Homeಕರ್ನಾಟಕ'ನನ್ನ ಮಗ ಮೋದಿ ಅಭಿಮಾನಿ' ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

‘ನನ್ನ ಮಗ ಮೋದಿ ಅಭಿಮಾನಿ’ ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

- Advertisement -
- Advertisement -

ಸಂಸತ್ತಿನ ಭಾರೀ ಭದ್ರತೆಯನ್ನು ಬೇದಿಸಿ, ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವಾಗ ಸದನದೊಳಗೆ ಜಿಗಿದು ಆತಂಕ ಸೃಷ್ಠಿಸಿದ್ದ ಇಬ್ಬರು ಯುವಕರಲ್ಲಿ ಒಬ್ಬನಾಗಿರುವ ಮನೋರಂಜನ್ ಅಪ್ಪಟ ನರೇಂದ್ರ ಮೋದಿ ಅಭಿಮಾನಿ ಎಂದು ಖುದ್ದು ಆತನ ತಂದೆ ದೇವರಾಜ್ ಗೌಡ ಹೇಳಿದ್ದಾರೆ.

ಘಟನೆ ನಂತರ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ‘ಪ್ರಧಾನಿಯವರ ಬಗ್ಗೆ ನನ್ನ ಮಗನಿಗೆ ಬಹಳ ಗೌರವ, ಒಳ್ಳೆಯ ಅಭಿಪ್ರಾಯ ಇತ್ತು. ಅಂಥಹ ಪ್ರಧಾನಿ ಸಿಕ್ಕಿರುವುದು ನಮಗೆ ಅದೃಷ್ಟ ಎನ್ನುತ್ತಿದ್ದ. ರಾಜಕೀಯ ಎಲ್ಲ ಬೇಡ ಎಂದು ಮಗನಿಗೆ ಹೇಳಿದ್ದೆ. ನಮ್ಮ ಕುಟುಂಬದ ಹಲವು ಮಂದಿ ರಾಜಕೀಯದಲ್ಲಿದ್ದರು’ ಎಂದು ಹೇಳಿದರು.

‘ಪ್ರತಾಪ್ ಸಿಂಹ ಅವರಿಗೆ ನಾವು ವೋಟ್ ಹಾಕುತ್ತೇವೆ, ನಮ್ಮ ಹೆಸರೇಳಿದ್ದಕ್ಕೆ ಅವರು ಪಾಸ್ ಕೊಟ್ಟಿರಬಹುದು, ಪಾಸ್ ಕೊಟ್ಟಿದ್ದರೆ ಅದನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಬೇಕಲ್ಲವೇ? ಪ್ರತಾಪ್ ಸಿಂಹ ಅವರನ್ನು ಎಂಪಿ ಮಾಡಿದ್ದೆ ನಾವು. ಈಗಲೂ ನಾವು ಅವರಿಗೇ ವೋಟ್ ಹಾಕುತ್ತೇವೆ. ಆದರೆ, ನನ್ನ ಮಗ ಮಾಡಿದ್ದು ತಪ್ಪು’ ಎಂದರು.

‘ಮಗ ಎಲ್ಲಿಗೆ ಓದರೂ, ಏನೇ ಮಾಡಿದರೂ ಮೂರೇ ದಿನಕ್ಕೆ ಮನೆಗೆ ಬರುತ್ತಿದ್ದ; ಆತನಿಗೆ ಯಾವುದೆ ಕೆಟ್ಟ ಚಟ ಇಲ್ಲ. ಪೋಷಕರು ಮಕ್ಕಳಿಗೆ ಒಳ್ಳೆಯದನ್ನೆ ಬಯಸುತ್ತಾರೆ. ನಾವೂ ಅದನ್ನೇ ಮಾಡಿದ್ದೇವೆ’ ಎಂದು ಹೇಳಿದರು.

‘ನನ್ನ ಮಗ ಕೆಟ್ಟದ್ದು ಮಾಡಿದ್ದರೆ ಅವನನ್ನು ಗಲ್ಲಿಗೇರಿಸಲಿ. ಸಮಾಜಕ್ಕೆ ಅನ್ಯಾಯ ಮಾಡಿದರೆ ಅವನು ನನ್ನ ಮಗನೇ ಅಲ್ಲ. ಅವನು ಕೆಟ್ಟ ಕೆಲಸ ಮಾಡುವವನಲ್ಲ; ಸಮಾಜಕ್ಕೆ ಒಳ್ಳೆಯದು ಮಾಡಬೇಕು ಎಂಬ ಕಾರಣಕ್ಕೆ ಅವನು ಒಂದು ಸಂಘಟನೆಯಲ್ಲಿದ್ದ. ನಾನು ಇದೆಲ್ಲಾ ಬೇಡ ಎಂದು ಬುದ್ಧಿ ಹೇಳಿದ್ದೆ. ಆದರೆ, ಅವನ ಅತಿಯಾದ ವಿದ್ಯಾಭ್ಯಾಸ ಹಾಗೂ ಓದು ಅವನಿಗೆ ಮುಳುವಾಗಿದೆ. ಇಂದು ನನ್ನ ಮಗ ಮಾಡಿರುವ ಕೆಲಸವನ್ನು ಯಾರೇ ಮಾಡಿದ್ದರೂ ಅವರನ್ನು ಗಲ್ಲಿಗೇರಿಸಬೇಕು’ ಎಂದರು.

‘ನನ್ನ ಮಗ ವಿದ್ಯಾಭ್ಯಾಸ ಮಾಡಿದ್ದು ಮೈಸೂರಿನಲ್ಲೆ, ಸೆಂಟ್ ಜೋಸೆಫ್ ಶಾಲೆಯಲ್ಲಿ ಓದಿಕೊಂಡಿದ್ದಾನೆ. ನಾವು ಮೂಲತಃ ಹಾಸನ ಜಿಲ್ಲೆ ಅರಕಲಗೂಡಿನವರಾಗಿದ್ದು, ನಮ್ಮದು ಕೃಷಿಕ ಕುಟುಂಬ. ಮಗನ ವಿದ್ಯಾಭ್ಯಾಕ್ಕಾಗಿ ನಾವು 15 ವರ್ಷಗಳ ಹಿಂದೆ ಮೈಸೂರಿಗೆ ಬಂದೆವು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅವನಿಗೆ ದೇವೇಗೌಡರು ಇಂಜಿನಿಯರಿಂಗ್ ಸೀಟು ಕೊಡಿಸಿದ್ದರು. ಅವನಿಗೋಸ್ಕರ ಕುರಿ ಸಾಗಾಣಿಕೆ ಹಾಗೂ ಕೋಳಿ ಸಾಗಾಣಿಕೆ ಮಾಡಿಕೊಟ್ಟಿದ್ದೇವೆ. ಮನೆ ಬಿಟ್ಟು ಎಲ್ಲೂ ಹೋಗುತ್ತಿರಲಿಲ್ಲ. ಆದರೆ, ಇತ್ತೀಚೆಗೆ ಬೆಂಗಳೂರಿ ಹೋಗಿ ಬರುತ್ತಿದ್ದ. ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದಿಕೊಂಡಿದ್ದ, 35 ವರ್ಷ ಆದರೂ ಆತ ಇನ್ನೂ ಮದುವೆ ಆಗಿರಲಿಲ್ಲ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...