Homeಮುಖಪುಟಲೋಕಸಭೆ ಭದ್ರತಾ ಲೋಪ: 'ಶೂ' ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

ಲೋಕಸಭೆ ಭದ್ರತಾ ಲೋಪ: ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

- Advertisement -
- Advertisement -

ಸಂಸತ್ ಭವನದ ಬಿಗಿ ಭದ್ರತೆ ದಾಟಿ ಲೋಕಸಭೆಯೊಳಗೆ ಪ್ರವೇಶಿಸಿ, ‘ಕಲರ್ ಸ್ಮೋಕ್’ ದಾಳಿ ನಡೆಸಿದ್ದವರಲ್ಲಿ ಒಬ್ಬನಾಗಿರುವ ಮೈಸೂರು ನಿವಾಸಿ ಮನೋರಂಜನ್, ಸಂಸತ್ತಿನಲ್ಲಿ ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಎಂದು ತಿಳಿದುಬಂದಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಂದ ಪ್ರವೇಶ ಪಾಸ್ ಪಡೆದು ಬುಧವಾರ ಲೋಕಸಭೆ ಪ್ರವೇಶಿಸಿದ ಕರ್ನಾಟಕದ ಮನೋರಂಜನ್, ಸಂಸತ್ತಿನ ಪ್ರವೇಶದ ಸಮಯದಲ್ಲಿ ಶೂಗಳನ್ನು ಪರಿಶೀಲಿಸುವುದಿಲ್ಲ ಎಂಬುದನ್ನು ಕಳೆದ ಜುಲೈನಲ್ಲೆ ಕಂಡುಕೊಂಡಿದ್ದ. ಹಳೆಯ ಸಂಸತ್ತಿನ ಕಟ್ಟಡದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಮನೋರಂಜನ್ ‘ಕಂಡದ್ದು’ ಭದ್ರತಾ ಉಲ್ಲಂಘನೆಗೆ ಉಪಯುಕ್ತವಾಯಿತು. ‘ಜುಲೈನಲ್ಲಿ ದೆಹಲಿಗೆ ಬಂದಿದ್ದ ಮನೋರಂಜನ್, ಸಂಸದರ ಹೆಸರಿನಲ್ಲಿ ನೀಡಲಾದ ವಿಸಿಟರ್ ಪಾಸ್‌ನಲ್ಲಿ ಸಂಸತ್ ಪ್ರವೇಶಿಸಿದ್ದ ಎನ್ನಲಾಗಿದೆ. ಪರಿಶೀಲನೆ ವೇಳೆ ಬೂಟುಗಳನ್ನು ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮನೋರಂಜನ್ ತಿಳಿದುಕೊಂಡಿದ್ದ.

ಪ್ರಕರಣದಲ್ಲಿ ಒಟ್ಟು ಆರು ಜನ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನದಲ್ಲಿ ಪತ್ತೆಯಾಗಿರುವ ಲಲಿತ್ ಝಾ ಈ ಗುಂಪಿನ ನಾಯಕ ಎನ್ನಲಾಗುತ್ತಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ ಲಲಿತ್ ಕೋಲ್ಕತ್ತಾದ ನಿವಾಸಿ. ಅವರೆಲ್ಲರೂ ‘ಭಗತ್ ಸಿಂಗ್ ಫ್ಯಾನ್ ಪೇಜ್’ ಅನ್ನು ನಿರ್ವಹಿಸುತ್ತಿದ್ದರು. ಹುತಾತ್ಮ ಭಗತ್ ಸಿಂಗನಂತೆ ಏನನ್ನಾದರೂ ಕ್ರಾಂತಿ ಮಾಡಲು ಬಯಸಿದ್ದರು ಎನ್ನಲಾಗಿದ್ದು, ಲಲಿತ್ ಝಾ, ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಆಜಾದ್, ಅಮೋಲ್ ಶಿಂಧೆ ಅವರು ಬುಧವಾರ ಸಂಸತ್ತಿನ ಆಸುಪಾಸಿನಲ್ಲಿದ್ದ ಐದು ಜನ ಪ್ರಮುಖ ಆರೋಪಿಗಳಾಗಿದ್ದಾರೆ.

ತಮ್ಮ ಯೋಜನೆಯಂತೆ, ಸಂಸತ್ ಪ್ರವೇಶಿಸುವ ಸಲುವಾಗಿ ಇವರೆಲ್ಲರೂ ಡಿಸೆಂಬರ್ 10 ರಂದು ದೆಹಲಿಯನ್ನು ತಲುಪಿದ್ದರು. ಅವರಿಗೆ ಗುರುಗ್ರಾಮದ ವಿಶಾಲ್ ಶರ್ಮಾ ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದರು. ಘಟನೆ ನಂತರ ಮನೋರಂಜನ್, ಸಾಗರ್, ನೀಲಂ ಮತ್ತು ಅನ್ಮೋಲ್ ಅವರನ್ನು ನಿನ್ನೆಯೇ ಬಂಧಿಸಲಾಗಿದ್ದು, ಅವರ ವಿರುದ್ಧ ಯುಎಪಿಎ ಆರೋಪವನ್ನು ಹೊರಿಸಲಾಗಿದೆ. ಇಂದು ವಿಶಾಲ್ ಶರ್ಮಾನನ್ನೂ ಕೂಡ ಬಂಧಿಸಲಾಗಿದೆ.
ಸುಮಾರು ಒಂದೂವರೆ ವರ್ಷದ ಹಿಂದೆ ಲಲಿತ್, ಸಾಗರ್ ಶರ್ಮಾ ಮತ್ತು ಮನೋರಂಜನ್ ಮೈಸೂರಿನಲ್ಲಿ ಭೇಟಿಯಾಗಿದ್ದರು. ಅಲ್ಲಿ ಅವರು ಸಂಸತ್ತಿಗೆ ನುಗ್ಗುವ ಯೋಜನೆ ರೂಪಿಸಿದ್ದರು ಎನ್ನಲಾಗಿದೆ. ನಂತರ ಅವರು ನೀಲಂ ಮತ್ತು ಅಮೋಲ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿದ್ದರು.

