Homeಅಂಕಣಗಳುಸ್ಮಾರ್ಟ್ ಸಿಟಿ ಕಿಷ್ಣ ಮೋದಿಗೆ ಪತ್ರ ಬರೆದರಂತಲ್ಲಾ

ಸ್ಮಾರ್ಟ್ ಸಿಟಿ ಕಿಷ್ಣ ಮೋದಿಗೆ ಪತ್ರ ಬರೆದರಂತಲ್ಲಾ

- Advertisement -
- Advertisement -

| ಯಾಹೂ |

ನೋಡಿದ ಕೂಡಲೆ ಅಖಿಲ ಭಾರತ ಮಟ್ಟದ ಮುಠ್ಠಾಳನಂತೆ ಕಾಣುವ ಅಮಿತ್ ಶಾ ಎಂಬ ಭಾಷಾ ಬೃಹಸ್ಪತಿ ಹಿಂದಿ ಭಾಷೆಯನ್ನು ಇಂಡಿಯಾದ ಮೇಲೆ ಹೇರುವ ಮಾತನಾಡಿದ್ದಾನಲ್ಲಾ. ಯಾವ ಭಾಷೆಯೂ ಸರಿಯಾಗಿ ಬರದ ಈತನ ಹಿಂದಿ ಹೇರಿಕೆ ಮಾತಿಗೆ ಕರ್ನಾಟಕದ ಕನ್ನಡ ಸಂಘಗಳು ಜೇನುಗೂಡಿಗೆ ಕಲ್ಲು ಬೀರಿದಂತೆ ರ್ವಯ್ಯನೆ ಬೀದಿಗೆ ಬರುತ್ತವೆಂದು ನಿರೀಕ್ಷಿಸಿದ್ದ ಕನ್ನಡಿಗರಿಗೆ ಆಘಾತವಾಗಿದೆಯಂತಲ್ಲಾ. ಹಾಗಾದರೆ ಎಲ್ಲಿ ಹೋದವು? ಬೆಂಗಳೂರಿನ ಆದಾಯ ಹಂಚಿಕೊಳ್ಳುವಲ್ಲಿ ಹೊಡೆದಾಡಿ ಇಬ್ಬಾಗವಾದ ಬಣಗಳು ಅದ್ಯಾವಾಗ ಉಸಿರೆಳೆದವು ಎಂದು ಹುಡುಕಲಾಗಿ ಅವೆಲ್ಲಾ ಉಂಡ ಉಬ್ಬಸದಲ್ಲಿ ನರಳುತ್ತಿವೆಯೇ ಹೊರತು, ಉಸಿರೆಳೆದಿಲ್ಲ ಎಂಬುದು ಸಾಬೀತಾಗಿದೆಯಲ್ಲಾ. ಈ ನಡುವೆ ಬಹುಭಾಷೆ ನಟ ಕಮಲ್‍ಹಾಸನ್ ಶಾ ಎಂಬ ಸುಲ್ತಾನನ ಕರೆಗೆ ಸೆಡ್ಡು ಹೊಡೆದಿರುವುದಲ್ಲದೆ ಮತ್ತೊಮ್ಮೆ ಇಂತಹ ಹೇಳಿಕೆ ಕೊಟ್ಟರೆ ಜಲ್ಲಿಕಲ್ಲು ಬೀರಬೇಕಾಗುತ್ತದೆಂದು ಎಚ್ಚರಿಕೆ ಕೊಟ್ಟಿದ್ದಾರಲ್ಲಾ. ಶಾ ಮಾತಿಗೆ ಹ್ವಟ್ಯಾಳ ನಾಗರಾಜ, ನಾರಾಯಣಗೌಡ, ಪ್ರವೀಣ ಶೆಟ್ಟಿ ತಕ್ಕ ಉತ್ತರ ಕೊಡುತ್ತಾರೆಂದು ಕಾದ ಮುಖ್ಯಮಂತ್ರಿ ಎಡೂರಪ್ಪನವರೆ ಮುಂದಾಗಿ ಕನ್ನಡಪರ ದನಿ ಎತ್ತಿ ಮಯೂರನಂತೆ ಘರ್ಜಿಸಿದ್ದಾರಲ್ಲಾ, ಥೂತ್ತೇರಿ….!

