Homeಮುಖಪುಟಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

ಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

- Advertisement -
- Advertisement -

ನಿಷ್ಪಕ್ಷಪಾತ ಸಂಶೋಧನಾ ಸಂಸ್ಥೆಯಾಗಿ ತನ್ನನ್ನು ತಾನು ಪ್ರಸ್ತುತಪಡಿಸಿಕೊಳ್ಳುತ್ತಿರುವ ಡಿಸಿನ್ಫೋ ಲ್ಯಾಬ್, (Disinfo Lab)ಯುಎಸ್‌ ಸರ್ಕಾರಿ ಅಧಿಕಾರಿಗಳು, ಸಂಶೋಧಕರು, ಮಾನವೀಯ ಗುಂಪುಗಳು ಮತ್ತು ಭಾರತೀಯ ಅಮೆರಿಕನ್ ಕಾರ್ಯಕರ್ತರನ್ನು ಭಾರತದ ವಿರುದ್ಧದ ಜಾಗತಿಕ ಪಿತೂರಿಯ ಭಾಗವಾಗಿ ಬಿಂಬಿಸಲು ಆಧಾರರಹಿತ ಸತ್ಯವನ್ನು ಬೆರೆಸಿದೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ಮೋದಿ ಪರ ಪ್ರಭಾವಿಗಳ ಸಹಾಯದಿಂದ ಡಿಸಿನ್ಫೋ ಲ್ಯಾಬ್‌ನ ಅಧಾರ ರಹಿತ ಆರೋಪಗಳು ಭಾರತೀಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಮೋದಿ ಪರ ವ್ಯಕ್ತಿ, ಗುಂಪು, ಸಂಸ್ಥೆಗಳು ಕೆಲವೊಮ್ಮೆ ತಮ್ಮ ಸ್ವಂತ ಮೌಲ್ಯ ವರ್ಧಿಸಿಕೊಳ್ಳಲು ಡಿಸಿನ್ಫೋ ಲ್ಯಾಬ್‌ನ ಸಂಶೋಧನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ನ ಗೆರ್ರಿ ಶಿಹ್, ಕ್ಲಾರಾ ಎನ್ಸ್ ಮೋರ್ಸ್ ಮತ್ತು ಪ್ರಾಂಶು ವರ್ಮಾ ಸಿದ್ಧಪಡಿಸಿದ ವರದಿ ಹೇಳಿದೆ.

ವಾಷಿಂಗ್ಟನ್ ಪೋಸ್ಟ್ ವರದಿ: Covert Indian operation seeks to discredit Modi’s critics in the U.S.

ಡಿಸಿನ್ಫೋ ಲ್ಯಾಬ್ ಸ್ಥಾಪಿಸಿರುವುದು ಮತ್ತು ಪ್ರಸ್ತುತ ಅದನ್ನು ನಡೆಸುತ್ತಿರುವುದು 39 ವರ್ಷದ ಗುಪ್ತಚರ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ದಿಬ್ಯಾ ಸತ್ಪತಿ ಅವರು. ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW)ನೊಂದಿಗೆ ಈ ಸಂಸ್ಥೆಗೆ ಸಂಬಂಧವಿದೆ ಎಂದು ವರದಿ ಆರೋಪಿಸಿದೆ.

ಸರಿ ಸುಮಾರು ಹನ್ನೆರಡು ಖಾಸಗಿ ಗುತ್ತಿಗೆದಾರರನ್ನು ಒಳಗೊಂಡಿರುವ ಈ ಸಂಸ್ಥೆಯು ನವ ದೆಹಲಿಯಿಂದ ಕಾರ್ಯನಿರ್ವಹಿಸುತ್ತಿದೆ. ಮೋದಿ ಸರ್ಕಾರದ ವಿದೇಶಿ ವಿಮರ್ಶಕರನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ರಹಸ್ಯ ಕಾರ್ಯಾಚರಣೆಗಳಲ್ಲಿ ಇದು ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ವರದಿ ಹೇಳಿದೆ.

ಡಿಸಿನ್ಫೋ ಲ್ಯಾಬ್ ಲ್ಯಾಬ್‌ನ ಚಟುವಟಿಕೆಗಳು ಹೆಚ್ಚಾಗಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆಯೋಜಿಸಿರುವ ಆನ್‌ಲೈನ್ ಪ್ರಚಾರದ ಪರವಾಗಿದೆ. ಇದು ದೇಶಿಯ ಮಿತಿಯನ್ನು ಮೀರಿ ಕಾರ್ಯ ನಿರ್ವಹಿಸುತ್ತಿದೆ. ಬಿಜೆಪಿಯ ಪ್ರಮುಖ ಸದಸ್ಯರು, ಗುಪ್ತಚರ ಮತ್ತು ಮಿಲಿಟರಿ ಅಧಿಕಾರಿಗಳು ಸೇರಿದಂತೆ ಬಲಪಂಥೀಯ ಭಾರತೀಯ, ಹಿಂದೂ ರಾಷ್ಟ್ರೀಯತಾವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳ ಮೇಲೆ ಇದು ಹೆಚ್ಚಿನ ಪ್ರಭಾವ ಬೀರುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಾದ ಎಕ್ಸ್ (ಟ್ವಿಟರ್) ಮೇಲೆ ಇದರ ಪ್ರಭಾವವನ್ನು ವರದಿ ಒತ್ತಿ ಹೇಳಿದೆ.

