Homeಮುಖಪುಟತೆಲಂಗಾಣ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಚುನಾವಣಾ ಆಯೋಗ

ತೆಲಂಗಾಣ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಚುನಾವಣಾ ಆಯೋಗ

- Advertisement -
- Advertisement -

ಚುನಾವಣಾ ಪೂರ್ಣ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ನಾಯಕ (ಈಗಿನ ಮುಖ್ಯಮಂತ್ರಿ) ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ, ಮಾದರಿ ನೀತಿ ಉಲ್ಲಂಘಿಸಿದ ಆರೋಪದಲ್ಲಿ ಅಮಾನತುಗೊಂಡಿದ್ದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರ ವಿರುದ್ಧದ ಆದೇಶವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಹಿಂಪಡೆದಿದೆ.

ಡಿಸೆಂಬರ್ 3ರಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗಲೇ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಅಂಜನಿ ಕುಮಾರ್ ಅವರು ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಹಾಗೂ ಮತ್ತೋರ್ವ ಹಿರಿಯ ಅಧಿಕಾರಿ ಮಹೇಶ್ ಭಾಗವತ್ ಅವರೊಂದಿಗೆ ಹೈದರಾಬಾದ್‌ನ ರೆಡ್ಡಿ ಅವರ ನಿವಾಸದಲ್ಲಿ ಭೇಟಿಯಾಗಿ ಪುಷ್ಪಗುಚ್ಛ ನೀಡಿದ್ದರು.

ರೆಡ್ಡಿ ಜೊತೆಗಿನ ಅಂಜನಿ ಕುಮಾರ್ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿತ್ತು. ಡಿಜಿಪಿ ಅವರು ಚುನಾವಣಾ ಕಣದಲ್ಲಿದ್ದ 2,290 ಅಭ್ಯರ್ಥಿಗಳು ಹಾಗೂ 16 ರಾಜಕೀಯ ಪಕ್ಷಗಳ ಪೈಕಿ ರಾಜಕೀಯ ಪಕ್ಷವೊಂದರ ಸ್ಟಾರ್ ಪ್ರಚಾರಕ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಲು ಆಯ್ಕೆ ಮಾಡಿಕೊಂಡಿರುವುದು ದುರುದ್ದೇಶದಿಂದ ಕೂಡಿರುವ ಸ್ಪಷ್ಟ ಸೂಚನೆಯಾಗಿದೆ. ಡಿಜಿಪಿಯ ಇಂತಹ ನಡೆಗಳು ಕಿರಿಯ ಅಧಿಕಾರಿಗಳ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಆಯೋಗ ಹೇಳಿದೆ.

ಅಂಜನಿ ಕುಮಾರ್ ಅಮಾನತುಗೊಂಡ ನಂತರ ಹಿರಿಯ ಐಪಿಎಸ್ ಅಧಿಕಾರಿ ರವಿ ಗುಪ್ತಾ ಅವರಿಗೆ ಡಿಜಿಪಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿತ್ತು. ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ತೆಲಂಗಾಣದ ಡಿಜಿಪಿ, ಪೊಲೀಸ್ ಪಡೆ ಮುಖ್ಯಸ್ಥ (ಎಚ್ಒಪಿಎಫ್) ಹುದ್ದೆಗೆ ರವಿ ಗುಪ್ತಾ ಅವರನ್ನು ಸಂಪೂರ್ಣ ಹೆಚ್ಚುವರಿ ಪ್ರಭಾರದಲ್ಲಿ ಇರಿಸಲಾಗಿದೆ ಎಂದು ತೆಲಂಗಾಣ ಮುಖ್ಯ ಕಾರ್ಯದರ್ಶಿ ಎ. ಶಾಂತಿ ಕುಮಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

1990ನೇ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿರುವ ಅಂಜನಿ ಕುಮಾರ್ ಒಂದು ವರ್ಷದ ಹಿಂದೆ ತೆಲಂಗಾಣದ ಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಮತ ಎಣಿಕೆ ನಡೆಯುತ್ತಿರುವಾಗ ಪಕ್ಷದ ನಾಯಕರೊಬ್ಬರನ್ನು ಭೇಟಿ ಮಾಡುವ ಮೂಲಕ ಸುದ್ದಿ ಮಾಡಿದ್ದರು.

ಅವರು ಈ ಹಿಂದೆ ಹೈದರಾಬಾದ್ ಪೊಲೀಸ್ ಆಯುಕ್ತರಾಗಿ, ತೆಲಂಗಾಣ ಭ್ರಷ್ಟಾಚಾರ ವಿರೋಧಿ ಬ್ಯುರೋದ (ಎಸಿಬಿ) ಮುಖ್ಯಸ್ಥರಾಗಿ, ಎಡಿಜಿಪಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ. ಈ ಹಿಂದೆ ಆಂಧ್ರಪ್ರದೇಶ ಸರ್ಕಾರ ನಕ್ಸಲ್ ನಿಗ್ರಹಕ್ಕೆ ರಚಿಸಿದ್ದ ವಿಶೇಷ ಕಾರ್ಯಪಡೆಗೆ ಅಂಜನಿ ಕುಮಾರ್ ಮುಖ್ಯಸ್ಥರಾಗಿ ಕಾರ್ಯನಿರ್ವಹಣೆ ಮಾಡಿದ್ದರು.

ತಮ್ಮ ಸೇವಾ ಅವಧಿಯಲ್ಲಿ ಅಂಜನಿ ಕುಮಾರ್ ಹಲವಾರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪೊಲೀಸ್ ಸೇವೆಗಾಗಿ ವಿಶ್ವಸಂಸ್ಥೆ ನೀಡುವ ಶಾಂತಿ ಪದಕವನ್ನು ಸಹ ಪಡೆದಿದ್ದು, ಗಣ್ಯರು, ವಿಐಪಿಗಳ ಭದ್ರತೆಯ ಉಸ್ತುವಾರಿಯನ್ನು ದಕ್ಷತೆಯಿಂದ ನೋಡಿಕೊಳ್ಳುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ; ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...