Homeಮುಖಪುಟತಮಿಳು ಮಹಿಳೆಗೆ ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಸಿಐಎಸ್‌ಎಫ್‌ ಸಿಬ್ಬಂದಿ; ಸ್ಟಾಲಿನ್ ಆಕ್ರೋಶ

ತಮಿಳು ಮಹಿಳೆಗೆ ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಸಿಐಎಸ್‌ಎಫ್‌ ಸಿಬ್ಬಂದಿ; ಸ್ಟಾಲಿನ್ ಆಕ್ರೋಶ

- Advertisement -
- Advertisement -

ತಮಿಳುನಾಡು ಮಹಿಳೆಗೆ ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ವಿರುದ್ಧ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ಆಕ್ರೋಶ ಹೊರಹಾಕಿದ್ದಾರೆ.

‘ನನಗೆ ಹಿಂದಿ ಗೊತ್ತಿಲ್ಲ ಎಂದು ಹೇಳಿದ ತಮಿಳು ಹುಡುಗಿಯೊಬ್ಬಳೊಂದಿಗೆ ಗೋವಾ ವಿಮಾನ ನಿಲ್ದಾಣದಲ್ಲಿ ಹಿಂದಿ ಮಾತನಾಡುವಂತೆ ಕೇಂದ್ರ ಕೈಗಾರಿಕೆ ಭದ್ರತಾ ಪಡೆ ಸಿಬ್ಬಂದಿ ಬೆದರಿಕೆ ಹಾಕಿದ್ದಾರೆ. ತಮಿಳುನಾಡು ಭಾರತದಲ್ಲಿದೆಯೇ? ಭಾರತದಲ್ಲಿರುವ ಪ್ರತಿಯೊಬ್ಬರೂ ಹಿಂದಿ ಕಲಿಯಬೇಕು ಎಂದು ಅವರು ಹೇಳಿದ್ದು, ಇದು ಅತ್ಯಂತ ಖಂಡನೀಯ. ಹಿಂದಿ ಅಧಿಕೃತ ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ ಎಂದು ಇವರಿಗೆ ಹೇಳುವವರು ಯಾರು’ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

‘ಭಾರತವು ವಿವಿಧ ಭಾಷೆಗಳನ್ನು ಮಾತನಾಡುವ ಜನರ ಒಕ್ಕೂಟ ರಾಜ್ಯವಾಗಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಒಕ್ಕೂಟ ವ್ಯವಸ್ಥೆಗೆ ಒತ್ತು ನೀಡುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಎಲ್ಲ ಭಾಷೆಗಳಿಗೆ ಸೂಕ್ತ ಮೌಲ್ಯ ಮತ್ತು ಗೌರವವನ್ನು ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ದಬ್ಬಾಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ: ಉದಯನಿಧಿ

‘ಗೋವಾ ವಿಮಾನ ನಿಲ್ದಾಣದಲ್ಲಿ ಸೈನಿಕರು ಹಿಂದಿಯಲ್ಲಿ ಮಾತನಾಡಿದ್ದು ನನಗೆ ಅರ್ಥವಾಗುತ್ತಿಲ್ಲ ಎಂದು ತಮಿಳುನಾಡಿನ ಮಹಿಳೆಯೊಬ್ಬರು ಹೇಳಿದ್ದಾರೆ. ಆಕೆ ಮಗುವಿನೊಂದಿಗೆ ಇದ್ದಾಳೆ ಎಂಬ ಅಂಶವನ್ನು ಲೆಕ್ಕಿಸದೆ, ‘ಹಿಂದಿ ರಾಷ್ಟ್ರ ಭಾಷೆ, ಇದು ನಿಮಗೆ ತಿಳಿದಿಲ್ಲವೇ?’ ಎಂದಿದ್ದಾರೆ. ದಬ್ಬಾಳಿಕೆ ಮತ್ತು ಬೆದರಿಕೆಯ ಈ ಘಟನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ’ ಎಂದು ಉದಯನಿಧಿ ಸ್ಟಾಲಿನ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

‘ಇನ್ನುಮುಂದೆ ವಿಮಾನ ನಿಲ್ದಾಣಗಳಲ್ಲಿ ಇಂತಹ ಘಟನೆಗಳು ನಡೆಯುವುದನ್ನು ಒಪ್ಪಲು ಸಾಧ್ಯವಿಲ್ಲ. ಕೇಂದ್ರ ಪಡೆ ಇರುವುದು ಭದ್ರತೆಗಾಗಿ; ಹಿಂದಿ ಪಾಠ ನಡೆಸಲು ಅಲ್ಲ. ಬಹುಭಾಷಾ ಭಾರತೀಯ ಒಕ್ಕೂಟದಲ್ಲಿ, ಇತರ ಭಾಷೆಗಳನ್ನು ಮಾತನಾಡುವ ಜನರ ಮೇಲೆ ಹಿಂದಿ ಹೇರಿಕೆಯನ್ನು ಮುಂದುವರಿಸುವುದು ಒಕ್ಕೂಟ ತತ್ವಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ಇಂತಹ ಧೋರಣೆ ಅನುಸರಿಸದೆ ತಕ್ಷಣ ಕ್ರಮ ಕೈಗೊಳ್ಳಬೇಕು. ಭಾಷೆಯ ಹಕ್ಕು ಕೂಡ ಮಾನವ ಹಕ್ಕು ಎಂಬುದನ್ನು ಫ್ಯಾಸಿಸ್ಟರು ಅರ್ಥಮಾಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಭದ್ರತಾ ತಂಡ ನನ್ನನ್ನು ಅಣಕಿಸಿದರು: ಶರ್ಮಿಳಾ

