Homeಮುಖಪುಟಲೋಕಸಭೆ ಭದ್ರತಾ ಲೋಪ: 5ನೇ ಆರೋಪಿಗೆ ಟಿಎಂಸಿ ಸಂಪರ್ಕವಿದೆ ಎಂದ ಬಿಜೆಪಿ

ಲೋಕಸಭೆ ಭದ್ರತಾ ಲೋಪ: 5ನೇ ಆರೋಪಿಗೆ ಟಿಎಂಸಿ ಸಂಪರ್ಕವಿದೆ ಎಂದ ಬಿಜೆಪಿ

- Advertisement -
- Advertisement -

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣದ ಐದನೇ ಆರೋಪಿ, ಕೋಲ್ಕತ್ತಾ ನಿವಾಸಿ ಲಲಿತ್ ಝಾ ಅವರನ್ನು ದೆಹಲಿ ಪೊಲೀಸರು ಗುರುವಾರ ಸಂಜೆ ದೆಹಲಿಯಲ್ಲಿ ಬಂಧಿಸಿದ್ದರು. ಇದೀಗ ಝಾ ಮತ್ತು ಟಿಎಂಸಿ ಶಾಸಕ ತಪಸ್ ರಾಯ್ ಇರುವ ಫೋಟೋವನ್ನು ಬಿಜೆಪಿ ಟ್ವೀಟ್ ಮಾಡಿದ್ದು, ಉಭಯ ಪಕ್ಷಗಳು ಎಕ್ಸ್‌ನಲ್ಲಿ ವಾಗ್ವಾದಕ್ಕಿಳಿದಿವೆ.
ಗುರುಗ್ರಾಮ ನಿವಾಸಿ 32 ವರ್ಷದ ಝಾ, 2020ರ ಫೆಬ್ರವರಿ 23ರಂದು ಸರಸ್ವತಿ ಪೂಜೆಯ ಕಾರ್ಯಕ್ರಮದಲ್ಲಿ ತೆಗೆದ ಈ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಟಿಎಂಸಿ ಶಾಸಕ ರಾಯ್ ಇದ್ದಾರೆ.

‘ನಮ್ಮ ಪ್ರಜಾಪ್ರಭುತ್ವದ ದೇಗುಲದ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಲಲಿತ್ ಝಾ ಅವರು ಟಿಎಂಸಿಯ ತಪಸ್ ರಾಯ್ ಅವರೊಂದಿಗೆ ಬಹಳ ಸಮಯದಿಂದ ನಿಕಟ ಒಡನಾಟ ಹೊಂದಿದ್ದರು. ಅವರ ಸಹಕಾರದ ತನಿಖೆಗೆ ಈ ಪುರಾವೆ ಸಾಕಾಗುವುದಿಲ್ಲವೇ’ ಎಂದು ಬಿಜೆಪಿಯ ಪಶ್ಚಿಮ ಬಂಗಾಳದ ಅಧ್ಯಕ್ಷ ಸುಕಾಂತ ಮಜುಂದಾರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಯ್, ‘ಸಾಮಾಜಿಕ ಮಾಧ್ಯಮದ ಪೋಸ್ಟ್‌ಗೆ ಯಾವುದೇ ಮೌಲ್ಯವಿಲ್ಲ. ಒಬ್ಬ ಸಾರ್ವಜನಿಕ ಪ್ರತಿನಿಧಿಯಾಗಿ ನನಗೆ ಅನೇಕ ಬೆಂಬಲಿಗರು ಮತ್ತು ಸಹವರ್ತಿಗಳು ಇದ್ದಾರೆ. ಈ ಕುರಿತು ತನಿಖೆಯಾಗಲಿ; ಆರೋಪ ಸಾಬೀತಾದರೆ ರಾಜಕೀಯ ತ್ಯಜಿಸುತ್ತೇನೆ. ನಾವು ಸಾರ್ವಜನಿಕ ಜೀವನದಲ್ಲಿ ಇದ್ದೇವೆ, ಅನೇಕ ಜನರು ಫೋಟೋ ತೆಗೆದುಕೊಳ್ಳುತ್ತಾರೆ. ಇದು ಫೆಬ್ರವರಿ 2020 ರಲ್ಲಿ ನಡೆದಿದೆ, ಅಂದರೆ ನಾಲ್ಕು ವರ್ಷಗಳ ಹಿಂದೆ ಎಂದು ನಾನು ಕೇಳಿದೆ. ನನಗೆ ಆತನ ಪರಿಚಯವಿಲ್ಲ. ಸಂಸತ್ತಿನ ಭದ್ರತೆ ಗಂಭೀರ ವಿಷಯವಾಗಿದೆ. ಗಮನವನ್ನು ಬೇರೆಡೆಗೆ ತಿರುಗಿಸುವ ಬದಲು ಸೂಕ್ತ ತನಿಖೆಯಾಗಲಿ’ ಎಂದು ಆಗ್ರಹಿಸಿದ್ದಾರೆ.

