Homeಕರ್ನಾಟಕಉಡುಪಿ: ತಾಯಿ-ಮಕ್ಕಳ ಕೊಲೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆರೋಪಿ

ಉಡುಪಿ: ತಾಯಿ-ಮಕ್ಕಳ ಕೊಲೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆರೋಪಿ

- Advertisement -
- Advertisement -

ಉಡುಪಿ ಜಿಲ್ಲೆಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ರಾಜ್ಯದಲ್ಲೇ ಭಾರೀ ಸುದ್ದಿಯಾಗಿದ್ದ ಈ ಪ್ರಕರಣದಲ್ಲಿ ಕೃತ್ಯ ನಡೆದ ಒಂದೇ ತಿಂಗಳಲ್ಲಿ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.

ಸಧ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಪರ ನ್ಯಾಯವಾದಿ ಕೆ.ಎಸ್.ಎನ್.ರಾಜೇಶ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಧೀಶ ದಿನೇಶ್ ಹೆಗ್ಡೆ ಅವರು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದ್ದಾರೆ. ಈ ಕುರಿತು ಸರಕಾರಿ ಅಭಿಯೋಜಕ ಪ್ರಕಾಶ್‌ ಚಂದ್ರ ಶೆಟ್ಟಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಕಾಲಾವಕಾಶವನ್ನು ನೀಡಿದೆ.

ನ.12ರಂದು ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಹಸೀನಾ ಹಾಗೂ ಅವರ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್‌ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯದಲ್ಲಿ ಭಾರೀ ತಲ್ಲಣಗೊಳಿಸಿತ್ತು. ಕೃತ್ಯದ ಬಳಿಕ ಆರೋಪಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ನ.14ರಂದು ಮೊಬೈಲ್ ಟವರ್ ಆಧರಿಸಿ ಬಂಧಿಸಲಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯ ನ್ಯಾಯಾಂಗ ಬಂಧನ ಅವಧಿ ಡಿ.18ರವರೆಗೆ ವಿಸ್ತರಿಸಲಾಗಿದೆ.

ಪ್ರವೀಣ್ ಆರಂಭದಲ್ಲಿ ಅಯ್ನಾಝ್ ಗೆ ಮೊದಲು ದಾಳಿ ಮಾಡಿ, ಬಳಿಕ ಹಸೀನಾ, ಅಫ್ನಾನ್, ಆಸಿಂ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ. ಬಳಿಕ ಬೇರೆ ಬೇರೆ ವಾಹನದಲ್ಲಿ ಪರಾರಿಯಾಗಿದ್ದಾನೆ. ಆರೋಪಿ ಕೈಯ ಗಾಯಕ್ಕೆ ಚಿಕಿತ್ಸೆ ಪಡೆದು ಚಾಕುವನ್ನು ಮನೆಯಲ್ಲಿ ಇಟ್ಟು ಹೆಂಡತಿಯ ತವರು ಮನೆಗೆ ಹೋಗಿದ್ದಾನೆ.

ಆರೋಪಿ ಪ್ರವೀಣ್‌ ಹಾಗೂ ಅಯ್ನಾಝ್ ಏರ್‌ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಪ್ರವೀಣ್‌ ಅಯ್ನಾಝ್ ಮೇಲೆ ದ್ವೇಷವನ್ನು ಇಟ್ಟುಕೊಂಡು ಕೊಲೆಯನ್ನು ಮಾಡಿದ್ದಾನೆ ಎನ್ನುವುದು ತನಿಖೆಯ ವೇಳೆ ತಿಳಿದು ಬಂದಿತ್ತು.

ಘಟನೆ ಬೆನ್ನಲ್ಲೇ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಆರೋಪಿ ಪ್ರವೀಣ್ ಚೌಗಲೆಯನ್ನು ಅಮಾನತುಗೊಳಿಸಿ ಕೃತ್ಯದ ಬಗ್ಗೆ ಆಘಾತವನ್ನು ವ್ಯಕ್ತಪಡಿಸಿತ್ತು.

ಭೀಕರ ಹತ್ಯಾಕಾಂಡದ ಕುರಿತು ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹಾಗೂ ಮುಸ್ಲಿಂ ಜಸ್ಟೀಸ್ ಫೋರಂ ನೇತೃತ್ವದ ನಿಯೋಗ ಈ ಮೊದಲು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಇತ್ತೀಚೆಗೆ ಸಂತ್ರಸ್ತ ಕುಟುಂಬದ ಯಜಮಾನ ನೂರ್‌ ಮಹಮ್ಮದ್ ಅವರು ಕೂಡ ಸಿಎಂ ಸಿದ್ದರಾಮಯ್ಯ ಅವರಿಗೆ ಭೇಟಿ ಮಾಡಿ ಪ್ರಕರಣದಲ್ಲಿ ತ್ವರಿತ ನ್ಯಾಯಕ್ಕೆ ಆಗ್ರಹಿಸಿದ್ದರು.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. If he gets bail there is nothing to be surprised, these things are common nowadays. Money and influence can do any thing. That’s why crime rate is increasing day by day…it seems….
    ,

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...