Homeಮುಖಪುಟಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

ಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

- Advertisement -
- Advertisement -

ನಿಷ್ಪಕ್ಷಪಾತ ಸಂಶೋಧನಾ ಸಂಸ್ಥೆಯಾಗಿ ತನ್ನನ್ನು ತಾನು ಪ್ರಸ್ತುತಪಡಿಸಿಕೊಳ್ಳುತ್ತಿರುವ ಡಿಸಿನ್ಫೋ ಲ್ಯಾಬ್, (Disinfo Lab)ಯುಎಸ್‌ ಸರ್ಕಾರಿ ಅಧಿಕಾರಿಗಳು, ಸಂಶೋಧಕರು, ಮಾನವೀಯ ಗುಂಪುಗಳು ಮತ್ತು ಭಾರತೀಯ ಅಮೆರಿಕನ್ ಕಾರ್ಯಕರ್ತರನ್ನು ಭಾರತದ ವಿರುದ್ಧದ ಜಾಗತಿಕ ಪಿತೂರಿಯ ಭಾಗವಾಗಿ ಬಿಂಬಿಸಲು ಆಧಾರರಹಿತ ಸತ್ಯವನ್ನು ಬೆರೆಸಿದೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ಮೋದಿ ಪರ ಪ್ರಭಾವಿಗಳ ಸಹಾಯದಿಂದ ಡಿಸಿನ್ಫೋ ಲ್ಯಾಬ್‌ನ ಅಧಾರ ರಹಿತ ಆರೋಪಗಳು ಭಾರತೀಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಮೋದಿ ಪರ ವ್ಯಕ್ತಿ, ಗುಂಪು, ಸಂಸ್ಥೆಗಳು ಕೆಲವೊಮ್ಮೆ ತಮ್ಮ ಸ್ವಂತ ಮೌಲ್ಯ ವರ್ಧಿಸಿಕೊಳ್ಳಲು ಡಿಸಿನ್ಫೋ ಲ್ಯಾಬ್‌ನ ಸಂಶೋಧನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ನ ಗೆರ್ರಿ ಶಿಹ್, ಕ್ಲಾರಾ ಎನ್ಸ್ ಮೋರ್ಸ್ ಮತ್ತು ಪ್ರಾಂಶು ವರ್ಮಾ ಸಿದ್ಧಪಡಿಸಿದ ವರದಿ ಹೇಳಿದೆ.

ವಾಷಿಂಗ್ಟನ್ ಪೋಸ್ಟ್ ವರದಿ: Covert Indian operation seeks to discredit Modi’s critics in the U.S.

ಡಿಸಿನ್ಫೋ ಲ್ಯಾಬ್ ಸ್ಥಾಪಿಸಿರುವುದು ಮತ್ತು ಪ್ರಸ್ತುತ ಅದನ್ನು ನಡೆಸುತ್ತಿರುವುದು 39 ವರ್ಷದ ಗುಪ್ತಚರ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ದಿಬ್ಯಾ ಸತ್ಪತಿ ಅವರು. ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW)ನೊಂದಿಗೆ ಈ ಸಂಸ್ಥೆಗೆ ಸಂಬಂಧವಿದೆ ಎಂದು ವರದಿ ಆರೋಪಿಸಿದೆ.

ಸರಿ ಸುಮಾರು ಹನ್ನೆರಡು ಖಾಸಗಿ ಗುತ್ತಿಗೆದಾರರನ್ನು ಒಳಗೊಂಡಿರುವ ಈ ಸಂಸ್ಥೆಯು ನವ ದೆಹಲಿಯಿಂದ ಕಾರ್ಯನಿರ್ವಹಿಸುತ್ತಿದೆ. ಮೋದಿ ಸರ್ಕಾರದ ವಿದೇಶಿ ವಿಮರ್ಶಕರನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ರಹಸ್ಯ ಕಾರ್ಯಾಚರಣೆಗಳಲ್ಲಿ ಇದು ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ವರದಿ ಹೇಳಿದೆ.

ಡಿಸಿನ್ಫೋ ಲ್ಯಾಬ್ ಲ್ಯಾಬ್‌ನ ಚಟುವಟಿಕೆಗಳು ಹೆಚ್ಚಾಗಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆಯೋಜಿಸಿರುವ ಆನ್‌ಲೈನ್ ಪ್ರಚಾರದ ಪರವಾಗಿದೆ. ಇದು ದೇಶಿಯ ಮಿತಿಯನ್ನು ಮೀರಿ ಕಾರ್ಯ ನಿರ್ವಹಿಸುತ್ತಿದೆ. ಬಿಜೆಪಿಯ ಪ್ರಮುಖ ಸದಸ್ಯರು, ಗುಪ್ತಚರ ಮತ್ತು ಮಿಲಿಟರಿ ಅಧಿಕಾರಿಗಳು ಸೇರಿದಂತೆ ಬಲಪಂಥೀಯ ಭಾರತೀಯ, ಹಿಂದೂ ರಾಷ್ಟ್ರೀಯತಾವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳ ಮೇಲೆ ಇದು ಹೆಚ್ಚಿನ ಪ್ರಭಾವ ಬೀರುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಾದ ಎಕ್ಸ್ (ಟ್ವಿಟರ್) ಮೇಲೆ ಇದರ ಪ್ರಭಾವವನ್ನು ವರದಿ ಒತ್ತಿ ಹೇಳಿದೆ.

