HomeಮುಖಪುಟCM V/s Governor: ತಾರಕಕ್ಕೇರಿದ ಮುಸುಕಿನ ಗುದ್ದಾಟ; ಕೇರಳ ಸಿಎಂ ವಿರುದ್ಧ ಗಂಭೀರ ಆರೋಪ

CM V/s Governor: ತಾರಕಕ್ಕೇರಿದ ಮುಸುಕಿನ ಗುದ್ದಾಟ; ಕೇರಳ ಸಿಎಂ ವಿರುದ್ಧ ಗಂಭೀರ ಆರೋಪ

- Advertisement -
- Advertisement -

ತಮ್ಮ ಬೆಂಗಾವಲು ವಾಹನದ ಮೇಲೆ ಕಿಡಿಗೇಡಿಗಳು ದಾಳಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ‘ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನನ್ನ ಮೇಲೆ ದೈಹಿಕ ಹಾನಿ ಮಾಡಲು ಸಂಚು ರೂಪಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.

ರಾಜ್ಯಪಾಲರು ದೆಹಲಿಗೆ ತೆರಳಲು ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ರಾಜ್ಯ ರಾಜಕೀಯದಲ್ಲಿ ಇದೀಗ ಬಿರುಗಾಳಿ ಎಬ್ಬಿಸಿದೆ.

ಈ ಕುರಿತು ಸೋಮವಾರ ಮಾತನಾಡಿರುವ ಗವರ್ನರ್ ಖಾನ್, ‘ಮುಖ್ಯಮಂತ್ರಿ ವಿಜಯನ್ ಅವರ ಪ್ರೇರಣೆಯಿಂದ ನನ್ನ ಮೇಲೆ ದೈಹಿಕ ಹಾನಿಯನ್ನುಂಟು ಮಾಡಲು ಸಂಘಟಿತ ಪ್ರಯತ್ನ ನಡೆಯುತ್ತಿದೆ. ಈ ಘಟನೆಯು ಆಕಸ್ಮಿಕವಲ್ಲ; ಬದಲಾಗಿ ಉದ್ದೇಶಪೂರ್ವಕವಾಗಿ ನನ್ನನ್ನು ಗುರಿಯಾಗಿಸಿಕೊಂಡು ನಡೆದ ಕೃತ್ಯ ಇದಾಗಿದೆ’ ಎಂದು ಅವರು ಹೇಳಿದ್ದಾರೆ.

ಸಿಪಿಐ (ಎಂ)ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ) ಸದಸ್ಯರು ಗೌವರ್ನರ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಂತರ ಖಾನ್ ಅವರು ಕೇರಳ ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

‘ಮುಖ್ಯಮಂತ್ರಿಗಳ ಕಾರ್ಯಕ್ರಮ ನಡೆಯುತ್ತಿರುವ ಸ್ಥಳಕ್ಕೆ ಪ್ರತಿಭಟನಾಕಾರ ಕಾರುಗಳನ್ನು ಅಲ್ಲಿಗೆ ಬಿಡಲು ಸಾಧ್ಯವೇ? ಪೊಲೀಸರು ಅದಕ್ಕೆ ಅವಕಾಶ ನೀಡುತ್ತಾರೆಯೇ? ನಾನು ಬರುವಾಗ ಪ್ರತಿಭಟನಾಕಾರರ ಕಾರುಗಳು ಅಲ್ಲಿ ನಿಂತಿದ್ದವು. ಘಟನೆ ನಂತರ ಪೊಲೀಸರು ಅವರು ತಳ್ಳಿದರು, ತಮ್ಮ ಕಾರುಗಳ ಮೂಲಕ ಅವರು ಓಡಿಹೋದರು’ ಎಂದು ಖಾನ್ ಹೇಳಿದರು.

‘ನನ್ನ ವಿರುದ್ಧ ಪಿತೂರಿ ಮಾಡುತ್ತಿರುವವರು ದೈಹಿಕವಾಗಿ ನೋಯಿಸಲು ಈ ಜನರನ್ನು ಕಳುಹಿಸುತ್ತಿದ್ದಾರೆ. ಗೂಂಡಾಗಳು ತಿರುವನಂತಪುರಂನ ರಸ್ತೆಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಕೇರಳದಲ್ಲಿ ಪ್ರಜಾಪ್ರಭುತ್ವದ ಹದಗೆಟ್ಟಿದೆ. ರಾಜಕೀಯ ಭಿನ್ನಾಭಿಪ್ರಾಯಗಳು ದೈಹಿಕ ಹಿಂಸೆಗೆ ಕಾರಣವಾಗಬಾರದು’ ಎಂದು ಅವರು ಹೇಳಿದರು.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ನನ್ನ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದರು. ಜತೆಗೆ, ನನ್ನ ವಾಹನದ ಎರಡೂ ಬದಿಗೆ ಹೊಡೆದರು. ನಾನು ನನ್ನ ಕಾರಿನಿಂದ ಇಳಿಯುತ್ತಿದ್ದಂತೆ ಅವರೇಕೆ ಓಡಿಹೋದರು? ಅವರೆಲ್ಲರೂ ಕಾರಿನಲ್ಲಿ ಕುಳಿತಿರುವ ಬಗ್ಗೆ ಪೊಲೀಸರಿಗೆ ಮೊದಲೇ ತಿಳಿದಿತ್ತು. ಮುಖ್ಯಮಂತ್ರಿಗಳೇ ಅವರಿಗೆ ನಿರ್ದೇಶನ ನೀಡುವಾಗ ಬಡ ಪೋಲೀಸರು ಏನು ಮಾಡುತ್ತಾರೆ’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ; ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...