ಘಟನೆ ನಂತರ ಲಲಿತ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ನಂತರ ಅದನ್ನು ಪಶ್ಚಿಮ ಬಂಗಾಳದ ವಿಶಾಲ್ ಶರ್ಮಾ ಮತ್ತು ನೀಲಾಕ್ಷ ಐಚ್ ಅವರಿಗೆ ಕಳುಹಿಸಿದ್ದಾರೆ. ಇಲ್ಲಿಯವರೆಗಿನ ತನಿಖೆಯಲ್ಲಿ ಯಾವುದೇ ಭಯೋತ್ಪಾದಕ ಸಂಘಟನೆಯ ಸಂಪರ್ಕ ಬಂಧಿತರಿಗೆ ಇರುವುದು ಪತ್ತೆಯಾಗಿಲ್ಲ. ಮನೋರಂಜನ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯೂ ಇಲ್ಲ ಎಂದು ಮೈಸೂರು ಪೊಲೀಸರು ಹೇಳಿದ್ದಾರೆ. ಆದರೆ, ಆತನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಗಮನಿಸಿದರೆ ಆತ ‘ಕ್ರಾಂತಿಕಾರಿ’ಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಮಗ ಮೋದಿ ಅಭಿಮಾನಿ’ ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

ಇನ್ನು ಅಮೋಲ್ ಡಿ. 9 ರಂದು ಸೇನಾ ನೇಮಕಾತಿಗಾಗಿ ದೆಹಲಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ. ಈತ ಮಹಾರಾಷ್ಟ್ರದ ಕಲ್ಯಾಣ್‌ನಿಂದ ಸುಮಾರು ₹1,200 ಬೆಲೆಗೆ ಬಣ್ಣದ ಹೊಗೆ ಡಬ್ಬಿಗಳನ್ನು (ಸ್ಮೋಕ್ ಬಾಂಬ್) ಖರೀದಿಸಿದ್ದ ಎಂದು ತಿಳಿದುಬಂದಿದೆ.

ಆಶ್ರಯ ನೀಡಿದ್ದ ವಿಶಾಲ್ ಶರ್ಮಾ ಬಂಧನ:

ಲೋಕಸಭೆಯ ಭದ್ರತಾ ಲೋಪದ 5ನೇ ಶಂಕಿತ ಆರೋಪಿ ವಿಶಾಲ್ ಶರ್ಮಾ ಎಂಬಾತನನ್ನು ತನಿಖಾ ತಂಡ ಗುರುಗ್ರಾಮದಲ್ಲಿ ವಶಕ್ಕೆ ಪಡೆದಿದೆ. ಈತ ಯೋಜನೆ ರೂಪಿಸಿದ ನಾಲ್ವರಿಗೆ ಆಶ್ರಯ ನೀಡಿದ್ದಾನೆ ಎನ್ನಲಾಗಿದೆ. ಸಾಗರ್ ಶರ್ಮಾ ಮತ್ತು ಮನೋರಂಜನ್ ಅಧಿವೇಶನದ ವೇಳೆ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯೊಳಗೆ ಧುಮುಕಿ ಹಳದಿ ಬಣ್ಣದ ಹೊಗೆಯನ್ನು (ಸ್ಮೂಕ್ ಬಾಂಬ್) ಸ್ಪೋಟಿಸಿದರು. ಸಂಸತ್ತಿನ ಹೊರಗೆ ಅಮೋಲ್ ಶಿಂಧೆ ಮತ್ತು ನೀಲಂ ದೇವಿ ಕೂಡ ಹಳದಿ ಹೊಗೆ ಸ್ಪೋಟಿಸಿ ಘೋಷಣೆ ಕೂಗಿದರು. ಬಂಧಿತ ಐವರೂ ಕೂಡ ವಿಭಿನ್ನ ಹಿನ್ನೆಲೆಯವರಾಗಿದ್ದು, ಎಲ್ಲರೂ ನಿರುದ್ಯೋಗಿ ಯುವಕರು.

ಆರು ಆರೋಪಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿದ್ದರೂ ಒಬ್ಬರಿಗೊಬ್ಬರು ಮೊದಲೇ ಪರಿಚಿತರಾಗಿದ್ದರು. ಬುಧವಾರ ಸಂಸತ್ತಿನಲ್ಲಿ ಅವರು ಏನು ಮಾಡುತ್ತಿದ್ದಾರೆಂಬುದು ಅವರ ಕುಟುಂಬದ ಸದಸ್ಯರಿಗೆ ತಿಳಿದಿರಲಿಲ್ಲ. ಬಂಧಿತರೆಲ್ಲರೂ ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದ ಬಗ್ಗೆ ಅಸಮಾಧಾನಗೊಂಡಿದ್ದರು ಎಂದು ತನಿಖೆ ವೇಳೆ ಅಮೋಲ್ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಬಂಧಿತರು ಯಾವುದಾದರೂ ಸಂಘ-ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ತಿಳಿದಿಲ್ಲ.

ಇದನ್ನೂ ಓದಿ; ಕಲಾಪಕ್ಕೆ ಅಡ್ಡಿ ಆರೋಪ; ಕಾಂಗ್ರೆಸ್-ಡಿಎಂಕೆ ಪಕ್ಷದ 14 ಸಂಸದರು ಲೋಕಸಭೆಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...