Homeಅಂತರಾಷ್ಟ್ರೀಯಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

- Advertisement -
- Advertisement -

ಇಸ್ರೇಲ್‌ ಅ.7ರಿಂದ ಪ್ಯಾಲೆಸ್ತೀನ್‌ ಮೇಲೆ ನಿರಂತರ ಬಾಂಬ್‌ ದಾಳಿಯನ್ನು ನಡೆಸುತ್ತಿದೆ. ಈವರೆಗೆ ಗಾಝಾದಲ್ಲಿ 19,000ಕ್ಕೂ ಅಧಿಕ ನಾಗರಿಕರು ಸಾವನ್ನಪ್ಪಿದ್ದಾರೆ. ಇಸ್ರೇಲ್‌ ನಡೆಸುತ್ತಿರುವ ಯುದ್ಧವನ್ನು ಹಲವು ದೇಶಗಳು ಖಂಡಿಸಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿತ್ತು. ಯುಎನ್‌ ಕೂಡ ಹಲವು ಬಾರಿ ಕದನ ವಿರಾಮಕ್ಕೆ ನಿರ್ಣಯ ಮಂಡಿಸಿದೆ. ಆದರೆ ಇಸ್ರೇಲ್‌ ಮಾತ್ರ ಪ್ಯಾಲೆಸ್ತೀನ್‌ನ ಮಕ್ಕಳು, ಮಹಿಳೆಯರು, ನಾಗರಿಕರ ಹತ್ಯಾಕಾಂಡವನ್ನು ಮುಂದುವರಿಸಿದೆ. ಇದೀಗ ಇಸ್ರೇಲ್‌ನ ಯುದ್ಧದಾಹಕ್ಕೆ ತನ್ನದೇ ದೇಶದ ಒತ್ತೆಯಾಳುಗಳನ್ನು ಇಸ್ರೇಲ್‌ ಮಿಲಿಟರಿ ಪಡೆ ಹತ್ಯೆ ಮಾಡಿದ್ದು, ಇಸ್ರೇಲ್‌ ಪ್ರಧಾನಿ ನೆತನ್ಯಾಹು ಇದು ತಿಳಿಯದೆ ನಡೆದ ದೊಡ್ಡ ಪ್ರಮಾದವೆಂದು ಹೇಳಿಕೊಂಡಿದ್ದಾರೆ.

ಹಮಾಸ್‌ ಜೊತೆಗಿನ ಸಂಘರ್ಷದ ವೇಳೆ ಮೂವರು ಇಸ್ರೇಲ್‌ನ ಒತ್ತೆಯಾಳುಗಳನ್ನು ಕೊಲ್ಲಲಾಯಿತು. ಗಾಝಾದಲ್ಲಿ ಯುದ್ಧದ ಸಮಯದಲ್ಲಿ ಮೂವರು ಇಸ್ರೇಲ್‌ ಒತ್ತೆಯಾಳುಗಳನ್ನು ತಮಗೆ ಅಪಾಯ ತರಬಹುದು ಎಂದು ತಪ್ಪಾಗಿ ಭಾವಿಸಿ ಇಸ್ರೇಲ್‌ ಸೇನೆ ಗುಂಡು ಹಾರಿಸಿ ಹತ್ಯೆ ಮಾಡಿದೆ. ಈ ಘಟನೆಯ ತನಿಖೆಯಲ್ಲಿ ಸಂಪೂರ್ಣ ಪಾರದರ್ಶಕತೆ ವಹಿಸಲಾಗುವುದು ಮತ್ತು ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುವುದಾಗಿ ಇಸ್ರೇಲ್‌ ಮಿಲಿಟರಿ ಹೇಳಿದೆ.

