Homeಮುಖಪುಟಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

ಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

- Advertisement -
- Advertisement -

ನಿಷ್ಪಕ್ಷಪಾತ ಸಂಶೋಧನಾ ಸಂಸ್ಥೆಯಾಗಿ ತನ್ನನ್ನು ತಾನು ಪ್ರಸ್ತುತಪಡಿಸಿಕೊಳ್ಳುತ್ತಿರುವ ಡಿಸಿನ್ಫೋ ಲ್ಯಾಬ್, (Disinfo Lab)ಯುಎಸ್‌ ಸರ್ಕಾರಿ ಅಧಿಕಾರಿಗಳು, ಸಂಶೋಧಕರು, ಮಾನವೀಯ ಗುಂಪುಗಳು ಮತ್ತು ಭಾರತೀಯ ಅಮೆರಿಕನ್ ಕಾರ್ಯಕರ್ತರನ್ನು ಭಾರತದ ವಿರುದ್ಧದ ಜಾಗತಿಕ ಪಿತೂರಿಯ ಭಾಗವಾಗಿ ಬಿಂಬಿಸಲು ಆಧಾರರಹಿತ ಸತ್ಯವನ್ನು ಬೆರೆಸಿದೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ಮೋದಿ ಪರ ಪ್ರಭಾವಿಗಳ ಸಹಾಯದಿಂದ ಡಿಸಿನ್ಫೋ ಲ್ಯಾಬ್‌ನ ಅಧಾರ ರಹಿತ ಆರೋಪಗಳು ಭಾರತೀಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಮೋದಿ ಪರ ವ್ಯಕ್ತಿ, ಗುಂಪು, ಸಂಸ್ಥೆಗಳು ಕೆಲವೊಮ್ಮೆ ತಮ್ಮ ಸ್ವಂತ ಮೌಲ್ಯ ವರ್ಧಿಸಿಕೊಳ್ಳಲು ಡಿಸಿನ್ಫೋ ಲ್ಯಾಬ್‌ನ ಸಂಶೋಧನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ನ ಗೆರ್ರಿ ಶಿಹ್, ಕ್ಲಾರಾ ಎನ್ಸ್ ಮೋರ್ಸ್ ಮತ್ತು ಪ್ರಾಂಶು ವರ್ಮಾ ಸಿದ್ಧಪಡಿಸಿದ ವರದಿ ಹೇಳಿದೆ.

ವಾಷಿಂಗ್ಟನ್ ಪೋಸ್ಟ್ ವರದಿ: Covert Indian operation seeks to discredit Modi’s critics in the U.S.

ಡಿಸಿನ್ಫೋ ಲ್ಯಾಬ್ ಸ್ಥಾಪಿಸಿರುವುದು ಮತ್ತು ಪ್ರಸ್ತುತ ಅದನ್ನು ನಡೆಸುತ್ತಿರುವುದು 39 ವರ್ಷದ ಗುಪ್ತಚರ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ದಿಬ್ಯಾ ಸತ್ಪತಿ ಅವರು. ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW)ನೊಂದಿಗೆ ಈ ಸಂಸ್ಥೆಗೆ ಸಂಬಂಧವಿದೆ ಎಂದು ವರದಿ ಆರೋಪಿಸಿದೆ.

ಸರಿ ಸುಮಾರು ಹನ್ನೆರಡು ಖಾಸಗಿ ಗುತ್ತಿಗೆದಾರರನ್ನು ಒಳಗೊಂಡಿರುವ ಈ ಸಂಸ್ಥೆಯು ನವ ದೆಹಲಿಯಿಂದ ಕಾರ್ಯನಿರ್ವಹಿಸುತ್ತಿದೆ. ಮೋದಿ ಸರ್ಕಾರದ ವಿದೇಶಿ ವಿಮರ್ಶಕರನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ರಹಸ್ಯ ಕಾರ್ಯಾಚರಣೆಗಳಲ್ಲಿ ಇದು ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ವರದಿ ಹೇಳಿದೆ.

ಡಿಸಿನ್ಫೋ ಲ್ಯಾಬ್ ಲ್ಯಾಬ್‌ನ ಚಟುವಟಿಕೆಗಳು ಹೆಚ್ಚಾಗಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆಯೋಜಿಸಿರುವ ಆನ್‌ಲೈನ್ ಪ್ರಚಾರದ ಪರವಾಗಿದೆ. ಇದು ದೇಶಿಯ ಮಿತಿಯನ್ನು ಮೀರಿ ಕಾರ್ಯ ನಿರ್ವಹಿಸುತ್ತಿದೆ. ಬಿಜೆಪಿಯ ಪ್ರಮುಖ ಸದಸ್ಯರು, ಗುಪ್ತಚರ ಮತ್ತು ಮಿಲಿಟರಿ ಅಧಿಕಾರಿಗಳು ಸೇರಿದಂತೆ ಬಲಪಂಥೀಯ ಭಾರತೀಯ, ಹಿಂದೂ ರಾಷ್ಟ್ರೀಯತಾವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳ ಮೇಲೆ ಇದು ಹೆಚ್ಚಿನ ಪ್ರಭಾವ ಬೀರುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಾದ ಎಕ್ಸ್ (ಟ್ವಿಟರ್) ಮೇಲೆ ಇದರ ಪ್ರಭಾವವನ್ನು ವರದಿ ಒತ್ತಿ ಹೇಳಿದೆ.