ವರದಿಯ ಪ್ರಕಾರ, ವಿಶ್ಲೇಷಕರು ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿ ಮತ್ತು ರಾಜಕೀಯ ಉದ್ದೇಶಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಶೀತಲ ಸಮರದ ಕಾಲದ ಕೆಜಿಬಿ (ರಷ್ಯಾದ ಗುಪ್ತಚರ ಸಂಸ್ಥೆ) ತಂತ್ರಗಳಿಗೆ ಇದು ಸಮಾನಾಂತರವಾಗಿದೆ ಎಂದಿದ್ದಾರೆ.

ವರದಿಯಲ್ಲಿ, ಭಾರತೀಯ ಗುಪ್ತಚರರು ಅಮೆರಿಕದ ವಿಮರ್ಶಕರನ್ನು ಅಪಖ್ಯಾತಿಗೊಳಿಸುವಲ್ಲಿ ನಿಜವಾಗಿಯೂ ತೊಡಗಿಸಿಕೊಂಡಿದ್ದರೆ, ಅದು ಭಿನ್ನಾಭಿಪ್ರಾಯದ ಬಗ್ಗೆ ಮೋದಿ ಸರ್ಕಾರದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಜ್ಞರು ಹೇಳಿರುವುದಾಗಿ ತಿಳಿಸಲಾಗಿದೆ.

ತನ್ನ 28 ಪ್ರಕಟಿತ ವರದಿಗಳಲ್ಲಿ, ಪಾಕಿಸ್ತಾನಿ ಗುಪ್ತಚರ, ಮುಸ್ಲಿಂ ಬ್ರದರ್‌ಹುಡ್ ಮತ್ತು ಬಿಲಿಯನೇರ್ ಜಾರ್ಜ್ ಸೊರೊಸ್‌ನಂತಹ ಘಟಕಗಳಿಂದ ಧನಸಹಾಯ ಪಡೆದಿರುವ ಮಹಾ ಜಾಲದಿಂದ ಭಾರತವು ದಾಳಿಗೆ ಒಳಗಾಗುತ್ತಿದೆ ಎಂದು ಡಿಸಿನ್ಫೋ ಲ್ಯಾಬ್ ಆಗಾಗ್ಗೆ ಚಿತ್ರಿಸಿದೆ.

ಈ ನಿಧಿಗಳು ಮತ್ತು ಡೆಮಾಕ್ರಟಿಕ್ ಪಕ್ಷದ ಸದಸ್ಯೆ, ಯುಎಸ್ ಪ್ರತಿನಿಧಿ ಪ್ರಮೀಳಾ ಜಯಪಾಲ್, ಇಂಡಿಯನ್ ಅಮೆರಿಕನ್ ಕಾರ್ಯಕರ್ತರು ಸೇರಿದಂತೆ ಮೋದಿಯವರನ್ನು ಟೀಕಿಸುವ ಯುಎಸ್ ಮೂಲದ ವಿವಿಧ ವ್ಯಕ್ತಿಗಳ ನಡುವೆ ಸಂಪರ್ಕ ಕಲ್ಪಿಸಿವೆ ಎಂದು ವರದಿ ಆರೋಪಿಸಿವೆ.

ಡಿಸಿನ್ಫೋ ಲ್ಯಾಬ್‌ನ ಆಧಾರ ರಹಿತ ವರದಿಗಳು ಮೋದಿ ಪರ ಪ್ರಭಾವಿಗಳ ಮೂಲಕ ದೂರದರ್ಶನ, ಮತ್ತು ಭಾರತೀಯ ಅಧಿಕಾರಿಗಳಿಂದ ಜಾಗತಿಕ ಮಟ್ಟದಲ್ಲಿ ಹಬ್ಬುತ್ತವೆ. ಪ್ರಮುಖ ಬಿಜೆಪಿ ಪರ ವ್ಯಕ್ತಿಗಳಾದ ತಜೀಂದರ್ ಬಗ್ಗಾ, ಸಂಜು ವರ್ಮಾ ಮತ್ತು ಕಪಿಲ್ ಮಿಶ್ರಾ ಅವರು ಡಿಸಿನ್ಫೋ ಲ್ಯಾಬ್ ವಿಷಯವನ್ನು ಹರಡಲು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ವರದಿಯು ಆರೋಪಿಸಿದೆ.

ಡಿಸಿನ್ಫೋ ಲ್ಯಾಬ್‌ನ ವರದಿಗಳು ಯುಎಸ್ ಸಂಸದರ ಮೇಲೆ ಪ್ರಭಾವ ಬೀರಿದ ನಿದರ್ಶನಗಳನ್ನು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ. ಭಾರತದ ಕೋವಿಡ್ ಸಾಂಕ್ರಾಮಿಕದ ಕುರಿತ ಪ್ರತಿಕ್ರಿಯೆ ಮತ್ತು ಜಾತಿ ಆಧಾರಿತ ತಾರತಮ್ಯದ ಶಾಸನದಂತಹ ವಿಷಯಗಳ ಮೇಲಿನ ಚರ್ಚೆಗಳನ್ನು ಇದು ಹುಟ್ಟು ಹಾಕಿದೆ. ಡಿಸಿನ್ಫೋ ಲ್ಯಾಬ್‌ನ ಕೆಲಸವು ಅಮೆರಿಕನ್ ನಾಗರಿಕರ ಮೇಲೆ ವಿದೇಶಿ ಪ್ರಭಾವ ಮತ್ತು ತಪ್ಪು ಮಾಹಿತಿಯ ಬಗ್ಗೆ ಕಳವಳವನ್ನು ಉಂಟುಮಾಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಅಕ್ರಮ ವಲಸಿಗರ ನಿಖರ ಮಾಹಿತಿ ಸಂಗ್ರಹ ಅಸಾಧ್ಯ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...