ಚೆನ್ನೈನ ಇಂಜಿನಿಯರ್ ಶರ್ಮಿಳಾ ರಾಜಶೇಖರ್ ಸಿಐಎಸ್‌ಎಫ್ ಸಿಬ್ಬಂದಿಯಿಂದ ಕಿರುಕುಳ ಅನುಭವಿಸಿದ ಮಹಿಳೆಯಾಗಿದ್ದು, ‘ರಾತ್ರಿ 8.30ಕ್ಕೆ ಚೆನ್ನೈಗೆ ಹೋಗುವ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಅದಕ್ಕೂ ಮುನ್ನ ಭದ್ರತಾ ತಪಾಸಣೆಗಾಗಿ ನನ್ನ ಬ್ಯಾಗ್‌ಗಳನ್ನು ಇಟ್ಟುಕೊಂಡು ಸರದಿಯಲ್ಲಿದ್ದೆ. ಇನ್ನೊಂದು ಟ್ರೇ ತೆಗೆದುಕೊಳ್ಳಿ ಎಂದು ಸಿಐಎಸ್‌ಎಫ್ ಸಿಬ್ಬಂದಿ ನನಗೆ ಹಿಂದಿಯಲ್ಲಿ ಹೇಳಿದ್ದು ಅರ್ಥವಾಗಲಿಲ್ಲ’ ಎಂದು ಅವರು ಹೇಳಿದ್ದಾರೆ.

‘ಹಿಂದಿ ಗೊತ್ತಿಲ್ಲ ಎಂದು ನಾನು ಅವರಿಗೆ ಹೇಳಿದೆ. ಆದರೆ, ಭದ್ರತಾ ಪಡೆ ನನ್ನನ್ನು ಅಣಕಿಸಿದರು. ನಾನು ಎಲ್ಲಿಂದ ಬಂದಿದ್ದು ಎಂದು ಪ್ರಶ್ನಿಸಿದ ಅವರು, ನಾನು ತಮಿಳುನಾಡಿನವಳು ಎಂದು ಉತ್ತರಿಸಿದಾಗ, ತಮಿಳುನಾಡು ಭಾರತದಲ್ಲಿದೆಯೇ ಎಂದು ಕೇಳಿದರು! ಹಿಂದಿ ರಾಷ್ಟ್ರ ಭಾಷೆ ಮತ್ತು ನೀವು ಕಲಿಯಲೇಬೇಕು ಎಂದು ಹೇಳಿದರು’ ಎಂದು ಶರ್ಮಿಳಾ ಹೇಳಿದರು.

‘ಕೂಡಲೇ ನಾನು ಗೂಗಲ್ ಮಾಡುವ ಮೂಲಕ ಹಿಂದಿ ಕೇವಲ ಅಧಿಕೃತ ಭಾಷೆಯಾಗಿದೆ; ರಾಷ್ಟ್ರೀಯ ಭಾಷೆಯಲ್ಲ ಎಂದು ಹೇಳಿದೆ. ಇಷ್ಟೆಲ್ಲಾ ನಡೆಯುವಾಗ ನಾನು ನನ್ನ ಮೂರು ವರ್ಷದ ಮಗಳ ಜೊತೆಯಲ್ಲಿದ್ದೆ. ಫೋನ್ ತೆಗೆದುಕೊಂಡು ಇಂಟರ್‌ನೆಟ್‌ನಲ್ಲಿ ಹುಡುಕಿದ ನಾನು, ಹಿಂದಿ ರಾಷ್ಟ್ರ ಭಾಷೆಯಲ್ಲ, ಅಧಿಕೃತ ಭಾಷೆ ಮಾತ್ರ ಎಂದು ತೋರಿಸಿದೆ. ಭದ್ರತಾ ಸಿಬ್ಬಂದಿ ನನ್ನನ್ನು ನಡೆಸಿಕೊಂಡ ರೀತಿ ಅತ್ಯಂತ ಅಮಾನವೀಯ ಹಾಗೂ ಸಂವೇದನಾರಹಿತವಾಗಿತ್ತು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ: ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...