HomeUncategorizedNDTV ಬಳಿಕ ಮತ್ತೊಂದು ಸುದ್ದಿ ಸಂಸ್ಥೆ ಅದಾನಿ ತೆಕ್ಕೆಗೆ!

NDTV ಬಳಿಕ ಮತ್ತೊಂದು ಸುದ್ದಿ ಸಂಸ್ಥೆ ಅದಾನಿ ತೆಕ್ಕೆಗೆ!

- Advertisement -
- Advertisement -

ಅದಾನಿ ಸಮೂಹದ ಅಂಗಸಂಸ್ಥೆಯಾದ AMG ಮೀಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್ (AMNL) ಇಂಡೋ-ಏಷ್ಯನ್ ನ್ಯೂಸ್ ಸರ್ವಿಸ್  IANS ಸುದ್ದಿ ಸಂಸ್ಥೆಯಲ್ಲಿ 50.5% ಷೇರನ್ನು ಪಡೆದುಕೊಂಡಿದ್ದು,  IANS ಅದಾನಿ ತೆಕ್ಕೆಗೆ ಸೇರಿದೆ.

ಹಿಂದಿ ಮತ್ತು ಇಂಗ್ಲೀಷ್‌ ಸುದ್ದಿ ಸಂಸ್ಥೆ IANS ಈಗ NDTVಯಂತೆಯೇ AMNLನ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ. ಅದಾನಿ ಸಮೂಹದ AMN,L IANSನೊಂದಿಗೆ ಷೇರು ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಕಂಪನಿಯಲ್ಲಿ ಮತದಾನದ ಹಕ್ಕುಗಳನ್ನು ಕೂಡ ಪಡೆದುಕೊಂಡಿದೆ. ಎಲ್ಲಾ ಕಾರ್ಯಾಚರಣೆ ಮತ್ತು IANS ನ ನಿರ್ವಹಣಾ ನಿಯಂತ್ರಣದ ಅಧಿಕಾರವು AMNLಗೆ ಇರುತ್ತದೆ ಮತ್ತು ಅದಾನಿ ಸಮೂಹ ಸಂಸ್ಥೆಗೆ IANS  ನಿರ್ದೇಶಕರನ್ನು ನೇಮಿಸುವ ಅಧಿಕಾರ ಕೂಡ ಹೊಂದಿರುತ್ತದೆ.

IANS ಜೊತೆ ಷೇರು ಒಪ್ಪಂದಕ್ಕೆ AMNL ಸಹಿ ಹಾಕಿದೆ ಎಂದು IANSನ ಷೇರುದಾರರಲ್ಲಿ ಓರ್ವರಾದ ಸಂದೀಪ್ ಬಾಮ್‌ಜೈ ಅವರು ತಿಳಿಸಿದ್ದು, IANS ನ ನಿರ್ವಹಣಾ ನಿಯಂತ್ರಣದ ಅಧಿಕಾರವು AMNLಗೆ ಇದೆ ಎಂದು ಹೇಳಿದ್ದಾರೆ.

ಎನ್‌ಡಿಟಿವಿಯನ್ನು ಗೌತಮ್ ಅದಾನಿ ಸಮೂಹವು ಸ್ವಾಧೀನಪಡಿಸಿಕೊಂಡ ಸುಮಾರು ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನೇಜ್‌ಮೆಂಟ್ ನೀತಿಗಳು, ಹೊಸ ನಿರೂಪಕರು, ಹಳೆಯ ನಿರೂಪಕರ ರಾಜೀನಾಮೆ ಮತ್ತು ವಿಷಯದಲ್ಲಿನ ವ್ಯತ್ಯಾಸದ ವಿಚಾರಕ್ಕೆ ಸಂಬಂಧಿಸಿ ಎನ್‌ಡಿಟಿವಿ ಅದಾನಿ ತೆಕ್ಕೆಗೆ ಸೇರಿದ ಬಳಿಕ ವೀಕ್ಷಕರನ್ನು ಕಳೆದುಕೊಂಡಿದೆ.

ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಪ್ರೈ. ಲಿ. ಎನ್‌ಡಿಟಿವಿಯಲ್ಲಿ ಶೇ. 29.18ರಷ್ಟು ಪಾಲನ್ನು ಹೊಂದಿದೆ. ಈ ಸಂಸ್ಥೆಯನ್ನು ವಿಶ್ವಪ್ರಧಾನ್‌ ಕಮರ್ಶಿಯಲ್‌ ಪ್ರೈವೇಟ್‌ ಲಿ.ನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಅದಾನಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು.

NDTV ಭಾರತದಲ್ಲಿನ ವೀಕ್ಷಣೆಗಳು ಡಿಸೆಂಬರ್‌ನಲ್ಲಿ 45 ಮಿಲಿಯನ್‌ಗೆ ಇಳಿದಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ. ಅಧಾನಿ ಸಮೂಹ ಅದನ್ನು ಸ್ವೀಕರಿಸುವ ಮೊದಲು  98 ಮಿಲಿಯನ್ ಇತ್ತು. ಇದು ಎನ್‌ಡಿಟಿವಿ ವೀಕ್ಷಕರಲ್ಲಿ 54 ಪ್ರತಿಶತದಷ್ಟು ಕಡಿತವಾಗಿರವುದನ್ನು ಸೂಚಿಸುತ್ತದೆ.

ಅದಾನಿ ಗುಂಪು ಮಾರ್ಚ್ 2022ರಲ್ಲಿ ಹಣಕಾಸು ಮಾಧ್ಯಮ ಸಂಸ್ಥೆ BQ ಕ್ವಿಂಟಿಲಿಯನ್ ಬಿಸಿನೆಸ್ ಮೀಡಿಯಾವನ್ನು ಕೂಡ ಖರೀದಿಸಿತ್ತು. ಅದಾನಿ ಸಮೂಹವು ಕ್ಯುಬಿಎಂಎಲ್‌ನಲ್ಲಿ ಶೇ 49ರಷ್ಟು ಷೇರುಗಳನ್ನು  ಮೊದಲು ಖರೀದಿಸಿತ್ತು. ಬಿಕ್ಯು ಪ್ರೈಮ್‌ಗೆ ಈ ಮೊದಲು ಬ್ಲೂಮ್‌ಬರ್ಗ್‌ ಕ್ವಿಂಟ್‌ ಎನ್ನುವ ಹೆಸರಿತ್ತು. ಅಮೆರಿಕದ ಬ್ಲೂಮ್‌ಬರ್ಗ್‌ ಮೀಡಿಯಾ ಮತ್ತು ರಾಘವ್ ಬಹ್ಲ್‌ ಒಡೆತನದ ಕ್ವಿಂಟಿಲಿಯನ್ ಮೀಡಿಯಾದ ಜಂಟಿ ಸಂಸ್ಥೆ ಇದಾಗಿತ್ತು.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...