ಯಾರು ಏನೇ ಹೇಳಲಿ ಕನ್ನಡ ಭಾಷೆ ನಶಿಸುತ್ತಿದೆಯಂತಲ್ಲಾ. ಸಿಟಿಗಳಲ್ಲಿನ ನಮ್ಮ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಅಕ್ಷರ ಮಾಯವಾಗಿದೆ. ಕರ್ನಾಟಕದ ರಸ್ತೆ ಬದಿಯ ಮೈಲಿ ಕಲ್ಲುಗಳಲ್ಲಿ ಕನ್ನಡ ಮಾಯವಾಗಿದೆ. ಹಳ್ಳಿಗಾಡಿನ ಹೊಟೇಲು ಕೂಡ ತಿಂಡಿ ಚೀಟಿಯನ್ನು ಇಂಗ್ಲಿಷ್‍ನಲ್ಲೇ ಮುದ್ರಿಸಿವೆ. ಬಸ್ಸುಗಳಲ್ಲೂ ಕೂಡ ಸೂಚನಾ ಫಲಕಗಳು ಇಂಗ್ಲಿಷ್‍ನಲ್ಲಿವೆ. ನಮ್ಮ ಅಕ್ಷರಗಳು ಕಣ್ಣಿಂದ ಮರೆಯಾದರೆ, ಮುಂದೆ ಅವನ್ನು ನಾವು ಗುರುತು ಹಿಡಿಯಲಾಗುವುದಿಲ್ಲ. ಇನ್ನ ಕಾನ್ವೆಂಟ್ ಮಕ್ಕಳು ಮನೆಯಲ್ಲಿ ಇಂಗ್ಲಿಷ್ ಕಲಿಯುತ್ತಿದ್ದರೆ ತಂದೆ ತಾಯಿಗಳಿಗೆ ಎಲ್ಲಿಲ್ಲದ ಪುಲಕ. ನಾವು ಬರೆದ ಪುಸ್ತಕ ಲೇಖನವನ್ನ ನಮ್ಮ ಮನೆ ಮಕ್ಕಳೇ ಓದುತ್ತಿಲ್ಲ. ಅದಕ್ಕೆ ಸತ್ತ ಸಾಹಿತಿಯ ಮನೆಯವರು ಆ ಪುಸ್ತಕಗಳನ್ನ ಯಾರಾದರೂ ತೆಗೆದುಕೊಂಡು ಹೋಗಿ ಎಂದು ಬೇಡುತ್ತಿರುವುದು. ಹೀಗೆ ಕನ್ನಡದ ಜೊತೆ ಸಾಹಿತಿಗಳೂ ಕೊನೆಯುಸಿರೆಳೆಯುತ್ತಿರುವ ಸಮಯ ನೋಡಿಯೇ ಅಮಿತ್ ಶಾ ಹಾಗಂದಿರುವುದು. ಅವನ ಮಾತಿಗೆ ನಾರಾಯಣಗೌಡ ಏನು ಹೇಳುತ್ತಾನೆಂದು ಹುಡುಕಿದರೆ, ಆತ ಡಿಕೆಸಿ ಅರೆಸ್ಟಾಗಿರುವುದನ್ನ ಅರಗಿಸಿಕೊಳ್ಳಲಾರದೆ ಅಳುತ್ತಾ ಕೂತಿದ್ದಾನಂತಲ್ಲಾ, ಥೂತ್ತೇರಿ!!

