Homeಅಂಕಣಗಳುಸ್ಮಾರ್ಟ್ ಸಿಟಿ ಕಿಷ್ಣ ಮೋದಿಗೆ ಪತ್ರ ಬರೆದರಂತಲ್ಲಾ

ಸ್ಮಾರ್ಟ್ ಸಿಟಿ ಕಿಷ್ಣ ಮೋದಿಗೆ ಪತ್ರ ಬರೆದರಂತಲ್ಲಾ

- Advertisement -
- Advertisement -

| ಯಾಹೂ |

ನೋಡಿದ ಕೂಡಲೆ ಅಖಿಲ ಭಾರತ ಮಟ್ಟದ ಮುಠ್ಠಾಳನಂತೆ ಕಾಣುವ ಅಮಿತ್ ಶಾ ಎಂಬ ಭಾಷಾ ಬೃಹಸ್ಪತಿ ಹಿಂದಿ ಭಾಷೆಯನ್ನು ಇಂಡಿಯಾದ ಮೇಲೆ ಹೇರುವ ಮಾತನಾಡಿದ್ದಾನಲ್ಲಾ. ಯಾವ ಭಾಷೆಯೂ ಸರಿಯಾಗಿ ಬರದ ಈತನ ಹಿಂದಿ ಹೇರಿಕೆ ಮಾತಿಗೆ ಕರ್ನಾಟಕದ ಕನ್ನಡ ಸಂಘಗಳು ಜೇನುಗೂಡಿಗೆ ಕಲ್ಲು ಬೀರಿದಂತೆ ರ್ವಯ್ಯನೆ ಬೀದಿಗೆ ಬರುತ್ತವೆಂದು ನಿರೀಕ್ಷಿಸಿದ್ದ ಕನ್ನಡಿಗರಿಗೆ ಆಘಾತವಾಗಿದೆಯಂತಲ್ಲಾ. ಹಾಗಾದರೆ ಎಲ್ಲಿ ಹೋದವು? ಬೆಂಗಳೂರಿನ ಆದಾಯ ಹಂಚಿಕೊಳ್ಳುವಲ್ಲಿ ಹೊಡೆದಾಡಿ ಇಬ್ಬಾಗವಾದ ಬಣಗಳು ಅದ್ಯಾವಾಗ ಉಸಿರೆಳೆದವು ಎಂದು ಹುಡುಕಲಾಗಿ ಅವೆಲ್ಲಾ ಉಂಡ ಉಬ್ಬಸದಲ್ಲಿ ನರಳುತ್ತಿವೆಯೇ ಹೊರತು, ಉಸಿರೆಳೆದಿಲ್ಲ ಎಂಬುದು ಸಾಬೀತಾಗಿದೆಯಲ್ಲಾ. ಈ ನಡುವೆ ಬಹುಭಾಷೆ ನಟ ಕಮಲ್‍ಹಾಸನ್ ಶಾ ಎಂಬ ಸುಲ್ತಾನನ ಕರೆಗೆ ಸೆಡ್ಡು ಹೊಡೆದಿರುವುದಲ್ಲದೆ ಮತ್ತೊಮ್ಮೆ ಇಂತಹ ಹೇಳಿಕೆ ಕೊಟ್ಟರೆ ಜಲ್ಲಿಕಲ್ಲು ಬೀರಬೇಕಾಗುತ್ತದೆಂದು ಎಚ್ಚರಿಕೆ ಕೊಟ್ಟಿದ್ದಾರಲ್ಲಾ. ಶಾ ಮಾತಿಗೆ ಹ್ವಟ್ಯಾಳ ನಾಗರಾಜ, ನಾರಾಯಣಗೌಡ, ಪ್ರವೀಣ ಶೆಟ್ಟಿ ತಕ್ಕ ಉತ್ತರ ಕೊಡುತ್ತಾರೆಂದು ಕಾದ ಮುಖ್ಯಮಂತ್ರಿ ಎಡೂರಪ್ಪನವರೆ ಮುಂದಾಗಿ ಕನ್ನಡಪರ ದನಿ ಎತ್ತಿ ಮಯೂರನಂತೆ ಘರ್ಜಿಸಿದ್ದಾರಲ್ಲಾ, ಥೂತ್ತೇರಿ….!

