Homeಮುಖಪುಟತನಗಾಗಿ ಏನನ್ನಾದರು ಕೇಳುವುದಕ್ಕಿಂತ ಸಾಯುವುದೇ ಮೇಲು: ಶಿವರಾಜ್ ಸಿಂಗ್ ಚೌಹಾಣ್

ತನಗಾಗಿ ಏನನ್ನಾದರು ಕೇಳುವುದಕ್ಕಿಂತ ಸಾಯುವುದೇ ಮೇಲು: ಶಿವರಾಜ್ ಸಿಂಗ್ ಚೌಹಾಣ್

- Advertisement -
- Advertisement -

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರನ್ನು ಸೋಮವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಬೆನ್ನಲ್ಲೇ ಸಿಎಂ ಆಗಿದ್ದ ಶಿವರಾಜ್ ಸಿಂಗ್ ಚೌಹಾಣ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರಿಗೆ ಸಲ್ಲಿಸಿದ್ದಾರೆ.

ಸೋಮವಾರ ಭೋಪಾಲ್‌ನ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್‌ ಯಾದವ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಶಿವರಾಜ್‌ ಸಿಂಗ್ ಚೌಹಾಣ್ ಅವರು ನೂತನ ಸಿಎಂಗೆ ಹೂಗುಚ್ಚ ನೀಡಿ ಅಭಿನಂದಿಸಿದ್ದರು.

ಶಿವರಾಜ್ ಸಿಂಗ್ ಸಿಎಂ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು. ಚುನಾವಣಾ ಪೂರ್ವ ಮತ್ತು ನಂತರ ಚೌಹಾಣ್ ಅವರೇ ಮತ್ತೊಮ್ಮೆ ಸಿಎಂ ಆಗಿ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗ್ತಿತ್ತು. ಆದರೆ, ಶಾಸಕಾಂಗ ಪಕ್ಷದ ಸಭೆಯಲ್ಲಿ ಹೈಕಮಾಂಡ್‌ ಅಚ್ಚರಿಯ ಹೆಸರನ್ನು ಸಿಎಂ ಸ್ಥಾನಕ್ಕೆ ಘೋಷಣೆ ಮಾಡಿ ಶಿವರಾಜ್ ಸಿಂಗ್ ಸೇರಿದಂತೆ ಬಿಜೆಪಿ ರಾಜ್ಯ ನಾಯಕರಿಗೆ ಶಾಕ್ ನೀಡಿದೆ.

ಕಣ್ಣೀರಿಟ್ಟ ಮಹಿಳೆಯರು :

ಶಿವರಾಜ್ ಸಿಂಗ್ ಚೌಹಾಣ್ ಸಿಎಂ ಸ್ಥಾನದಿಂದ ಕೆಳಗಿಳಿದಿರುವುದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಇಂದು(ಡಿ.12) ಚೌಹಾಣ್ ಅವರನ್ನು ಭೇಟಿಯಾದ ಮಹಿಳಾ ಅಭಿಮಾನಿಗಳು ಚೌಹಾಣ್ ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟಿದ್ದಾರೆ. ಈ ವೇಳೆ ಶಿವಾರಾಜ್ ಸಿಂಗ್ ಅವರನ್ನು ಸಮಾಧಾನಪಡಿಸಿದ್ದಾರೆ. “ನನ್ನ ರಾಜೀನಾಮೆ ನಿರ್ಧಾರ ನನಗೆ ತೃಪ್ತಿ ತಂದಿದೆ” ಎಂದಿದ್ದಾರೆ.

ಸಾಯುವುದೇ ಮೇಲೂ..