ವರದಿಯ ಪ್ರಕಾರ, ವಿಶ್ಲೇಷಕರು ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿ ಮತ್ತು ರಾಜಕೀಯ ಉದ್ದೇಶಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಶೀತಲ ಸಮರದ ಕಾಲದ ಕೆಜಿಬಿ (ರಷ್ಯಾದ ಗುಪ್ತಚರ ಸಂಸ್ಥೆ) ತಂತ್ರಗಳಿಗೆ ಇದು ಸಮಾನಾಂತರವಾಗಿದೆ ಎಂದಿದ್ದಾರೆ.

ವರದಿಯಲ್ಲಿ, ಭಾರತೀಯ ಗುಪ್ತಚರರು ಅಮೆರಿಕದ ವಿಮರ್ಶಕರನ್ನು ಅಪಖ್ಯಾತಿಗೊಳಿಸುವಲ್ಲಿ ನಿಜವಾಗಿಯೂ ತೊಡಗಿಸಿಕೊಂಡಿದ್ದರೆ, ಅದು ಭಿನ್ನಾಭಿಪ್ರಾಯದ ಬಗ್ಗೆ ಮೋದಿ ಸರ್ಕಾರದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಜ್ಞರು ಹೇಳಿರುವುದಾಗಿ ತಿಳಿಸಲಾಗಿದೆ.

ತನ್ನ 28 ಪ್ರಕಟಿತ ವರದಿಗಳಲ್ಲಿ, ಪಾಕಿಸ್ತಾನಿ ಗುಪ್ತಚರ, ಮುಸ್ಲಿಂ ಬ್ರದರ್‌ಹುಡ್ ಮತ್ತು ಬಿಲಿಯನೇರ್ ಜಾರ್ಜ್ ಸೊರೊಸ್‌ನಂತಹ ಘಟಕಗಳಿಂದ ಧನಸಹಾಯ ಪಡೆದಿರುವ ಮಹಾ ಜಾಲದಿಂದ ಭಾರತವು ದಾಳಿಗೆ ಒಳಗಾಗುತ್ತಿದೆ ಎಂದು ಡಿಸಿನ್ಫೋ ಲ್ಯಾಬ್ ಆಗಾಗ್ಗೆ ಚಿತ್ರಿಸಿದೆ.

ಈ ನಿಧಿಗಳು ಮತ್ತು ಡೆಮಾಕ್ರಟಿಕ್ ಪಕ್ಷದ ಸದಸ್ಯೆ, ಯುಎಸ್ ಪ್ರತಿನಿಧಿ ಪ್ರಮೀಳಾ ಜಯಪಾಲ್, ಇಂಡಿಯನ್ ಅಮೆರಿಕನ್ ಕಾರ್ಯಕರ್ತರು ಸೇರಿದಂತೆ ಮೋದಿಯವರನ್ನು ಟೀಕಿಸುವ ಯುಎಸ್ ಮೂಲದ ವಿವಿಧ ವ್ಯಕ್ತಿಗಳ ನಡುವೆ ಸಂಪರ್ಕ ಕಲ್ಪಿಸಿವೆ ಎಂದು ವರದಿ ಆರೋಪಿಸಿವೆ.

ಡಿಸಿನ್ಫೋ ಲ್ಯಾಬ್‌ನ ಆಧಾರ ರಹಿತ ವರದಿಗಳು ಮೋದಿ ಪರ ಪ್ರಭಾವಿಗಳ ಮೂಲಕ ದೂರದರ್ಶನ, ಮತ್ತು ಭಾರತೀಯ ಅಧಿಕಾರಿಗಳಿಂದ ಜಾಗತಿಕ ಮಟ್ಟದಲ್ಲಿ ಹಬ್ಬುತ್ತವೆ. ಪ್ರಮುಖ ಬಿಜೆಪಿ ಪರ ವ್ಯಕ್ತಿಗಳಾದ ತಜೀಂದರ್ ಬಗ್ಗಾ, ಸಂಜು ವರ್ಮಾ ಮತ್ತು ಕಪಿಲ್ ಮಿಶ್ರಾ ಅವರು ಡಿಸಿನ್ಫೋ ಲ್ಯಾಬ್ ವಿಷಯವನ್ನು ಹರಡಲು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ವರದಿಯು ಆರೋಪಿಸಿದೆ.

ಡಿಸಿನ್ಫೋ ಲ್ಯಾಬ್‌ನ ವರದಿಗಳು ಯುಎಸ್ ಸಂಸದರ ಮೇಲೆ ಪ್ರಭಾವ ಬೀರಿದ ನಿದರ್ಶನಗಳನ್ನು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ. ಭಾರತದ ಕೋವಿಡ್ ಸಾಂಕ್ರಾಮಿಕದ ಕುರಿತ ಪ್ರತಿಕ್ರಿಯೆ ಮತ್ತು ಜಾತಿ ಆಧಾರಿತ ತಾರತಮ್ಯದ ಶಾಸನದಂತಹ ವಿಷಯಗಳ ಮೇಲಿನ ಚರ್ಚೆಗಳನ್ನು ಇದು ಹುಟ್ಟು ಹಾಕಿದೆ. ಡಿಸಿನ್ಫೋ ಲ್ಯಾಬ್‌ನ ಕೆಲಸವು ಅಮೆರಿಕನ್ ನಾಗರಿಕರ ಮೇಲೆ ವಿದೇಶಿ ಪ್ರಭಾವ ಮತ್ತು ತಪ್ಪು ಮಾಹಿತಿಯ ಬಗ್ಗೆ ಕಳವಳವನ್ನು ಉಂಟುಮಾಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಅಕ್ರಮ ವಲಸಿಗರ ನಿಖರ ಮಾಹಿತಿ ಸಂಗ್ರಹ ಅಸಾಧ್ಯ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...