ಅಳಿಯನ ಆತ್ಮಹತ್ಯೆ ಸುದ್ದಿ ಕೇಳಿದಾಗಲೂ ಸಾವಧಾನವಾಗಿ ಎದ್ದ ಎಸ್ಸೆಂ ಕೃಷ್ಣರು ಕನ್ನಡಿ ಮುಂದೆ ನಿಂತು ವಿಗ್ ಧರಿಸಿಕೊಂಡು ತಮ್ಮ ಸೊಗಸಿಗೆ ಚ್ಯುತಿ ಬಾರದಂತೆ ವೇಶ ಧರಿಸಿ ನಡೆದ ದುರಂತವನ್ನು ತಾಳ್ಮೆಯಿಂದ ನಿಭಾಯಿಸಿ, ಅಳುಬುರುಕರ ಮನಗೆದ್ದ ಕೃಷ್ಣ ಸ್ಮಾರ್ಟ್ ಸಿಟಿಗಳು ಹೇಗಿರಬೇಕೆಂದು ಮೋದಿಗೆ ಎರಡು ಪುಟದ ಪತ್ರ ಬರೆದಿದ್ದಾರಂತಲ್ಲಾ. ದುಃಖದಲ್ಲೂ ಸಿಟಿಯನ್ನು ಸೊಗಸಾಗಿ ನಿರ್ಮಿಸುವ ಕನಸು ಕಾಣುತ್ತಿರುವ ಕೃಷ್ಣರು ಮೋದಿಗೆ ಎರಡು ಪುಟದ ಪತ್ರ ಬರೆಯುವ ಬದಲು ಸಿದ್ಧಾರ್ಥನಿಗೆ ಒಂದು ಪುಟದ ಧೈರ್ಯದ ಸಾಲು ಬರೆಯಬಹುದಿತ್ತೆಂಬುದು ಮಂಡ್ಯದ ಮುಗ್ದರ ಸಲಹೆಯಾಗಿದೆಯಲ್ಲಾ

ಏನೆಂದರೆ, “ಸಿದ್ಧಾರ್ಥ ಆದ್ದದ್ದಾಯ್ತು. ನನ್ನ ಸಂಪತ್ತು ಈ ಮೋದಿಯ ನೋಟು ಬ್ಯಾನು, ಜಿಎಸ್‍ಟಿ ಮತ್ತು ಬೇಟೆ ನಾಯಿಗಳಂತಹ ಇನ್‍ಕಮ್ ಟ್ಯಾಕ್ಸ್ ಸಿಬ್ಬಂದಿಯಿಂದ ಮುಳುಗಿಹೋಯ್ತು. ಹೋಗಲಿ ಬಿಡು, ಅದೇನು ನಾನು ಮದ್ದೂರಿನ ಗದ್ದೆ ಹುತ್ತು ಸಂಪಾದಿಸಿದ್ದಲ್ಲ. ನೀನು ಎಲ್ಲವನ್ನು ಮಾರಿ ಸಾಲ ತೀರಿಸಿ ನಿಮ್ಮಪ್ಪನ ಎಸ್ಟೇಟ್ ಉಳಿಸಿಕೊಂಡು ಬದುಕು. ಈ ದೇಶದಲ್ಲಿ ನಿರ್ಗತಿಕರು ಭಿಕ್ಷುಕರು, ಕುಷ್ಟ ರೋಗಿಗಳೂ ಸಹಿತ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಬೇಕಿದ್ದರೆ ನಿನಗೆ ಕಪ್ಪು ಹಣ ಕೊಟ್ಟವರೇ ಮಾಡಿಕೊಳ್ಳಲಿ. ನೀನು ಧೈರ್ಯವಾಗಿ ಬಾ, ಮಾತನಾಡೋಣ” ಎಂದು ಬರೆದಿದ್ದರೆ ಸಿದ್ಧಾರ್ಥ ಮರಳಿ ಬರುತ್ತಿದ್ದರಂತಲ್ಲಾ, ಥೂತ್ತೇರಿ!!