ಯಾರು ಏನೇ ಹೇಳಲಿ ಕನ್ನಡ ಭಾಷೆ ನಶಿಸುತ್ತಿದೆಯಂತಲ್ಲಾ. ಸಿಟಿಗಳಲ್ಲಿನ ನಮ್ಮ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಅಕ್ಷರ ಮಾಯವಾಗಿದೆ. ಕರ್ನಾಟಕದ ರಸ್ತೆ ಬದಿಯ ಮೈಲಿ ಕಲ್ಲುಗಳಲ್ಲಿ ಕನ್ನಡ ಮಾಯವಾಗಿದೆ. ಹಳ್ಳಿಗಾಡಿನ ಹೊಟೇಲು ಕೂಡ ತಿಂಡಿ ಚೀಟಿಯನ್ನು ಇಂಗ್ಲಿಷ್‍ನಲ್ಲೇ ಮುದ್ರಿಸಿವೆ. ಬಸ್ಸುಗಳಲ್ಲೂ ಕೂಡ ಸೂಚನಾ ಫಲಕಗಳು ಇಂಗ್ಲಿಷ್‍ನಲ್ಲಿವೆ. ನಮ್ಮ ಅಕ್ಷರಗಳು ಕಣ್ಣಿಂದ ಮರೆಯಾದರೆ, ಮುಂದೆ ಅವನ್ನು ನಾವು ಗುರುತು ಹಿಡಿಯಲಾಗುವುದಿಲ್ಲ. ಇನ್ನ ಕಾನ್ವೆಂಟ್ ಮಕ್ಕಳು ಮನೆಯಲ್ಲಿ ಇಂಗ್ಲಿಷ್ ಕಲಿಯುತ್ತಿದ್ದರೆ ತಂದೆ ತಾಯಿಗಳಿಗೆ ಎಲ್ಲಿಲ್ಲದ ಪುಲಕ. ನಾವು ಬರೆದ ಪುಸ್ತಕ ಲೇಖನವನ್ನ ನಮ್ಮ ಮನೆ ಮಕ್ಕಳೇ ಓದುತ್ತಿಲ್ಲ. ಅದಕ್ಕೆ ಸತ್ತ ಸಾಹಿತಿಯ ಮನೆಯವರು ಆ ಪುಸ್ತಕಗಳನ್ನ ಯಾರಾದರೂ ತೆಗೆದುಕೊಂಡು ಹೋಗಿ ಎಂದು ಬೇಡುತ್ತಿರುವುದು. ಹೀಗೆ ಕನ್ನಡದ ಜೊತೆ ಸಾಹಿತಿಗಳೂ ಕೊನೆಯುಸಿರೆಳೆಯುತ್ತಿರುವ ಸಮಯ ನೋಡಿಯೇ ಅಮಿತ್ ಶಾ ಹಾಗಂದಿರುವುದು. ಅವನ ಮಾತಿಗೆ ನಾರಾಯಣಗೌಡ ಏನು ಹೇಳುತ್ತಾನೆಂದು ಹುಡುಕಿದರೆ, ಆತ ಡಿಕೆಸಿ ಅರೆಸ್ಟಾಗಿರುವುದನ್ನ ಅರಗಿಸಿಕೊಳ್ಳಲಾರದೆ ಅಳುತ್ತಾ ಕೂತಿದ್ದಾನಂತಲ್ಲಾ, ಥೂತ್ತೇರಿ!!

