Homeಕರ್ನಾಟಕಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ಕಾಂಗ್ರೆಸ್‌

ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ಕಾಂಗ್ರೆಸ್‌

- Advertisement -
- Advertisement -

ಲೋಕಸಭೆಯಲ್ಲಿ ಸಂಸದರು ಚರ್ಚೆ ನಡೆಸುತ್ತಿರುವಾಗಲೇ ವೀಕ್ಷಕರ ಗ್ಯಾಲರಿ ಮೂಲಕ ಇಬ್ಬರು ಯುವಕರು ಸದನದ ಒಳಗೆ ಪ್ರವೇಶಿಸಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ‘300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ನಿಗೆ ದೇಶ ಕಾಯಲು ಸಾಧ್ಯವೇ? ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ? ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ’ ಎಂದು ಆರೋಪಿಸಿದೆ.

‘ಸಂಸತ್ತಿಗೆ ನುಗ್ಗಿದ ಘಾತುಕರು ಪಾಸ್ ಪಡೆದಿದ್ದು ಪ್ರತಾಪ್ ಸಿಂಹರಿಂದ. ಈ ದಾಳಿಕೊರರು ಪ್ರತಾಪ್ ಸಿಂಹ ಅವರ ಆಪ್ತ ವಲಯದವರೇ? ಪ್ರತಾಪ್ ಸಿಂಹರಿಂದಲೂ ಈ ದಾಳಿಯ ಷಡ್ಯಂತ್ರ ನಡೆದಿತ್ತೇ? ಈ ಎಲ್ಲಾ ಸಂಗತಿಗಳ ತನಿಖೆಗೆ ನಡೆಸಲು ಇದುವರೆಗೂ ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ? ದೇಶದಲ್ಲಿ ಭದ್ರತಾ ಲೋಪವಷ್ಟೇ ಅಲ್ಲ, ತನಿಖೆಯ ಲೋಪವೂ ನಡೆಯುತ್ತಿರುವುದೇಕೆ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಹಿಂದೆ 2001ರಲ್ಲಿ ಇದೇ ದಿನ ಸಂಸತ್ ಭವನದ ಮೇಲೆ ಉಗ್ರರ ದಾಳಿಯಾಗಿತ್ತು, ಆಗಲೂ ಬಿಜೆಪಿ ಆಡಳಿತವಿತ್ತು. ಈಗ ಸಂಸತ್ ಭವನದ ಒಳಗೆಯೇ ಭದ್ರತಾ ಲೋಪವಾಗಿದೆ. ಪುಲ್ವಾಮದಲ್ಲಿ ಯೋಧರನ್ನು ರಕ್ಷಿಸಲಾಗಲಿಲ್ಲ, ಸಂಸತ್ತಿನಲ್ಲಿ ಸಂಸದರನ್ನೂ ರಕ್ಷಿಸಲು ವಿಫಲವಾಗಿದೆ. ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ ಬಿರ್ಲಾ  ಅವರು ಕೂಡಲೇ ಪ್ರಾತಾಪ್ ಸಿಂಹ ಅವರನ್ನು ಈ ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದೆ.

‘2001ರ ಸಂಸತ್ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಲೋಕಸಭೆಯ ಒಳಗೆ ಭದ್ರತಾ ಉಲ್ಲಂಘನೆಯು ತೀವ್ರ ಕಳವಳಕಾರಿಯಾಗಿದೆ. ನಮ್ಮ ಸಂಸತ್ತು ದೇಶದ ಅತ್ಯಂತ ಉತ್ತಮವಾಗಿ ಸಂರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ ಮತ್ತು ಈ ಉಲ್ಲಂಘನೆಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಈ ಗಂಭೀರ ಭದ್ರತಾ ಲೋಪದ ತಳಹದಿಯನ್ನು ಪಡೆಯಲು ಸಂಪೂರ್ಣ ತನಿಖೆಯನ್ನು ಕೈಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆ ಮತ್ತೆ ಮರುಕಳಿಸುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ: ಬಂಧಿತ ಮನೋರಂಜನ್ ಮೈಸೂರು ನಿವಾಸಿ! ಮಗನನ್ನು ಗುರುತಿಸಿದ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...