Homeಕರ್ನಾಟಕವೈದ್ಯಕೀಯ ಗರ್ಭಪಾತ ಕಾಯ್ದೆ; ಮಾರ್ಗಸೂಚಿ ಹೊರಡಿಸಿದ ಕರ್ನಾಟಕ ಹೈಕೋರ್ಟ್

ವೈದ್ಯಕೀಯ ಗರ್ಭಪಾತ ಕಾಯ್ದೆ; ಮಾರ್ಗಸೂಚಿ ಹೊರಡಿಸಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ವೈದ್ಯಕೀಯ ಗರ್ಭಪಾತ (ಎಂಟಿಪಿ) ಕಾನೂನಿನ ಅಡಿಯಲ್ಲಿನ ಹಕ್ಕುಗಳ ಕುರಿತು ಮಹಿಳೆಯರಿಗೆ ಸಮಾಲೋಚನೆ ನೀಡುವ ಮೂಲಕ, ಸಂತ್ರಸ್ತರಿಗೆ ಮಾನಸಿಕ ಆಘಾತ ಕಡಿಮೆ ಮಾಡಲು ಹಾಗೂ ಅವರಿಗೆ ಸಹಾಯ ಮಾಡಲು ಕರ್ನಾಟಕ ಹೈಕೋರ್ಟ್ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಅತ್ಯಾಚಾರದಿಂದ ಗರ್ಭಿಣಿಯಾಗಿದ್ದ 17 ವರ್ಷದ ಬಾಲಕಿಗೆ ಎಂಟಿಪಿಗೆ ಒಳಗಾಗಲು ಅನುಮತಿ ನೀಡುವಾಗ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಈ ನಿರ್ದೇಶನಗಳನ್ನು ನೀಡಿದ್ದಾರೆ. ಅಪ್ರಾಪ್ತ ವಯಸ್ಸಿನ ಗರ್ಭಾವಸ್ಥೆಯ ಹಲವಾರು ಪ್ರಕರಣಗಳು ಲೈಂಗಿಕ ಅಪರಾಧಗಳಿಂದ ಸಂಭವಿಸಿದ್ದು, ಅದರ ಅನ್ವಯ ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಸಂತ್ರಸ್ತೆಯರು ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಬಯಸುವ ಹೆಚ್ಚಿನ ಪ್ರಕರಣಗಳಲ್ಲಿ ಗರ್ಭಾವಸ್ಥೆಯ ಅವಧಿಯು 24 ವಾರಗಳನ್ನು ದಾಟಿರುತ್ತದೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಇದು ವೈದ್ಯಕೀಯ ಗರ್ಭಪಾತ (ತಿದ್ದುಪಡಿ)-1971ರ ಅಡಿಯಲ್ಲಿ ಅನುಮತಿ ನೀಡುವ ಅವಧಿಯಾಗಿದೆ. ನಂತರದ ಯಾವುದೇ ವಿಳಂಬಕ್ಕೆ ಹೈಕೋರ್ಟ್‌ನಿಂದ ಅನುಮತಿ ಪಡೆಯುವುದು ಅಗತ್ಯವಿದೆ.

