Homeಅಂತರಾಷ್ಟ್ರೀಯಸೌದಿ ಮೇಲೆ ಯೆಮನ್ ದಾಳಿ: ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದುಬಾರಿ

ಸೌದಿ ಮೇಲೆ ಯೆಮನ್ ದಾಳಿ: ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದುಬಾರಿ

ಮೋದಿ ಅಧಿಕಾರಕ್ಕೆ ಬರುವುದಾದರೆ ಒಂದು ಲೀಟರ್ ಪೆಟ್ರೋಲಿಗೆ 100 ರೂ. ಬೇಕಾದರೂ ಕೊಡುತ್ತೇವೆ ಎಂಬ ಭಕ್ತರ ಭಂಡ ಭವಿಷ್ಯ ಸದ್ಯವೇ ನಿಜವಾಗುವ ಲಕ್ಷಣಗಳಿವೆ.

- Advertisement -
- Advertisement -

ಮೋದಿ ಅಧಿಕಾರಕ್ಕೆ ಬಂದಂದಿನಿಂದಲೂ ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಕಡಿಮೆ ಇದ್ದುದರ ಹೊರತಾಗಿಯೂ ಸರಕಾರ ಭಾರತೀಯ ಗ್ರಾಹಕರಿಗೆ ದುಬಾರಿ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲನ್ನು ಮಾರುತ್ತಾ ಬಂದಿದೆ. ಅರ್ಧ ದಶಕಕಾಲದಿಂದಲೂ ದಾಖಲೆ ಪ್ರಮಾಣದಲ್ಲಿ ಕಡಿಮೆಯಿದ್ದ ಕಚ್ಛಾ ತೈಲದ ಬೆಲೆಯು ಸೌದಿ ಅರೇಬಿಯಾದಲ್ಲಿ ತೆರೆದುಕೊಳ್ಳುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕಾರಣದಿಂದ ಭಾರೀ ಪ್ರಮಾಣದಲ್ಲಿ ಏರುವ ಸಾಧ್ಯತೆ ಇದೆ.

ಸೌದಿ ಅರೇಬಿಯಾದ ಅಬ್ಖೈಕ್ (ಪ್ರಪಂಚದಲ್ಲಿಯೇ ಅತೀದೊಡ್ಡ) ಮತ್ತು ಖುರೈಸ್‍ನಲ್ಲಿರುವ ಎರಡು ತೈಲ ಸಂಸ್ಕರಣಾ ಘಟಕಗಳ ಮೇಲೆ ಯೆಮೆನ್‍ನ ಹೌಥಿ ಬಂಡುಕೋರರು ಡ್ರೋನ್ ಮೂಲಕ ದಾಳಿ ನಡೆಸಿದ್ದಾರೆ. ಈ ದಾಳಿಗಳ ಪರಿಣಾಮವಾಗಿ ತೈಲಬೆಲೆ ದಾಖಲೆಯ 20 ಶೇಕಡಾ ನೆಗೆತ ಕಂಡಿದೆ. ಕೊಲ್ಲಿ ಯುದ್ಧದ ಸಂದರ್ಭದಲ್ಲಿ, ಅಂದರೆ, ಜನವರಿ 14, 1991ರ ನಂತರ ಇತಿಹಾಸದಲ್ಲಿಯೇ ಎರಡನೇ ಅತಿದೊಡ್ಡ ಪ್ರಮಾಣದ ಏರಿಕೆ ಇದಾಗಿದೆ. ತೈಲ ಬೆಲೆ ಈಗಿರುವ ಬ್ಯಾರಲ್‍ಗೆ 54 ಡಾಲರ್ ಮಟ್ಟದಿಂದ ಬ್ಯಾರಲ್‍ಗೆ 100 ಡಾಲರ್‍ಗೂ ಹೆಚ್ಚಿನ ಮಟ್ಟಕ್ಕೆ ಏರುವ ನಿರೀಕ್ಷೆ ಇದೆ.

