Homeಮುಖಪುಟಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

ಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನದ ಕೊನೆಯ ದಿನವಾದ ಇಂದು (ಡಿಸೆಂಬರ್ 15) ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಮಾತನಾಡಿದ ಸಿಎಂ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ತಿಳಿಸಿದ್ದಾರೆ.

“ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುತ್ತೇವೆ ಎಂದು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತಿದ್ದೇವೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪ್ರಣಾಳಿಕೆಯಲ್ಲಿ ರೈತರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ, ಬಳಿಕ ಬಂದ ಯಡಿಯೂರಪ್ಪ ಸರ್ಕಾರ ಯಾವುದೇ ಸಾಲ ಮನ್ನಾ ಮಾಡಿಲ್ಲ” ಎಂದು ಸಿಎಂ ಹೇಳಿದ್ದಾರೆ.

ವಿಧಾನಸಭೆ ಕಲಾಪದ ಕೊನೆಯ ದಿನವಾದ ಇಂದು ಸಿಎಂ ಹಲವು ಷೋಷಣೆಗಳನ್ನು ಮಾಡಿದ್ದಾರೆ. ಅವುಗಳು ಹೀಗಿವೆ..

  • ಸಹಕಾರ ಬ್ಯಾಂಕ್ ಗಳಲ್ಲಿರುವ ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ.
  • ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪನೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು.
  • ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಉದ್ಯೋಗಾವಕಾಶ ಸೃಷ್ಟಿಗೆ ಕ್ರಮ.
  • ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪನೆ.
  • ರಾಯಚೂರಿನಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು.
  • ಧಾರವಾಡ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ.
  • ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಉನ್ನತೀಕರಣ.

ಡಿಸೆಂಬರ್ 4ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಾರಂಭಗೊಂಡ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು(ಡಿ.15) ಕೊನೆಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...