ಐಪಿಸಿ ಸೆಕ್ಷನ್ 376 ಅಥವಾ ಪೋಕ್ಸೊ ಕಾಯ್ದೆಯಡಿ ಲೈಂಗಿಕ ಅಪರಾಧವನ್ನು ದಾಖಲಿಸಿದ ತಕ್ಷಣ, ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ ಗರ್ಭಿಣಿಯಾಗಿದ್ದಲ್ಲಿ ಖಚಿತಪಡಿಸಿಕೊಳ್ಳಬೇಕೆಂದು ನ್ಯಾಯಾಲಯ ಹೇಳಿದೆ. ಗರ್ಭಾವಸ್ಥೆಯ ಅವಧಿಯನ್ನು ಖಚಿತಪಡಿಸಿದ ನಂತರ, ಅಧಿಕಾರಿಗಳು ಸಂತ್ರಸ್ತೆಯ ದೈಹಿಕ ಮತ್ತು ಮಾನಸಿಕ ಸ್ಥಿತಿ, ವೈದ್ಯಕೀಯ ಗರ್ಭಪಾತಕ್ಕೆ ಒಳಗಾಗುವ ಸಾಮರ್ಥ್ಯ, ಆಕೆಯ ಆರೋಗ್ಯ ಮತ್ತು ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮದ ಯಾವುದೇ ಅಂಶಗಳನ್ನು ಪರಿಶೀಲಿಸಬೇಕಾಗುತ್ತದೆ ಎಂದು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಲೈಂಗಿಕ ದೌರ್ಜನ್ಯದ ಸಂತ್ರಸ್ತೆ ಗರ್ಭಿಣಿ ಎಂದು ಕಂಡುಬಂದಲ್ಲಿ, ಮಕ್ಕಳ ಕಲ್ಯಾಣ ಸಮಿತಿ ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪ್ರಕರಣಕ್ಕೆ ಅನುಗುಣವಾಗಿ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಸಂತ್ರಸ್ತೆಯ ಗರ್ಭಾವಸ್ಥೆಯ ಮುಂದುವರಿಕೆ ಮತ್ತು ಅದರ ಪರಿಣಾಮಗಳು, ವೈದ್ಯಕೀಯ ಗರ್ಭಪಾತದ ಪ್ರಕ್ರಿಯೆಯಂತಹ ಕಾನೂನು ಆಯ್ಕೆಗಳ ಕುರಿತು ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಸದಸ್ಯರಿಗೆ ಸಲಹೆ ನೀಡುವಂತೆ ತನಿಖಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

‘ಅಗತ್ಯವಿದ್ದದ್ದಲ್ಲಿ, ಸೂಕ್ತ ಅನುವಾದಕರನ್ನು ಬಳಸಿಕೊಂಡು ಸಂತ್ರಸ್ತರಿಗೆ ತಿಳಿದಿರುವ ಭಾಷೆಯಲ್ಲಿ ಸಮಾಲೋಚನೆ ನಡೆಸಬೇಕು. ಎಂಟಿಪಿಯನ್ನು ಕೈಗೊಳ್ಳುವ ಸಂದರ್ಭದಲ್ಲಿ, ಭ್ರೂಣದ ಅಂಗಾಂಶದ ಮಾದರಿಗಳನ್ನು ಡಿಎನ್ಎ ವಿಶ್ಲೇಷಣೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಪರಿಶೀಲನೆಗೆ ಅಗತ್ಯವಿದ್ದರೆ ಹೆಚ್ಚುವರಿ ಮಾದರಿಗಳನ್ನು ಸಂರಕ್ಷಿಸಿಡಬೇಕು. ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರೊಂದಿಗೆ ಸಮಾಲೋಚಿಸಿ, ಡಿಜಿ ಮತ್ತು ಐಜಿಪಿ ಅವರು ಸೂಕ್ತವೆಂದು ಭಾವಿಸುವ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ವಿವರವಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನವನ್ನು (ಎಸ್ಒಪಿ) ಸಿದ್ಧಪಡಿಸಲು ಮತ್ತು ಅದನ್ನು ಎಲ್ಲ ತನಿಖಾಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಗೆ ತಲುಪಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಮಕ್ಕಳ ಸಂರಕ್ಷಣಾ ಘಟಕಗಳು, ಸರ್ಕಾರಿ ಆಸ್ಪತ್ರೆಗಳು ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲರಿಗೂ ತರಬೇತಿ ಲಭ್ಯವಾಗುವಂತೆ ಮಾಡಬೇಕು. ಪ್ರಸ್ತುತ ಈ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಮದುವೆಯಾಗುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ಗರ್ಭಾವಸ್ಥೆಯ ಅವಧಿ ಮುಗಿದ ಕಾರಣ, ನ್ಯಾಯಾಲಯವು ವೈದ್ಯಕೀಯ ಮಂಡಳಿಯನ್ನು ರಚಿಸಿತ್ತು. ವರದಿಯನ್ನು ಸ್ವೀಕರಿಸಿದ ನಂತರ, ಅಗತ್ಯವಿರುವ ಎಲ್ಲ ಸುರಕ್ಷತೆಗಳನ್ನು ತೆಗೆದುಕೊಳ್ಳುವ ಮೂಲಕ ಎಂಟಿಪಿಯನ್ನು ಕೈಗೊಳ್ಳುವಂತೆ ಸರ್ಕಾರಿ ಸ್ವಾಮ್ಯದ ವಾಣಿ ವಿಲಾಸ ಆಸ್ಪತ್ರೆಯ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ; ಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...