ಸೆಪ್ಟೆಂಬರ್ 14ರಂದು ಯೆಮೆನಿ ಹೌಥಿ ಬಂಡುಕೋರರು ಹಾರಿಸಿದ ಡ್ರೋನ್ ಅಥವಾ ಕ್ರೂಸ್ ಕ್ಷಿಪಣಿಗಳಿಂದ ಅಬ್ಖೈಕ್‍ನಲ್ಲಿರುವ ಪ್ರಪಂಚದ ಅತ್ಯಂತ ದೊಡ್ಡ ತೈಲ ಸ್ಥಿರೀಕರಣ ಸೌಲಭ್ಯಕ್ಕೆ ಬೆಂಕಿ ಹತ್ತಿಕೊಂಡಿದೆ. ಸ್ಥಿರೀಕರಣವೆಂದರೆ, ಕಚ್ಛಾ ತೈಲವನ್ನು ಭಾಗಶಃ ಸಂಸ್ಕರಿಸಿ, ಅದರಲ್ಲಿ ಇರುವ ಹೈಡ್ರೋಜನ್ ಸಲ್ಫೈಡ್ ಅಂಶವನ್ನು ತೆಗೆದು, ಆವಿಯ ಒತ್ತಡವನ್ನು ಕಡಿಮೆ ಮಾಡುವ ಪ್ರಕ್ರಿಯೆ. ಇದರಿಂದ ಟ್ಯಾಂಕರ್ ಹಡಗುಗಳಲ್ಲಿ ತೈಲದ ಸಾಗಾಟ ಸುರಕ್ಷಿತವಾಗುತ್ತದೆ.

ಸೌದಿ ಸರಕಾರಿ ಸ್ವಾಮ್ಯದ ‘ಅರಾಮ್ಕೋ’ಗೆ ಸೇರಿದ ಈ ತೈಲ ಮತ್ತು ಅನಿಲ ಸಂಸ್ಕರಣಾ ಕೇಂದ್ರವು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಘಟಕವಾಗಿದ್ದು, ಅದು ಪ್ರಪಂಚದ ಅತ್ಯಂತ ದೊಡ್ಡ ಸಾಂಪ್ರದಾಯಿಕ ತೈಲ ಕ್ಷೇತ್ರವಾದ ಘವರ್ ಕ್ಷೇತ್ರವನ್ನು ನಿರ್ವಹಿಸುತ್ತದೆ. ಅಲ್ಲದೆ ರಫ್ತು ಟರ್ಮಿನಲ್‍ಗಳಾದ ರಾಸ್ ತನುರಾ (ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಸಮುದ್ರ ಮಧ್ಯದ ತೈಲ ಲೋಡಿಂಗ್ ಸೌಲಭ್ಯ) ಮತ್ತು ಜುಆಯಿಮಾಗೆ ತೈಲ ಪೂರೈಸುತ್ತದೆ. ಅಬ್ಖೈಕ್ ಪ್ರತಿದಿನ 68 ಲಕ್ಷ ಬ್ಯಾರಲ್ ತೈಲ ಸಂಸ್ಕರಿಸುತ್ತದೆ. ಸೌದಿಯ ತೈಲ ಮತ್ತು ಅನಿಲ ಉತ್ಪಾದನೆಯ ಮೂರನೇ ಎರಡರಷ್ಟು ಭಾಗ ಈ ಘಟಕದ ಮೂಲಕವೇ ಸಾಗುತ್ತದೆ.