‘ಲಲಿತ್ ಝಾ ಅವರಿಗಿರುವ ಟಿಎಂಸಿ ಸಂಪರ್ಕವು ಬೆಳಕಿಗೆ ಬಂದಿದೆ, ಟಿಎಂಸಿ ನಾಯಕರೊಂದಿಗಿನ ಅವರ ಹಲವಾರು ಚಿತ್ರಗಳು ವೈರಲ್ ಆಗಿವೆ’ ಎಂದು ಬಿಜೆಪಿ ರಾಷ್ಟ್ರೀಯ ಐಟಿ ವಿಭಾಗದ ಉಸ್ತುವಾರಿ ಅಮಿತ್ ಮಾಳವಿಯಾ ಹೇಳಿದ್ದಾರೆ.

‘ಇಲ್ಲಿಯವರೆಗೆ, ಇಡೀ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಕಾಂಗ್ರೆಸ್, ಸಿಪಿಐ (ಮಾವೋವಾದಿ) ಮತ್ತು ಈಗ ಟಿಎಂಸಿಯೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಂದು ಕಂಡುಬಂದಿದೆ. ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವುದು ಹತಾಶ I.N.D.I ಮೈತ್ರಿ ಎಂಬುದು ಸ್ಪಷ್ಟವಾಗುತ್ತಿದೆಯೇ’ ಎಂದಿದ್ದಾರೆ.

ಮಾಳವಿಯಾ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, ‘ನಾವು ಸತ್ಯವನ್ನು ಪರಿಶೀಲಿಸೋಣ… ಅಪರಾಧಿಗಳಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೊರತುಪಡಿಸಿ ಬೇರೆ ಯಾರೂ ಪ್ರವೇಶ ಪಾಸ್ ನೀಡಲಿಲ್ಲ. ಸಾಮಾನ್ಯವಾಗಿ ಸಂಸತ್ತಿನ ಭದ್ರತೆಗಾಗಿ 300 ಜನ ಇರುತ್ತಿದ್ದರು. ಆದರೆ, ಕೇವಲ 176 ದೆಹಲಿ ಪೊಲೀಸ್ ಸಿಬ್ಬಂದಿ ಮಾತ್ರ ಅಂದು ಕರ್ತವ್ಯದಲ್ಲಿದ್ದರು. ಬಿಜೆಪಿಯ ಆಂತರಿಕ ವೈಫಲ್ಯಗಳು ಸಂಸತ್ತಿನ ಭದ್ರತೆ ಉಲ್ಲಂಘನೆಗೆ ಕಾರಣವಾಯಿತು. ಈಗ, ಈ ಕರ್ತವ್ಯಲೋಪಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವಾಗ, ಅವರ ತಪ್ಪಿನ ಗಮನವನ್ನು ಬೇರೆಡೆ ಸೆಳೆಯಲು ಮಾಳವಿಯಾ ಅವರಂತಹ ಬಿಜೆಪಿ ಪ್ರಚಾರಕರನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ; ಸಂಸತ್ ಭದ್ರತಾ ಲೋಪ: ಬಂಧಿತ ನಾಲ್ವರು 7 ದಿನ ಪೊಲೀಸ್ ಕಸ್ಟಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...