ಅಳಿಯನ ಆತ್ಮಹತ್ಯೆ ಸುದ್ದಿ ಕೇಳಿದಾಗಲೂ ಸಾವಧಾನವಾಗಿ ಎದ್ದ ಎಸ್ಸೆಂ ಕೃಷ್ಣರು ಕನ್ನಡಿ ಮುಂದೆ ನಿಂತು ವಿಗ್ ಧರಿಸಿಕೊಂಡು ತಮ್ಮ ಸೊಗಸಿಗೆ ಚ್ಯುತಿ ಬಾರದಂತೆ ವೇಶ ಧರಿಸಿ ನಡೆದ ದುರಂತವನ್ನು ತಾಳ್ಮೆಯಿಂದ ನಿಭಾಯಿಸಿ, ಅಳುಬುರುಕರ ಮನಗೆದ್ದ ಕೃಷ್ಣ ಸ್ಮಾರ್ಟ್ ಸಿಟಿಗಳು ಹೇಗಿರಬೇಕೆಂದು ಮೋದಿಗೆ ಎರಡು ಪುಟದ ಪತ್ರ ಬರೆದಿದ್ದಾರಂತಲ್ಲಾ. ದುಃಖದಲ್ಲೂ ಸಿಟಿಯನ್ನು ಸೊಗಸಾಗಿ ನಿರ್ಮಿಸುವ ಕನಸು ಕಾಣುತ್ತಿರುವ ಕೃಷ್ಣರು ಮೋದಿಗೆ ಎರಡು ಪುಟದ ಪತ್ರ ಬರೆಯುವ ಬದಲು ಸಿದ್ಧಾರ್ಥನಿಗೆ ಒಂದು ಪುಟದ ಧೈರ್ಯದ ಸಾಲು ಬರೆಯಬಹುದಿತ್ತೆಂಬುದು ಮಂಡ್ಯದ ಮುಗ್ದರ ಸಲಹೆಯಾಗಿದೆಯಲ್ಲಾ

ಏನೆಂದರೆ, “ಸಿದ್ಧಾರ್ಥ ಆದ್ದದ್ದಾಯ್ತು. ನನ್ನ ಸಂಪತ್ತು ಈ ಮೋದಿಯ ನೋಟು ಬ್ಯಾನು, ಜಿಎಸ್‍ಟಿ ಮತ್ತು ಬೇಟೆ ನಾಯಿಗಳಂತಹ ಇನ್‍ಕಮ್ ಟ್ಯಾಕ್ಸ್ ಸಿಬ್ಬಂದಿಯಿಂದ ಮುಳುಗಿಹೋಯ್ತು. ಹೋಗಲಿ ಬಿಡು, ಅದೇನು ನಾನು ಮದ್ದೂರಿನ ಗದ್ದೆ ಹುತ್ತು ಸಂಪಾದಿಸಿದ್ದಲ್ಲ. ನೀನು ಎಲ್ಲವನ್ನು ಮಾರಿ ಸಾಲ ತೀರಿಸಿ ನಿಮ್ಮಪ್ಪನ ಎಸ್ಟೇಟ್ ಉಳಿಸಿಕೊಂಡು ಬದುಕು. ಈ ದೇಶದಲ್ಲಿ ನಿರ್ಗತಿಕರು ಭಿಕ್ಷುಕರು, ಕುಷ್ಟ ರೋಗಿಗಳೂ ಸಹಿತ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಬೇಕಿದ್ದರೆ ನಿನಗೆ ಕಪ್ಪು ಹಣ ಕೊಟ್ಟವರೇ ಮಾಡಿಕೊಳ್ಳಲಿ. ನೀನು ಧೈರ್ಯವಾಗಿ ಬಾ, ಮಾತನಾಡೋಣ” ಎಂದು ಬರೆದಿದ್ದರೆ ಸಿದ್ಧಾರ್ಥ ಮರಳಿ ಬರುತ್ತಿದ್ದರಂತಲ್ಲಾ, ಥೂತ್ತೇರಿ!!