ಮನುಷ್ಯನಿಗೆ ವಯಸ್ಸಾದಂತೆ ಬುದ್ಧಿ ಮಾಗುತ್ತದೆ. ಮಾತಿನಲ್ಲಿ ತೂಕ ಬರುತ್ತದೆ. ಆದರೆ ಸಿದ್ದರಾಮಯ್ಯನ ಎದುರಾಳಿಯಾದ ಈಶ್ವರಪ್ಪನ ಅವತಾರ ನೋಡಿದರೆ ಕುರುಬರು ಹೋಗಲಿ, ಕರ್ನಾಟಕದ ಮಾನವಂತರ ಜೊತೆಗೆ ಸಾಬರೂ ಕೂಡ ಹೆದರುತ್ತಿದ್ದಾರಂತಲ್ಲಾ. ಈತನ ಮಾತು ನೋಡಿದರೆ ನಿಜಕ್ಕೂ ಈಶ್ವರಪ್ಪನೇ ಪಾಕಿಸ್ತಾನಕ್ಕೆ ಯೋಗ್ಯವಾದ ಪ್ರಜೆ. ಅಲ್ಲಿ ಯಾವ ಎಗ್ಗೂ ಇಲ್ಲದೆ ಮತಾಂಧತೆಯ ಮಾತನಾಡಬಹುದು. ಅನ್ಯ ಧರ್ಮೀಯರನ್ನ ಹೀಯಾಳಿಸಬಹುದು. ತನ್ನ ಮಾತಿನ ಪರಿಣಾಮ ಗ್ರಹಿಸಿ ವೈದ್ಯರಲ್ಲಿಗೆ ಹೋಗುವುದರ ಬದಲು ತಾನು ಕೆಲಸ ಮಾಡುವ ಪಾರ್ಟಿ ಆಫೀಸಿಗೆ ಹೋಗಬಹುದು. ಆದ್ದರಿಂದ ಈಶ್ವರಪ್ಪ ಪಾಕೀಸ್ತಾನಕ್ಕೆ ಹೋಗಿ ನೆಲೆಸಲು ಬಹುಯೋಗ್ಯವಾದ ಪ್ರಜೆ ಎಂದು ಇಸ್ಮಾಯಿಲ್ ಖಾನ್ ಹೇಳುತ್ತಿದ್ದಾರಂತಲ್ಲಾ. ಶಿವಮೊಗ್ಗದ ದುರಂತ ನೋಡಿ, ಅಲ್ಲಿ ಈಗ ಪ್ರಖ್ಯಾತ ಮನೋವೈದ್ಯರಿಲ್ಲ. ಅಶೋಕ್ ಪೈ ಇದ್ದಿದ್ದರೆ ಈಶ್ವರಪ್ಪನ ಮೆದುಳು ಮತ್ತು ನಾಲಿಗೆ ನಡುವೆ ಒಂದು ನಿಷ್‍ತಂತು ಅಂಗವನ್ನು ಅಳವಡಿಸಿ ಮಾತಿಗೆ ಮಿತಿಯಿರುವಂತೆ, ತೂಕ ಬರುವಂತೆ ಮಾಡಬಹುದಿತ್ತು. ಆದರೆ ಎಲ್ಲವೂ ಕೈಮೀರಿ ಹೋಗಿದೆ. ಇವತ್ತು ಮುಸ್ಲಿಮರ ಮೇಲೆ ಕೆರಳಿರುವ ಈಶ್ವರಿ, ಮುಂದೆ ದಲಿತರು, ಅಲೆಮಾರಿಗಳು ಮತ್ತೂ ತಿರುಗಿಬಿದ್ದು ಸಾದ ಲಿಂಗಾಯಿತರ ಮೇಲೆ ಎಗರಬಹುದು. ಒಟ್ಟಿನಲ್ಲಿ ಪರಿಸ್ಥಿತಿ ಗಂಭೀರವಾಗಿದೆಯಂತಲ್ಲಾ, ಥೂತ್ತೇರಿ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...