Homeಮುಖಪುಟಅಧಿಕಾರಿಗಳ ದರ್ಪ: ತಳ್ಳುಗಾಡಿ ಉಳಿಸಲು ಜೆಸಿಬಿಯಲ್ಲಿ ನೇತಾಡಿದ ಬಡ ವ್ಯಾಪಾರಿ

ಅಧಿಕಾರಿಗಳ ದರ್ಪ: ತಳ್ಳುಗಾಡಿ ಉಳಿಸಲು ಜೆಸಿಬಿಯಲ್ಲಿ ನೇತಾಡಿದ ಬಡ ವ್ಯಾಪಾರಿ

- Advertisement -
- Advertisement -

ತನ್ನ ಏಕೈಕ ಜೀವನಾಧಾರವಾಗಿದ್ದ ತರಕಾರಿ ಗಾಡಿಯನ್ನು ಅಧಿಕಾರಿಗಳು ಜಖಂಗೊಳಿಸುವಾಗ ತಡೆಯಲು ಬೇರೆ ದಾರಿಯಿಲ್ಲದೆ ಬಡ ವ್ಯಾಪಾರಿಯೊಬ್ಬ ಜೆಸಿಬಿ ಏರಿದ ಹೃದಯ ವಿದ್ರಾವಕ ಘಟನೆ ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಕಥುವಾ ನಗರದಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯ ಭಾಗವಾಗಿ ಜಿಲ್ಲಾಡಳಿತ ಬೀದಿ ಬದಿಯ ವ್ಯಾಪಾರಿಗಳನ್ನು ತೆರವುಗೊಳಿಸಿದೆ. ಈ ವೇಳೆ ಬಡ ವ್ಯಾಪಾರಿಯ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ವೈರಲ್ ವಿಡಿಯೋದಲ್ಲಿ ಕಾಣುವಂತೆ ತರಕಾರಿ ವ್ಯಾಪಾರಿಯ ತಳ್ಳುಗಾಡಿಯನ್ನು ದೂಡಿಕೊಂಡು ಬಂದ ಅಧಿಕಾರಿಗಳು, ಅದನ್ನು ಜೆಸಿಬಿಯಿಂದ ಧ್ವಂಸ ಮಾಡಿಸಿದ್ದಾರೆ. ಈ ವೇಳೆ ತನ್ನ ಗಾಡಿಯನ್ನು ಬಿಟ್ಟು ಬಿಡುವಂತೆ ಆ ವ್ಯಾಪಾರಿ ಪರಿ ಪರಿಯಾಗಿ ಬೇಡಿಕೊಂಡರೂ ಅಧಿಕಾರಿಗಳು ಕೇಳಿಲ್ಲ. ದಬ್ಬಾಳಿಕೆ ತಡೆಯಲು ಬೇರೆ ದಾರಿ ಕಾಣದ ವ್ಯಾಪಾರಿ ಜೆಸಿಬಿ ಮುಂಭಾಗದಲ್ಲಿ ಹತ್ತಿ ಕುಳಿತಿದ್ದಾನೆ. “ನನ್ನ ಮೇಲೆ ಹತ್ತಿಸಿ” ಎಂದು ಕಣ್ಣೀರು ಹಾಕಿದ್ದಾನೆ.

ಅಷ್ಟೇ ಅಲ್ಲದೆ ಅಧಿಕಾರಿಗಳ ವಿರುದ್ದ ಆಕ್ರೋಶಗೊಂಡ ವ್ಯಾಪಾರಿ ಓಡಿ ಹೋಗಿ ಕಟ್ಟಿಗೆಯೊಂದನ್ನು ತಂದು ಜೆಸಿಬಿಯ ಗಾಜು ಪುಡಿ ಮಾಡಿದ್ದಾನೆ. ಅಷ್ಟೊತ್ತಿಗೆ ಪೊಲೀಸರು ಬಂದು ಆತನನ್ನು ವಶಕ್ಕೆ ಪಡೆಯುವ ಪ್ರಯತ್ನ ಮಾಡಿದ್ದು, ಸ್ಥಳದಲ್ಲಿದ್ದ ಮನುಷ್ಯರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಎಲ್ಲಾ ಪ್ರಸಂಗದ ನಡುವೆ ಬಡ ವ್ಯಾಪಾರಿ ಕುಸಿದು ಬಿದ್ದಿದ್ದು, ಆತನನ್ನು ಸ್ಥಳೀಯರು ಎತ್ತಿಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋದಲ್ಲಿ ಕಾಣುವಂತೆ ಬಡ ತರಕಾರಿ ವ್ಯಾಪಾರಿ ಶಾಶ್ವತವಾಗಿ ಯಾವುದೇ ಅಂಗಡಿ ಹಾಕಿರಲಿಲ್ಲ. ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ. ಅದನ್ನು ದೂಡಿಕೊಂಡು ಬೇರೆಡೆಗೆ ಕೊಂಡು ಹೋಗುವುದಾಗಿಯೂ ಆತ ಅಧಿಕಾರಿಗಳ ಮುಂದೆ ಬೇಡಿಕೊಂಡಿದ್ದಾನೆ. ಆದರೂ, ಮಾನವೀಯತೆ ಮರೆತ ಅಧಿಕಾರಿಗಳು ತರಕಾರಿ ತುಂಬಿದ್ದ ಆತನ ಗಾಡಿಯನ್ನು ಹಾಳುಗೆವಿದ್ದಾರೆ. ಅಧಿಕಾರಿಗಳ ದರ್ಪಕ್ಕೆ ಗಾಡಿ ಮತ್ತು ತರಕಾರಿ ಎರಡೂ ಹಾಳಾಗಿದೆ.

ಇದನ್ನೂ ಓದಿ: ಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...