ದಾಳಿಯ ಎರಡನೇ ಗುರಿ – ದೇಶದ ಎರಡನೇ ಅತಿದೊಡ್ಡ ತೈಲ ಕ್ಷೇತ್ರದ ಬಳಿ ಇರುವ, ದಿನಕ್ಕೆ 18 ಲಕ್ಷ ಬ್ಯಾರಲ್ ತೈಲ ಸಂಸ್ಕರಿಸುವ ಖುರೈಸ್ ಘಟಕ. ಈ ಎರಡೂ ಘಟಕಗಳು ಯೆಮೆನ್‍ನಿಂದ 1000 ಕಿ.ಮೀ.ಗೂ ಹೆಚ್ಚು ದೂರದಲ್ಲಿವೆ. ಅಬ್ಖೈಕ್‍ನ 17 ಸ್ಥಳಗಳು ಉರಿಯುತ್ತಿವೆಯಾದರೂ, ಒಟ್ಟು ಎಷ್ಟು ಹಾನಿ, ನಾಶ ಸಂಭವಿಸಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ.

ಪ್ರಪಂಚದ ಅತ್ಯಂತ ಬಡದೇಶಗಳಲ್ಲಿ ಒಂದಾಗಿರುವ ಯೆಮೆನ್, 2015ರಿಂದಲೂ ಸೌದಿ ಮತ್ತು ಯುಎಇ, ಪಾಶ್ಚಾತ್ಯ ಶಸ್ತ್ರಾಸ್ತ್ರಗಳ ಬೆಂಬಲದೊಂದಿಗೆ ನಡೆಸುತ್ತಿರುವ ಬರ್ಬರ ಯುದ್ಧವನ್ನು ಎದುರಿಸುತ್ತಿದೆ. ಹಾಗಾಗಿ ಅದಕ್ಕೆ ಪ್ರತಿರೋಧವಾಗಿ ಈ ದಾಳಿಗಳ ಹೊಣೆಯನ್ನು ಹೊತ್ತುಕೊಂಡಿದೆ. ಸೌದಿಯ ಬಾಂಬ್ ದಾಳಿ ಮತ್ತು ದಿಗ್ಬಂಧನದ ಪರಿಣಾಮವಾಗಿ ಯೆಮೆನ್‍ನ ಮೂರನೇ ಎರಡರಷ್ಟು ಪ್ರಜೆಗಳು ನಿರಾಶ್ರಿತರಾಗಿದ್ದು, ತೀವ್ರ ಅಪೌಷ್ಠಿಕತೆಯ ಹೊಸ್ತಿಲಲ್ಲಿದ್ದಾರೆ.

ಅಮೆರಿಕ ಪ್ರತಿಕ್ರಿಯೆ
ಇರಾನ್ ವಿರುದ್ಧದ ಅಮೆರಿಕ ಮತ್ತು ಸೌದಿ ನೇತೃತ್ವದ ಮಿತ್ರಕೂಟವು ಈ ಅವಕಾಶವನ್ನು ಇರಾನ್ ವಿರುದ್ಧ ದಾಳಿಯನ್ನು ಹೆಚ್ಚಿಸಲು ಬಳಸುತ್ತಿದೆ. ಯುಎಸ್‍ಎಯ ರಾಜ್ಯಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ ನೇರವಾಗಿ ಇರಾನನ್ನು ಹೊಣೆ ಮಾಡಿದ್ದರೆ, ಅಧ್ಯಕ್ಷ ಟ್ರಂಪ್ ಇದನ್ನೇ ಎರಡು ಬಾರಿ ಟ್ವೀಟ್ ಮಾಡಿದ್ದಾರೆ. ಒಬ್ಬ ಸೆನೆಟರ್ ಅಂತೂ ಇರಾನಿನ ತೈಲಕ್ಷೇತ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಸಲಹೆಯನ್ನೂ ನೀಡಿದ್ದಾರೆ. ಇರಾನಿನ ವಿದೇಶಾಂಗ ಮಂತ್ರಿ ಎಂ.ಜೆ. ಝರೀಫ್, ಪೋಂಪಿಯೋ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ. ಹೌಥಿಗಳು ನಡೆಸಿದ ದಾಳಿಗೆ ಇರಾನನ್ನು ಹೊಣೆ ಮಾಡುವ ಮೂಲಕ ಯುಎಸ್‍ಎ ತನ್ನ ‘ಗರಿಷ್ಟ ಒತ್ತಡ’ದ ವಿಫಲ ಧೋರಣೆಯಿಂದ ಹಿಂದೆ ಸರಿದು, ‘ಗರಿಷ್ಟ ಸಂಚಿನ’ ಧೋರಣೆ ಅನುಸರಿಸುತ್ತಿದೆ ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ.

