Homeಮುಖಪುಟರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು, ಚುನಾವಣಾ ಆಯುಕ್ತರ ನೇಮಕ ನಿಯಂತ್ರಣ ಮಸೂದೆ ಅಂಗೀಕಾರ

ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು, ಚುನಾವಣಾ ಆಯುಕ್ತರ ನೇಮಕ ನಿಯಂತ್ರಣ ಮಸೂದೆ ಅಂಗೀಕಾರ

- Advertisement -
- Advertisement -

ರಾಜ್ಯಸಭೆಯಲ್ಲಿ ಇಂದು (ಡಿಸೆಂಬರ್ 12) ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ, 2023 ಅಂಗೀಕಾರಗೊಂಡಿದೆ.

ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರು (EC)ಗಳ ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿಯನ್ನು ನಿಯಂತ್ರಿಸುವ ಗುರಿಯನ್ನು ಈ ಮಸೂದೆ ಹೊಂದಿದೆ. ಜೊತೆಗೆ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಕಾರ್ಯವಿಧಾನವನ್ನು ಇದು ವಿವರಿಸುತ್ತದೆ.

ಆಗಸ್ಟ್ 10 ರಂದು ಪರಿಚಯಿಸಿದ ಈ ಮಸೂದೆಯನ್ನು ಇಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದರು. ಸಂಸತ್ತಿನ ಮೇಲ್ಮನೆಯಲ್ಲಿ ಸಂಪೂರ್ಣ ಚರ್ಚೆಯ ನಂತರ ಮಸೂದೆ ಅಂಗೀಕಾರಗೊಂಡಿತು.

ಮಸೂದೆಯ ಪ್ರಮುಖ ನಿಬಂಧನೆಗಳು ಚುನಾವಣಾ ಆಯೋಗದ (ಚುನಾವಣಾ ಆಯುಕ್ತರ ಸೇವಾ ನಿಯಮಗಳು ಮತ್ತು ವ್ಯವಹಾರದ ವಹಿವಾಟು) ಕಾಯಿದೆ, 1991ನ್ನು ಬದಲಿಸಲಿದೆ. ಹೊಸ ಮಸೂದೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸಂಬಳ ಮತ್ತು ವಜಾಗೊಳಿಸುವಿಕೆಯಂತಹ ಅಂಶಗಳನ್ನು ಒಳಗೊಂಡಿದೆ.

ಪ್ರಧಾನ ಮಂತ್ರಿ, ಕೇಂದ್ರ ಸಂಪುಟ ಸಚಿವರು, ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯ ಅತಿದೊಡ್ಡ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳನ್ನು ನೇಮಿಸಲಿದ್ದಾರೆ. ಪೂರ್ಣ ಸಮಿತಿಯ ಅನುಪಸ್ಥಿತಿಯಲ್ಲಿಯೂ ಈ ಸಮಿತಿಯ ಶಿಫಾರಸುಗಳು ಮಾನ್ಯವಾಗಿರುತ್ತವೆ. ಕಾನೂನು ಸಚಿವರ ನೇತೃತ್ವದ ಶೋಧನಾ ಸಮಿತಿಯು ಆಯ್ಕೆ ಸಮಿತಿಗೆ ಹೆಸರುಗಳನ್ನು ಪ್ರಸ್ತಾಪಿಸುತ್ತದೆ. ಅರ್ಹತಾ ಮಾನದಂಡಗಳೊಂದಿಗೆ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಕಾರ್ಯದರ್ಶಿಗೆ ಸಮಾನವಾದ ಸ್ಥಾನವನ್ನು ಹೊಂದಿರಬೇಕು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳಿಗೆ ವೇತನ ಮತ್ತು ಸೇವಾ ಷರತ್ತುಗಳನ್ನು ಸಂಪುಟ ಕಾರ್ಯದರ್ಶಿಗೆ ಸಮನಾಗಿ ಹೊಂದಿಸಲಾಗಿದೆ. ಇದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವೇತನಕ್ಕೆ ಸಮಾನಾಗಿ ಇದ್ದ ನಿಯಮವನ್ನು ಬದಲಿಸಲಿದೆ.

ಪ್ರಸ್ತಾವಿತ ಬದಲಾವಣೆಗಳು ಚುನಾವಣಾ ಆಯೋಗದ ಸ್ಥಾನಮಾನವನ್ನು ಕೆಳಮಟ್ಟಕ್ಕಿಳಿಸಲಿದೆ ಎಂದು ಪ್ರತಿಪಾದಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತರಗಳು ವೇತನ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ, ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳ ವೇತನ ಮತ್ತು ಸವಲತ್ತುಗಳನ್ನು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ಮಟ್ಟದಲ್ಲಿ ಮುಂದುವರೆಸಲು ಮಸೂದೆಯಲ್ಲಿ ತಿದ್ದುಪಡಿ ಮಾಡಿದೆ.

ಆಯ್ಕೆ ಸಮಿತಿಯಿಂದ ಸಿಜೆಐ ಹೊರಕ್ಕೆ!

ಗಮನಾರ್ಹವಾಗಿ, ಹೊಸ ಮಸೂದೆಯು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಹೊರಗಿಡಲಿದೆ. ಈ ವರ್ಷದ ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸಂಸತ್ತು ಕಾನೂನು ರೂಪಿಸುವವರೆಗೆ ಚುನಾವಣಾ ಆಯುಕ್ತರನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಆಯ್ಕೆ ಮಾಡುತ್ತದೆ ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠವು ಚುನಾವಣಾ ಆಯುಕ್ತರ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಮಸೂದೆ ಮಂಡಿಸಿ ಕಾನೂನು ರೂಪಿಸಲು ಮುಂದಾಗಿದೆ.

ಇದನ್ನೂ ಓದಿ : ಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ, ಸೆಕ್ಸ್‌ ವರ್ಕ್‌? ಸಂಸದೀಯ ಸಮಿತಿ ಸಲಹೆ ತಿರಸ್ಕರಿಸಿದ ಪಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...