಾಶಗಳನ್ನು ನೀಡಿದ್ದೆವು. ಅಕ್ಟೋಬರ್ 16ರಂದು ಬೆಂಗಳೂರಿನಲ್ಲಿ ಸಭೆ ಮಾಡಿದ್ದೆವು. ಎರಡನೇ ಸಭೆ ನವೆಂಬರ್ 9ರಂದು ಕೇರಳದಲ್ಲಿ ನಡೆಯಿತು. ಈ ಸಭೆ ಬಳಿಕ ಬಿಜೆಪಿ ಬೆಂಬಲಿಸುವ ನಿರ್ಧಾರ ಬದಲಿಸುವಂತೆ ನಾವು ದೇವೇಗೌಡರಿಗೆ ಮನವಿ ಮಾಡಿದ್ದೆವು. ಅವರು ನಿರ್ಧಾರ ಬದಲಿಸಲಿಲ್ಲ. ಹಾಗಾಗಿ, ಇಂದು (ಡಿ.11) ಸಭೆ ನಡೆಸಿ ದೇವೇಗೌಡರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ್ದೇವೆ. ನೂತನ ಅಧ್ಯಕ್ಷರಾಗಿ ಮಾಜಿ ಉಪಾಧ್ಯಕ್ಷ ಸಿ.ಕೆ ನಾಣು ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.

ನಾವು ಪಕ್ಷದ ಸಂಬಂಧ ಚುನಾವಣಾ ಆಯೋಗದ ಬಳಿ ಹೋಗುತ್ತೇವೆ. ಕಾನೂನು ಹೋರಾಟ ಮಾಡುತ್ತೇವೆ. ನಮ್ಮದೇ ನಿಜವಾದ ಜೆಡಿಎಸ್ ಪಕ್ಷ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.

ನವೆಂಬರ್ 17ರಂದು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಲಾಗಿತ್ತು. ಡಿಸೆಂಬರ್ 9ರಂದು ನಡೆದ ಜೆಡಿಎಸ್‌ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಇಬ್ರಾಹಿಂ ಮತ್ತು ಸಿ.ಕೆ ನಾಣು ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಗಿದೆ ಎಂದು ದೇವೇಗೌಡು ತಿಳಿಸಿದ್ದಾರೆ.

ಇದನ್ನೂ ಓದಿ : ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ, ಸಿ ಕೆ ನಾಣು ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...