ವರದಿಯ ಪ್ರಕಾರ, ವಿಶ್ಲೇಷಕರು ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿ ಮತ್ತು ರಾಜಕೀಯ ಉದ್ದೇಶಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಶೀತಲ ಸಮರದ ಕಾಲದ ಕೆಜಿಬಿ (ರಷ್ಯಾದ ಗುಪ್ತಚರ ಸಂಸ್ಥೆ) ತಂತ್ರಗಳಿಗೆ ಇದು ಸಮಾನಾಂತರವಾಗಿದೆ ಎಂದಿದ್ದಾರೆ.

ವರದಿಯಲ್ಲಿ, ಭಾರತೀಯ ಗುಪ್ತಚರರು ಅಮೆರಿಕದ ವಿಮರ್ಶಕರನ್ನು ಅಪಖ್ಯಾತಿಗೊಳಿಸುವಲ್ಲಿ ನಿಜವಾಗಿಯೂ ತೊಡಗಿಸಿಕೊಂಡಿದ್ದರೆ, ಅದು ಭಿನ್ನಾಭಿಪ್ರಾಯದ ಬಗ್ಗೆ ಮೋದಿ ಸರ್ಕಾರದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಜ್ಞರು ಹೇಳಿರುವುದಾಗಿ ತಿಳಿಸಲಾಗಿದೆ.

ತನ್ನ 28 ಪ್ರಕಟಿತ ವರದಿಗಳಲ್ಲಿ, ಪಾಕಿಸ್ತಾನಿ ಗುಪ್ತಚರ, ಮುಸ್ಲಿಂ ಬ್ರದರ್‌ಹುಡ್ ಮತ್ತು ಬಿಲಿಯನೇರ್ ಜಾರ್ಜ್ ಸೊರೊಸ್‌ನಂತಹ ಘಟಕಗಳಿಂದ ಧನಸಹಾಯ ಪಡೆದಿರುವ ಮಹಾ ಜಾಲದಿಂದ ಭಾರತವು ದಾಳಿಗೆ ಒಳಗಾಗುತ್ತಿದೆ ಎಂದು ಡಿಸಿನ್ಫೋ ಲ್ಯಾಬ್ ಆಗಾಗ್ಗೆ ಚಿತ್ರಿಸಿದೆ.

ಈ ನಿಧಿಗಳು ಮತ್ತು ಡೆಮಾಕ್ರಟಿಕ್ ಪಕ್ಷದ ಸದಸ್ಯೆ, ಯುಎಸ್ ಪ್ರತಿನಿಧಿ ಪ್ರಮೀಳಾ ಜಯಪಾಲ್, ಇಂಡಿಯನ್ ಅಮೆರಿಕನ್ ಕಾರ್ಯಕರ್ತರು ಸೇರಿದಂತೆ ಮೋದಿಯವರನ್ನು ಟೀಕಿಸುವ ಯುಎಸ್ ಮೂಲದ ವಿವಿಧ ವ್ಯಕ್ತಿಗಳ ನಡುವೆ ಸಂಪರ್ಕ ಕಲ್ಪಿಸಿವೆ ಎಂದು ವರದಿ ಆರೋಪಿಸಿವೆ.

ಡಿಸಿನ್ಫೋ ಲ್ಯಾಬ್‌ನ ಆಧಾರ ರಹಿತ ವರದಿಗಳು ಮೋದಿ ಪರ ಪ್ರಭಾವಿಗಳ ಮೂಲಕ ದೂರದರ್ಶನ, ಮತ್ತು ಭಾರತೀಯ ಅಧಿಕಾರಿಗಳಿಂದ ಜಾಗತಿಕ ಮಟ್ಟದಲ್ಲಿ ಹಬ್ಬುತ್ತವೆ. ಪ್ರಮುಖ ಬಿಜೆಪಿ ಪರ ವ್ಯಕ್ತಿಗಳಾದ ತಜೀಂದರ್ ಬಗ್ಗಾ, ಸಂಜು ವರ್ಮಾ ಮತ್ತು ಕಪಿಲ್ ಮಿಶ್ರಾ ಅವರು ಡಿಸಿನ್ಫೋ ಲ್ಯಾಬ್ ವಿಷಯವನ್ನು ಹರಡಲು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ವರದಿಯು ಆರೋಪಿಸಿದೆ.

ಡಿಸಿನ್ಫೋ ಲ್ಯಾಬ್‌ನ ವರದಿಗಳು ಯುಎಸ್ ಸಂಸದರ ಮೇಲೆ ಪ್ರಭಾವ ಬೀರಿದ ನಿದರ್ಶನಗಳನ್ನು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ. ಭಾರತದ ಕೋವಿಡ್ ಸಾಂಕ್ರಾಮಿಕದ ಕುರಿತ ಪ್ರತಿಕ್ರಿಯೆ ಮತ್ತು ಜಾತಿ ಆಧಾರಿತ ತಾರತಮ್ಯದ ಶಾಸನದಂತಹ ವಿಷಯಗಳ ಮೇಲಿನ ಚರ್ಚೆಗಳನ್ನು ಇದು ಹುಟ್ಟು ಹಾಕಿದೆ. ಡಿಸಿನ್ಫೋ ಲ್ಯಾಬ್‌ನ ಕೆಲಸವು ಅಮೆರಿಕನ್ ನಾಗರಿಕರ ಮೇಲೆ ವಿದೇಶಿ ಪ್ರಭಾವ ಮತ್ತು ತಪ್ಪು ಮಾಹಿತಿಯ ಬಗ್ಗೆ ಕಳವಳವನ್ನು ಉಂಟುಮಾಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಅಕ್ರಮ ವಲಸಿಗರ ನಿಖರ ಮಾಹಿತಿ ಸಂಗ್ರಹ ಅಸಾಧ್ಯ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....