Homeಮುಖಪುಟ‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

- Advertisement -
- Advertisement -

‘ಮುಟ್ಟು ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ; ಇದು ಮಹಿಳೆಯರ ಜೀವನ ಪಯಣದಲ್ಲಿ ಸಹಜ…’ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅಸೂಕ್ಷ್ಮ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದಾರೆ.

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಬುಧವಾರ ರಾಜ್ಯಸಭೆಯಲ್ಲಿ ಉತ್ತರಿಸಿ ಇರಾನಿ, ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ ಕಲ್ಪನೆಗೆ ವಿರೋಧ ವ್ಯಕ್ತಪಡಿಸಿದರು.

ಮಹಿಳೆಯರಿಗೆ ನಿರ್ದಿಷ್ಟ ಸಂಖ್ಯೆಯ ರಜೆ ನೀಡಲು ಕಂಪನಿಗಳಿಗೆ ಕಡ್ಡಾಯ ನಿಬಂಧನೆಗಳನ್ನು ವಿಧಿಸಲು ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಝಾ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಸ್ಮೃತಿ ಇರಾನಿ, ‘ಮುಟ್ಟಾಗದವರು ಮುಟ್ಟಿನ ಬಗ್ಗೆ ನಿರ್ದಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂಬ ಕಾರಣಕ್ಕಾಗಿ ಮಹಿಳೆಯರಿಗೆ ಸಮಾನ ಅವಕಾಶವನ್ನು ನಿರಾಕರಿಸುವ ವಿಚಾರಗಳನ್ನು ನಾವು ಪ್ರಸ್ತಾಪಿಸಬಾರದು’ ಎಂದು ಹೇಳಿದರು.

‘ಆರೋಗ್ಯ ಮತ್ತು ಕುಟುಂಬ ಕಲ್ಯಾಣವು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ಮುಟ್ಟಿನ ನೈರ್ಮಲ್ಯ ನೀತಿ ಕರಡನ್ನು ರೂಪಿಸಿದೆ. ಕೇಂದ್ರವು ಈಗಾಗಲೇ 10-19 ವಯಸ್ಸಿನ ಹುಡುಗಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸುವ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಕೇಂದ್ರ ಸರ್ಕಾರದ ಬೆಂಬಲಿತವಾಗಿದ್ದು, ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಿಂದ ಸ್ವೀಕರಿಸಿದ ಪ್ರಸ್ತಾವನೆಗಳನ್ನು ಸ್ವೀಕರಿಸಿ, ಆರೋಗ್ಯ ಮಿಷನ್ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ’ ಎಂದು ಇರಾನಿ ಹೇಳಿದರು.

‘ತಜ್ಞರೊಂದಿಗೆ ಸಮಾಲೋಚಿಸಿ ಆರೋಗ್ಯ ಸಚಿವಾಲಯವು ಮುಟ್ಟಿನ ನೈರ್ಮಲ್ಯ ನೀತಿ ಕರಡನ್ನು ರೂಪಿಸಿದೆ’ ಎಂದು ಹೇಳಿದ ಅವರು, ಋತುಚಕ್ರದ ನೈರ್ಮಲ್ಯವನ್ನು ಉತ್ತೇಜಿಸಲು ವಿವಿಧ ಸಚಿವಾಲಯಗಳು ಕೈಗೊಂಡ ಇತರ ಉಪಕ್ರಮಗಳನ್ನು ಸದನಕ್ಕೆ ವಿವರಿಸಿದರು.

ಸರ್ಕಾರಿ ಮಹಿಳಾ ನೌಕರರಿಗೆ ವಿಶೇಷ ಮುಟ್ಟಿನ ರಜೆಯ ವಿಷಯವು ಆರೋಗ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಆದ್ದರಿಂದ ವೇತನ ಸಹಿತ ರಜೆ ನೀಡುವ ಬಗ್ಗೆ ಪರಿಶೀಲಿಸಬಹುದು ಎಂದು ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಸಚಿವಾಲಯ ಹೇಳಿದ ಈ ವಿಚಾರ ಚರ್ಚೆಗೆ ಇದು ಬಂದಿದೆ.

ಆರೋಗ್ಯ ಸಚಿವಾಲಯವು ಸೋಮವಾರ ಸಂಸತ್ತಿನಲ್ಲಿ ಮಂಡಿಸಿದ ವರದಿಯ ಪ್ರಕಾರ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯದ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯು ತನ್ನ ವರದಿಯಲ್ಲಿ ‘ಋತುಸ್ರಾವವು ಹೆಚ್ಚಿನ ಮಹಿಳೆಯರನ್ನು ದುರ್ಬಲಗೊಳಿಸುತ್ತದೆ. ಕೆಲಸದ ಸ್ಥಳದಲ್ಲಿ ಅವರ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ’ ಎಂದು ಉಲ್ಲೇಖಿಸಿದೆ. ಯಾವುದೇ ವೈದ್ಯಕೀಯ ಪ್ರಮಾಣಪತ್ರ ಅಥವಾ ಸಮರ್ಥನೆಯನ್ನು ಪಡೆಯದೆ ಮಹಿಳೆಯರಿಗೆ ಮಾಸಿಕ ಅಥವಾ ವರ್ಷಕ್ಕೆ ಮಾಸಿಕ ರಜೆಗಳು, ಅನಾರೋಗ್ಯದ ರಜೆಗಳು ಹಾಗೂ ಅರ್ಧ ವೇತನದ ರಜೆಗಳನ್ನು ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ; ಭದ್ರತಾ ಲೋಪದ ಬಳಿಕ ಸಂಸತ್‌ಗೆ ಸಂದರ್ಶಕರ ಭೇಟಿ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...