Homeಕರ್ನಾಟಕ'ನನ್ನ ಮಗ ಮೋದಿ ಅಭಿಮಾನಿ' ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

‘ನನ್ನ ಮಗ ಮೋದಿ ಅಭಿಮಾನಿ’ ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

- Advertisement -
- Advertisement -

ಸಂಸತ್ತಿನ ಭಾರೀ ಭದ್ರತೆಯನ್ನು ಬೇದಿಸಿ, ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವಾಗ ಸದನದೊಳಗೆ ಜಿಗಿದು ಆತಂಕ ಸೃಷ್ಠಿಸಿದ್ದ ಇಬ್ಬರು ಯುವಕರಲ್ಲಿ ಒಬ್ಬನಾಗಿರುವ ಮನೋರಂಜನ್ ಅಪ್ಪಟ ನರೇಂದ್ರ ಮೋದಿ ಅಭಿಮಾನಿ ಎಂದು ಖುದ್ದು ಆತನ ತಂದೆ ದೇವರಾಜ್ ಗೌಡ ಹೇಳಿದ್ದಾರೆ.

ಘಟನೆ ನಂತರ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ‘ಪ್ರಧಾನಿಯವರ ಬಗ್ಗೆ ನನ್ನ ಮಗನಿಗೆ ಬಹಳ ಗೌರವ, ಒಳ್ಳೆಯ ಅಭಿಪ್ರಾಯ ಇತ್ತು. ಅಂಥಹ ಪ್ರಧಾನಿ ಸಿಕ್ಕಿರುವುದು ನಮಗೆ ಅದೃಷ್ಟ ಎನ್ನುತ್ತಿದ್ದ. ರಾಜಕೀಯ ಎಲ್ಲ ಬೇಡ ಎಂದು ಮಗನಿಗೆ ಹೇಳಿದ್ದೆ. ನಮ್ಮ ಕುಟುಂಬದ ಹಲವು ಮಂದಿ ರಾಜಕೀಯದಲ್ಲಿದ್ದರು’ ಎಂದು ಹೇಳಿದರು.

‘ಪ್ರತಾಪ್ ಸಿಂಹ ಅವರಿಗೆ ನಾವು ವೋಟ್ ಹಾಕುತ್ತೇವೆ, ನಮ್ಮ ಹೆಸರೇಳಿದ್ದಕ್ಕೆ ಅವರು ಪಾಸ್ ಕೊಟ್ಟಿರಬಹುದು, ಪಾಸ್ ಕೊಟ್ಟಿದ್ದರೆ ಅದನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಬೇಕಲ್ಲವೇ? ಪ್ರತಾಪ್ ಸಿಂಹ ಅವರನ್ನು ಎಂಪಿ ಮಾಡಿದ್ದೆ ನಾವು. ಈಗಲೂ ನಾವು ಅವರಿಗೇ ವೋಟ್ ಹಾಕುತ್ತೇವೆ. ಆದರೆ, ನನ್ನ ಮಗ ಮಾಡಿದ್ದು ತಪ್ಪು’ ಎಂದರು.

‘ಮಗ ಎಲ್ಲಿಗೆ ಓದರೂ, ಏನೇ ಮಾಡಿದರೂ ಮೂರೇ ದಿನಕ್ಕೆ ಮನೆಗೆ ಬರುತ್ತಿದ್ದ; ಆತನಿಗೆ ಯಾವುದೆ ಕೆಟ್ಟ ಚಟ ಇಲ್ಲ. ಪೋಷಕರು ಮಕ್ಕಳಿಗೆ ಒಳ್ಳೆಯದನ್ನೆ ಬಯಸುತ್ತಾರೆ. ನಾವೂ ಅದನ್ನೇ ಮಾಡಿದ್ದೇವೆ’ ಎಂದು ಹೇಳಿದರು.

‘ನನ್ನ ಮಗ ಕೆಟ್ಟದ್ದು ಮಾಡಿದ್ದರೆ ಅವನನ್ನು ಗಲ್ಲಿಗೇರಿಸಲಿ. ಸಮಾಜಕ್ಕೆ ಅನ್ಯಾಯ ಮಾಡಿದರೆ ಅವನು ನನ್ನ ಮಗನೇ ಅಲ್ಲ. ಅವನು ಕೆಟ್ಟ ಕೆಲಸ ಮಾಡುವವನಲ್ಲ; ಸಮಾಜಕ್ಕೆ ಒಳ್ಳೆಯದು ಮಾಡಬೇಕು ಎಂಬ ಕಾರಣಕ್ಕೆ ಅವನು ಒಂದು ಸಂಘಟನೆಯಲ್ಲಿದ್ದ. ನಾನು ಇದೆಲ್ಲಾ ಬೇಡ ಎಂದು ಬುದ್ಧಿ ಹೇಳಿದ್ದೆ. ಆದರೆ, ಅವನ ಅತಿಯಾದ ವಿದ್ಯಾಭ್ಯಾಸ ಹಾಗೂ ಓದು ಅವನಿಗೆ ಮುಳುವಾಗಿದೆ. ಇಂದು ನನ್ನ ಮಗ ಮಾಡಿರುವ ಕೆಲಸವನ್ನು ಯಾರೇ ಮಾಡಿದ್ದರೂ ಅವರನ್ನು ಗಲ್ಲಿಗೇರಿಸಬೇಕು’ ಎಂದರು.

‘ನನ್ನ ಮಗ ವಿದ್ಯಾಭ್ಯಾಸ ಮಾಡಿದ್ದು ಮೈಸೂರಿನಲ್ಲೆ, ಸೆಂಟ್ ಜೋಸೆಫ್ ಶಾಲೆಯಲ್ಲಿ ಓದಿಕೊಂಡಿದ್ದಾನೆ. ನಾವು ಮೂಲತಃ ಹಾಸನ ಜಿಲ್ಲೆ ಅರಕಲಗೂಡಿನವರಾಗಿದ್ದು, ನಮ್ಮದು ಕೃಷಿಕ ಕುಟುಂಬ. ಮಗನ ವಿದ್ಯಾಭ್ಯಾಕ್ಕಾಗಿ ನಾವು 15 ವರ್ಷಗಳ ಹಿಂದೆ ಮೈಸೂರಿಗೆ ಬಂದೆವು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅವನಿಗೆ ದೇವೇಗೌಡರು ಇಂಜಿನಿಯರಿಂಗ್ ಸೀಟು ಕೊಡಿಸಿದ್ದರು. ಅವನಿಗೋಸ್ಕರ ಕುರಿ ಸಾಗಾಣಿಕೆ ಹಾಗೂ ಕೋಳಿ ಸಾಗಾಣಿಕೆ ಮಾಡಿಕೊಟ್ಟಿದ್ದೇವೆ. ಮನೆ ಬಿಟ್ಟು ಎಲ್ಲೂ ಹೋಗುತ್ತಿರಲಿಲ್ಲ. ಆದರೆ, ಇತ್ತೀಚೆಗೆ ಬೆಂಗಳೂರಿ ಹೋಗಿ ಬರುತ್ತಿದ್ದ. ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದಿಕೊಂಡಿದ್ದ, 35 ವರ್ಷ ಆದರೂ ಆತ ಇನ್ನೂ ಮದುವೆ ಆಗಿರಲಿಲ್ಲ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...