ಮನುಷ್ಯನಿಗೆ ವಯಸ್ಸಾದಂತೆ ಬುದ್ಧಿ ಮಾಗುತ್ತದೆ. ಮಾತಿನಲ್ಲಿ ತೂಕ ಬರುತ್ತದೆ. ಆದರೆ ಸಿದ್ದರಾಮಯ್ಯನ ಎದುರಾಳಿಯಾದ ಈಶ್ವರಪ್ಪನ ಅವತಾರ ನೋಡಿದರೆ ಕುರುಬರು ಹೋಗಲಿ, ಕರ್ನಾಟಕದ ಮಾನವಂತರ ಜೊತೆಗೆ ಸಾಬರೂ ಕೂಡ ಹೆದರುತ್ತಿದ್ದಾರಂತಲ್ಲಾ. ಈತನ ಮಾತು ನೋಡಿದರೆ ನಿಜಕ್ಕೂ ಈಶ್ವರಪ್ಪನೇ ಪಾಕಿಸ್ತಾನಕ್ಕೆ ಯೋಗ್ಯವಾದ ಪ್ರಜೆ. ಅಲ್ಲಿ ಯಾವ ಎಗ್ಗೂ ಇಲ್ಲದೆ ಮತಾಂಧತೆಯ ಮಾತನಾಡಬಹುದು. ಅನ್ಯ ಧರ್ಮೀಯರನ್ನ ಹೀಯಾಳಿಸಬಹುದು. ತನ್ನ ಮಾತಿನ ಪರಿಣಾಮ ಗ್ರಹಿಸಿ ವೈದ್ಯರಲ್ಲಿಗೆ ಹೋಗುವುದರ ಬದಲು ತಾನು ಕೆಲಸ ಮಾಡುವ ಪಾರ್ಟಿ ಆಫೀಸಿಗೆ ಹೋಗಬಹುದು. ಆದ್ದರಿಂದ ಈಶ್ವರಪ್ಪ ಪಾಕೀಸ್ತಾನಕ್ಕೆ ಹೋಗಿ ನೆಲೆಸಲು ಬಹುಯೋಗ್ಯವಾದ ಪ್ರಜೆ ಎಂದು ಇಸ್ಮಾಯಿಲ್ ಖಾನ್ ಹೇಳುತ್ತಿದ್ದಾರಂತಲ್ಲಾ. ಶಿವಮೊಗ್ಗದ ದುರಂತ ನೋಡಿ, ಅಲ್ಲಿ ಈಗ ಪ್ರಖ್ಯಾತ ಮನೋವೈದ್ಯರಿಲ್ಲ. ಅಶೋಕ್ ಪೈ ಇದ್ದಿದ್ದರೆ ಈಶ್ವರಪ್ಪನ ಮೆದುಳು ಮತ್ತು ನಾಲಿಗೆ ನಡುವೆ ಒಂದು ನಿಷ್‍ತಂತು ಅಂಗವನ್ನು ಅಳವಡಿಸಿ ಮಾತಿಗೆ ಮಿತಿಯಿರುವಂತೆ, ತೂಕ ಬರುವಂತೆ ಮಾಡಬಹುದಿತ್ತು. ಆದರೆ ಎಲ್ಲವೂ ಕೈಮೀರಿ ಹೋಗಿದೆ. ಇವತ್ತು ಮುಸ್ಲಿಮರ ಮೇಲೆ ಕೆರಳಿರುವ ಈಶ್ವರಿ, ಮುಂದೆ ದಲಿತರು, ಅಲೆಮಾರಿಗಳು ಮತ್ತೂ ತಿರುಗಿಬಿದ್ದು ಸಾದ ಲಿಂಗಾಯಿತರ ಮೇಲೆ ಎಗರಬಹುದು. ಒಟ್ಟಿನಲ್ಲಿ ಪರಿಸ್ಥಿತಿ ಗಂಭೀರವಾಗಿದೆಯಂತಲ್ಲಾ, ಥೂತ್ತೇರಿ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...