Homeಮುಖಪುಟಅಧಿಕಾರಿಗಳ ದರ್ಪ: ತಳ್ಳುಗಾಡಿ ಉಳಿಸಲು ಜೆಸಿಬಿಯಲ್ಲಿ ನೇತಾಡಿದ ಬಡ ವ್ಯಾಪಾರಿ

ಅಧಿಕಾರಿಗಳ ದರ್ಪ: ತಳ್ಳುಗಾಡಿ ಉಳಿಸಲು ಜೆಸಿಬಿಯಲ್ಲಿ ನೇತಾಡಿದ ಬಡ ವ್ಯಾಪಾರಿ

- Advertisement -
- Advertisement -

ತನ್ನ ಏಕೈಕ ಜೀವನಾಧಾರವಾಗಿದ್ದ ತರಕಾರಿ ಗಾಡಿಯನ್ನು ಅಧಿಕಾರಿಗಳು ಜಖಂಗೊಳಿಸುವಾಗ ತಡೆಯಲು ಬೇರೆ ದಾರಿಯಿಲ್ಲದೆ ಬಡ ವ್ಯಾಪಾರಿಯೊಬ್ಬ ಜೆಸಿಬಿ ಏರಿದ ಹೃದಯ ವಿದ್ರಾವಕ ಘಟನೆ ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಕಥುವಾ ನಗರದಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯ ಭಾಗವಾಗಿ ಜಿಲ್ಲಾಡಳಿತ ಬೀದಿ ಬದಿಯ ವ್ಯಾಪಾರಿಗಳನ್ನು ತೆರವುಗೊಳಿಸಿದೆ. ಈ ವೇಳೆ ಬಡ ವ್ಯಾಪಾರಿಯ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ವೈರಲ್ ವಿಡಿಯೋದಲ್ಲಿ ಕಾಣುವಂತೆ ತರಕಾರಿ ವ್ಯಾಪಾರಿಯ ತಳ್ಳುಗಾಡಿಯನ್ನು ದೂಡಿಕೊಂಡು ಬಂದ ಅಧಿಕಾರಿಗಳು, ಅದನ್ನು ಜೆಸಿಬಿಯಿಂದ ಧ್ವಂಸ ಮಾಡಿಸಿದ್ದಾರೆ. ಈ ವೇಳೆ ತನ್ನ ಗಾಡಿಯನ್ನು ಬಿಟ್ಟು ಬಿಡುವಂತೆ ಆ ವ್ಯಾಪಾರಿ ಪರಿ ಪರಿಯಾಗಿ ಬೇಡಿಕೊಂಡರೂ ಅಧಿಕಾರಿಗಳು ಕೇಳಿಲ್ಲ. ದಬ್ಬಾಳಿಕೆ ತಡೆಯಲು ಬೇರೆ ದಾರಿ ಕಾಣದ ವ್ಯಾಪಾರಿ ಜೆಸಿಬಿ ಮುಂಭಾಗದಲ್ಲಿ ಹತ್ತಿ ಕುಳಿತಿದ್ದಾನೆ. “ನನ್ನ ಮೇಲೆ ಹತ್ತಿಸಿ” ಎಂದು ಕಣ್ಣೀರು ಹಾಕಿದ್ದಾನೆ.

ಅಷ್ಟೇ ಅಲ್ಲದೆ ಅಧಿಕಾರಿಗಳ ವಿರುದ್ದ ಆಕ್ರೋಶಗೊಂಡ ವ್ಯಾಪಾರಿ ಓಡಿ ಹೋಗಿ ಕಟ್ಟಿಗೆಯೊಂದನ್ನು ತಂದು ಜೆಸಿಬಿಯ ಗಾಜು ಪುಡಿ ಮಾಡಿದ್ದಾನೆ. ಅಷ್ಟೊತ್ತಿಗೆ ಪೊಲೀಸರು ಬಂದು ಆತನನ್ನು ವಶಕ್ಕೆ ಪಡೆಯುವ ಪ್ರಯತ್ನ ಮಾಡಿದ್ದು, ಸ್ಥಳದಲ್ಲಿದ್ದ ಮನುಷ್ಯರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಎಲ್ಲಾ ಪ್ರಸಂಗದ ನಡುವೆ ಬಡ ವ್ಯಾಪಾರಿ ಕುಸಿದು ಬಿದ್ದಿದ್ದು, ಆತನನ್ನು ಸ್ಥಳೀಯರು ಎತ್ತಿಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋದಲ್ಲಿ ಕಾಣುವಂತೆ ಬಡ ತರಕಾರಿ ವ್ಯಾಪಾರಿ ಶಾಶ್ವತವಾಗಿ ಯಾವುದೇ ಅಂಗಡಿ ಹಾಕಿರಲಿಲ್ಲ. ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ. ಅದನ್ನು ದೂಡಿಕೊಂಡು ಬೇರೆಡೆಗೆ ಕೊಂಡು ಹೋಗುವುದಾಗಿಯೂ ಆತ ಅಧಿಕಾರಿಗಳ ಮುಂದೆ ಬೇಡಿಕೊಂಡಿದ್ದಾನೆ. ಆದರೂ, ಮಾನವೀಯತೆ ಮರೆತ ಅಧಿಕಾರಿಗಳು ತರಕಾರಿ ತುಂಬಿದ್ದ ಆತನ ಗಾಡಿಯನ್ನು ಹಾಳುಗೆವಿದ್ದಾರೆ. ಅಧಿಕಾರಿಗಳ ದರ್ಪಕ್ಕೆ ಗಾಡಿ ಮತ್ತು ತರಕಾರಿ ಎರಡೂ ಹಾಳಾಗಿದೆ.

ಇದನ್ನೂ ಓದಿ: ಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...