ಸೌದಿಯ ಮೇಲಿನ ದಾಳಿಗಳ ಕುರಿತು ಆತಂಕ ವ್ಯಕ್ತಪಡಿಸಿರುವ ರಷ್ಯಾ ಮತ್ತು ಚೀನಾ, ಅವಸರದ ತೀರ್ಮಾನಗಳ ಕುರಿತು ಎಚ್ಚರಿಕೆ ನೀಡಿವೆ. ಯಾವುದೇ ತನಿಖೆ ಅಥವಾ ಸಾಕ್ಷ್ಯಾಧಾರಗಳು ಇಲ್ಲದೇ ಯುಎಸ್‍ಎಯ ಬಹಿರಂಗ ಮಿಲಿಟರಿ ಮಾತುಗಳು ಸ್ವೀಕಾರಾರ್ಹವಲ್ಲ ಎಂದು ಎರಡೂ ದೇಶಗಳ ವಿದೇಶಾಂಗ ಖಾತೆಗಳ ವಕ್ತಾರರು ಹೇಳಿಕೆ ನೀಡಿದ್ದಾರೆ. ರಷ್ಯಾದ ವಕ್ತಾರರು ಇನ್ನೂ ಮುಂದುವರಿದು, ಈ ದಾಳಿಗಳು ಯೆಮೆನ್‍ನಲ್ಲಿ ಮುಂದುವರಿಯುತ್ತಿರುವ ಬಿಕ್ಕಟ್ಟಿನ ನೇರ ಪರಿಣಾಮ’ ಎಂದು ಬಣ್ಣಿಸಿದ್ದಾರೆ.

“ಸೌದಿ ಅರೇಬಿಯಾ ನಮ್ಮ ಕ್ಷಿಪಣಿಗಳ ಖರೀದಿ ಪಟ್ಟಿಯು ಅದರ ಭದ್ರತೆಗೆ ಬೆದರಿಕೆ ಎಂಬ ನೆಪವೊಡ್ಡಿ ಯೆಮೆನ್‍ನ ಮೇಲೆ ಯುದ್ಧ ಸಾರಿತು. ಈಗ ನಾವು ಅವರ ತೈಲ ಕ್ಷೇತ್ರಗಳ ಮೇಲೆ ದಾಳಿ ನಡೆಸಿದಾಗ, ಅವರು ಯೆಮೆನನ್ನು ಬಿಟ್ಟು ಬೇರೆಯವರು ಇದನ್ನು ಮಾಡಿದ್ದಾರೆ ಎಂದು ದೂರಿದಾಗ ಆಶ್ಚರ್ಯವಾಗುತ್ತದೆ. ಇದು ಅವರ ಹೇಡಿತನವನ್ನು ತೋರಿಸುತ್ತದೆ” ಎಂದು ಹೌಥಿಗಳ ಅತ್ಯುನ್ನತ ರಾಜಕೀಯ ಮಂಡಳಿಯ ಸದಸ್ಯ ಮೊಹಮ್ಮದ್ ಅಲ್-ಬುಖೈತಿ ಹೇಳಿದ್ದಾರೆ.