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಜ್ ಸಿಂಗ್, “ನನ್ನ ರಾಜೀನಾಮೆ ನಿರ್ಧಾರದಿಂದ ನಾನು ಸಂಪೂರ್ಣ ತೃಪ್ತನಾಗಿದ್ದೇನೆ. 2005ರಲ್ಲಿ ನಾನು ಮುಖ್ಯಮಂತ್ರಿಯಾದಾಗ ಉಮಾ ಭಾರತಿಯವರ ಕಠಿಣ ಪರಿಶ್ರಮದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ನಾನು ಈಗ ಏನನ್ನಾದರು ಕೇಳುವುದಕ್ಕಿಂತ ಸಾಯುವುದೇ ಮೇಲೂ” ಎಂದಿದ್ದಾರೆ. ಈ ಮಾತನ್ನು ಸಿಎಂ ಸ್ಥಾನ ಕೈ ತಪ್ಪಿದ್ದಕ್ಕೆ ಹೈಕಮಾಂಡ್ ನಾಯಕರ ಮೇಲೆ ಮುನಿಸಿಕೊಂಡು ಹೇಳಿದ್ದಾರಾ? ಇಲ್ಲ, ನನಗೆ ಪಕ್ಷದಿಂದ ಏನೂ ಬೇಡ, ಪಕ್ಷ ಎಲ್ಲವೂ ಕೊಟ್ಟಿದೆ ಎಂಬ ದಾಟಿಯಲ್ಲಿ ಹೇಳಿದ್ದಾರಾ? ಗೊತ್ತಿಲ್ಲ.

ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರ ರಾಜೀನಾಮೆಯನ್ನು ಬೇರೆಯದ್ದೇ ರೀತಿಯಲ್ಲಿ ವ್ಯಾಖ್ಯಾನಿಸಲಾಗ್ತಿದೆ. ಹರ್ಷವರ್ಧನ್ ತಿವಾರಿ ಎಂಬ ಎಕ್ಸ್ ಬಳಕೆದಾರರೊಬ್ಬರು ಶಿವರಾಜ್ ಸಿಂಗ್ ಮಹಿಳಾ ಅಭಿಮಾನಿಗಳನ್ನು ಸಮಾಧಾನಪಡಿಸಿದ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಜೊತೆಗೆ, “ಇದು ದೆಹಲಿಗೆ ಸವಾಲೆಸೆಯುತ್ತಿರುವ ಶಿವರಾಜ್ ಸಿಂಗ್ ಚೌಹಾಣ್ ಅವರ ಸ್ಟಂಟ್. ಅವರು ದೆಹಲಿಗೆ ಹೋಗುತ್ತಿಲ್ಲ ಎಂದಿದ್ದಾರೆ. ಯಾರೋ ಒಬ್ಬರು ಸಿಎಂ ಆಗಿರುವಾವ ಅವರು ಮಧ್ಯಪ್ರದೇಶದಲ್ಲಿ ನಿಂತು ಏನು ಮಾಡುತ್ತಾರೆ?. ಎಲ್ಲಾ ಉತ್ತರಗಳು ಈ ಪ್ರಶ್ನೆಯಲ್ಲಿವೆ. ಶಿವರಾಜ್ ಸಿಂಗ್ ಮಧ್ಯಪ್ರದೇಶದಲ್ಲಿ ಏನೋ ದೊಡ್ಡ ಪ್ಲಾನ್ ಮಾಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜಸ್ಥಾನದಲ್ಲಿ ವಸುಂಧರ ರಾಜೇ ಸಿಎಂ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದರು. ಎರಡೂ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲು ಇವರ ಪಾತ್ರ ಬಹಳಷ್ಟಿದೆ. ಆದರೆ, ಇಬ್ಬರಿಗೂ ಸಿಎಂ ಸ್ಥಾನ ಕೈ ತಪ್ಪಿದೆ. ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಅವಧಿಗೂ ಮುನ್ನ ಸಿಎಂ ಸ್ಥಾನದಿಂದ ಕೆಳಗಿಳಿದ ರೀತಿಯ ಪರಿಸ್ಥಿತಿ ಈ ಇಬ್ಬರು ಕೇಸರಿ ನಾಯಕರಿಗೂ ಆಗಿದೆ. ಹೀಗಿರುವಾಗ ಇಬ್ಬರ ಮುಂದಿನ ನಡೆ ಏನು? ಎಂಬುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...