ಮೃತ ಒತ್ತೆಯಾಳುಗಳಲ್ಲಿ ಕಿಬ್ಬುತ್ಜ್ ಕ್ಫಾರ್‌ನಿಂದ ಅಪಹರಿಸಲ್ಪಟ್ಟ ಯೋತಮ್ ಹೈಮ್, ಕಿಬ್ಬುತ್ಜ್ ನಿರ್ ಆಮ್‌ನಿಂದ ಅಪಹರಿಸಲ್ಪಟ್ಟ ಸಮರ್ ತಲಲ್ಕಾ ಮತ್ತು ಅಲೋನ್ ಶಮ್ರಿಜ್ ಎಂದು ಗುರುತಿಸಲಾಗಿದೆ. ಮೂವರು ಕೂಡ ಅಕ್ಟೋಬರ್ 7ರಿಂದ ಹಮಾಸ್‌ನ ವಶದಲ್ಲಿದ್ದರು. ಮೃತ ಯೋತಮ್ ಒಬ್ಬ ಪ್ರತಿಭಾನ್ವಿತ ಸಂಗೀತಗಾರನಾಗಿದ್ದ ಮತ್ತು ಸಮೀರ್ ಒಬ್ಬ ಸೈಕ್ಲಿಸ್ಟ್ ಆಗಿದ್ದ ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಮಾಹಿತಿ ನೀಡಿದ್ದು, ತಪ್ಪಿನಿಂದ ಪ್ರಮಾದವಾಗಿದೆ. ಇದು ನಮಗೆ ನೋವಿನ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರತಿಕ್ರಿಯಿಸಿದ್ದು, ಐಡಿಎಫ್‌ನಿಂದ ದೊಡ್ಡ ಪ್ರಮಾದ ನಡೆದುಹೋಗಿದೆ. ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರುವ ಪ್ರಯತ್ನವನ್ನು ಮುಂದುವರಿಸುತ್ತೇವೆ. ಇಡೀ ಇಸ್ರೇಲ್ ಜನರಿಗೆ ನಾನು ತಲೆಬಾಗುತ್ತೇನೆ ಮತ್ತು ಅಪಹರಣಕ್ಕೊಳಗಾದ ನಮ್ಮ ಮೂವರು ಪುತ್ರರ ಸಾವಿಗೆ ಸಂತಾಪ ಸೂಚಿಸುತ್ತೇನೆ. ನನ್ನ ಹೃದಯವು ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಜೊತೆಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಒತ್ತೆಯಾಳುಗಳು ಮತ್ತು ಕಾಣೆಯಾದ ವ್ಯಕ್ತಿಗಳ ಕುಟುಂಬಗಳನ್ನು ಪ್ರತಿನಿಧಿಸುವ ವೇದಿಕೆಯು ಖಂಡಿಸಿದೆ.

ಅಕ್ಟೋಬರ್ 7 ರಂದು ಹಮಾಸ್, ಇಸ್ರೇಲ್‌ ಪಟ್ಟಣಗಳಲ್ಲಿ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ ನಡೆದಿತ್ತು. 240 ಒತ್ತೆಯಾಳುಗಳನ್ನು ಸೆರೆಹಿಡಿಯಲಾಗಿತ್ತು. ಇಸ್ರೇಲ್ ನಂತರ ಪ್ರತಿದಾಳಿಯನ್ನು ಪ್ರಾರಂಭಿಸಿ, ಈವರೆಗೆ ಗಾಝಾದಲ್ಲಿ 19,000 ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ ಎಂದು ಗಾಝಾದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ನವೆಂಬರ್ ಅಂತ್ಯದಲ್ಲಿ ಕದನ ವಿರಾಮದ ಸಮಯದಲ್ಲಿ 240 ಮಹಿಳೆಯರು ಮತ್ತು ಅಪ್ರಾಪ್ತರ ಬಿಡುಗಡೆಗೆ ಪ್ರತಿಯಾಗಿ ಹಮಾಸ್‌ 100ಕ್ಕೂ ಹೆಚ್ಚು ಇಸ್ರೇಲ್‌ ಮಹಿಳೆಯರು, ಮಕ್ಕಳು ಮತ್ತು ವಿದೇಶಿಯರನ್ನು ಬಿಡುಗಡೆ ಮಾಡಿತ್ತು. ಇಸ್ರೇಲ್ ಒತ್ತೆಯಾಳಾಗಿರಿಸಿದ್ದ ಗಾಝಾದ ನಾಗರಿಕರನ್ನು ಕ್ಷುಲ್ಲಕವಾಗಿ ಇಸ್ರೇಲ್‌ ಸೈನಿಕರ ಮೇಲೆ ಕಲ್ಲು ತೂರಾಟ ಸೇರಿ ಸಣ್ಣ ಅಪರಾಧಗಳಿಗಾಗಿ ಬಂಧಿಸಲಾಗಿತ್ತು. ತಾತ್ಕಾಲಿಕ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಯುದ್ಧ ಆರಂಭಿಸಿದಾಗ ಯುಎನ್‌ ವಿಶ್ವಸಂಸ್ಥೆಯಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿ ನಿರ್ಣಾಯವನನ್ನು ಅಂಗೀಕರಿಸಿತ್ತು. ಆದರೆ ಅಮೆರಿಕ ಇದನ್ನು ವಿಟೊ ಅಧಿಕಾರ ಬಳಸಿ ರದ್ದು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...