ಇರಾನ್ ಮತ್ತು ನಂತರದಲ್ಲಿ ವೆನೆಜ್ಯೂಯೆಲಾ ವಿರುದ್ಧ ಅಮೆರಿಕದ ಏಕಪಕ್ಷೀಯ ಮತ್ತು ಕಾನೂನುಬಾಹಿರ ದಿಗ್ಬಂಧನ ಕಳೆದ ನವೆಂಬರ್‍ನಿಂದಲೇ ಜಾರಿಗೆ ಬಂದಿದೆ. ಅಲ್ಲಿಂದ ನಂತರ ಈ ಎರಡು ಬಿಕ್ಕಟ್ಟುಗಳು ಪ್ರಪಂಚವನ್ನು ಈಗಾಗಲೇ ತೈಲ ಮಾರುಕಟ್ಟೆಯ ಅಸ್ಥಿರತೆಯತ್ತ ತಳ್ಳಿವೆ. ಭಾರತವು ಅಮೆರಿಕದ ಒತ್ತಡಕ್ಕೆ ಮಣಿದು, ಏಪ್ರಿಲ್ 2019ರಿಂದ ಇರಾನಿನಿಂದ ತೈಲ ಖರೀದಿಯನ್ನು ನಿಲ್ಲಿಸಿತು. ಸೌದಿಯಿಂದಲೇ ಹೆಚ್ಚು ಆಮದು ಮಾಡಿಕೊಳ್ಳುತ್ತಿತ್ತು. ಆದುದರಿಂದ, ಒಂದು ಕಡೆ ಸೌದಿ ತೈಲದ ಕುರಿತ ಅಮೆರಿಕದ ಸುಳ್ಳು ಭರವಸೆ ಮತ್ತು ಇನ್ನೊಂದು ಕಡೆ ಇರಾನಿಗೆ ಭಾರತ ಕೈಕೊಟ್ಟ ಪರಿಣಾಮವಾಗಿ ಈ ಬಿಕ್ಕಟ್ಟಿನಿಂದ ಭಾರತವು ಗರಿಷ್ಟ ಬಾಧಿತವಾಗಲಿದೆ. ಭಾರತದ ಜನರು ತೈಲ ಬೆಲೆ ಹೆಚ್ಚಳದ ಜೊತೆಗೆ, ಅದರ ಪರಿಣಾಮವಾಗಿ ಉಂಟಾಗುವ ಸರಕು ಬೆಲೆಯೇರಿಕೆಯ ಪರಿಣಾಮವನ್ನೂ ಎದುರಿಸಲಿದ್ದಾರೆ. ಮೋದಿ ಮತ್ತವರ ಮಂತ್ರಿಗಳನ್ನು ಈ ಕುರಿತ ಪ್ರಶ್ನೆಗಳಿಂದ ರಕ್ಷಿಸಲು ಅತಿರೇಕದ ಉಡಾಫೆಗಳಲ್ಲಿ ಹೆಚ್ಚಳವನ್ನೂ ನಾವು ಕಾಣಬಹುದು.

ಒಟ್ಟಾರೆ ಆರ್ಥಿಕತೆಯು ಕುಂಠಿತಗೊಳ್ಳುತ್ತಿರುವ, ಬೆಳವಣಿಗೆಯ ಸೂಚ್ಯಂಕಗಳು ಕುಸಿಯುತ್ತಿರುವ ಮತ್ತು ಭಾರೀ ಪ್ರಮಾಣದಲ್ಲಿ ನಿರುದ್ಯೋಗ ಹೆಚ್ಚಿರುವ ಈ ಹೊತ್ತಿನಲ್ಲಿ ಭಾರತಕ್ಕೆ ಈ ತೈಲ ಬೆಲೆ ಏರಿಕೆಯು ಉರಿಯುವ ಬೆಂಕಿಗೆ ಪೆಟ್ರೋಲ್ ಸುರಿದಂತಾಗಬಹುದು!

  • ಭರತ್ ಹೆಬ್ಬಾಳ್
    ಅನುವಾದ: ನಿಖಿಲ್ ಕೋಲ್ಪೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...