Homeಮುಖಪುಟಲೋಕಸಭೆ ಭದ್ರತಾ ಲೋಪ ಪ್ರಕರಣ: ‘ಸಂದೇಶ’ ರವಾನಿಸುವುದೆ ಏಕೈಕ ಉದ್ದೇಶವಾಗಿತ್ತಾ?

ಲೋಕಸಭೆ ಭದ್ರತಾ ಲೋಪ ಪ್ರಕರಣ: ‘ಸಂದೇಶ’ ರವಾನಿಸುವುದೆ ಏಕೈಕ ಉದ್ದೇಶವಾಗಿತ್ತಾ?

- Advertisement -
- Advertisement -

‘ಭದ್ರತೆ ಉಲ್ಲಂಘಿಸಿ ಸಂಸತ್ ಪ್ರವೇಶಿಸುವ ಯೋಜನೆಯಲ್ಲಿ ಯಾವುದೇ ರೀತಿಯ ಭಯೋತ್ಪಾದನೆ ಉದ್ದೇಶವಿರಲಿಲ್ಲ, ಸರ್ಕಾರಕ್ಕೆ ಹಾಗೂ ಮಾಧ್ಯಮಗಳಿಗೆ ಸಂದೇಶ ರವಾನಿಸುವುದು ಮಾತ್ರ ಮುಖ್ಯವಾಗಿತ್ತು’ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸಿಎನ್ಎನ್-ನ್ಯೂಸ್ ವರದಿ ಮಾಡಿದೆ.

ಬಿಗಿ ಭದ್ರತೆ ಉಲ್ಲಂಘಿಸಿ ಸಂಸತ್ ಭವನ ಪ್ರವೇಶಿಸಿ, ಹಳದಿ ಬಣ್ಣದ ‘ಕಲರ್ ಬಾಂಬ್’ ಸಿಡಿಸಿದ ಕೃತ್ಯವು ಕೇವಲ ಸಂದೇಶ ರವಾನಿಸುವುದಾಗಿತ್ತು ಎಂದು ಪ್ರಕರಣದ ಆರನೇ ಆರೋಪಿ ಹಾಗೂ ಮಾಸ್ಟರ್ ಮೈಂಡ್ ಲಲಿತ್ ಮೋಹನ್ ಝಾ ಅವರ ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ವರದಿ ಮಾಡಿದೆ.

‘ಭದ್ರತೆ ಉಲ್ಲಂಘಿಸುವುದಕ್ಕೂ ಮೊದಲು ಝಾ ಅವರು ಸಂಸತ್ತು ಮತ್ತು ಅದರ ಸುತ್ತಮುತ್ತಲಿನ ಭದ್ರತಾ ವ್ಯವಸ್ಥೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಾರೆ. ಮಾಧ್ಯಮಗಳ ಗಮನ ಸೆಳೆಯಬೇಕಾದರೆ ‘ಮೂರ್ಖತನದ ಮಾರ್ಗ’ದ ಅಗತ್ಯವಿದೆ ಎಂಬುದು ಗುಂಪಿಗೆ ತಿಳಿದಿತ್ತು. ಇದೇ ಕಾರಣಕ್ಕೆ ಸಂಸತ್ತಿನಲ್ಲಿ ಗದ್ದಲ ಉಂಟು ಮಾಡಿ, ದೇಶಕ್ಕೆ ಹಾಗೂ ವ್ಯವಸ್ಥೆಗೆ ಸಂದೇಶ ರವಾನಿಸುವುದು ಅವರ ಏಕೈಕ ತಂತ್ರವಾಗಿತ್ತು ಎನ್ನಲಾಗಿದೆ.

ಭದ್ರತೆ ಉಲ್ಲಂಘಿಸಿ ಲೋಕಸಭೆ ಪ್ರವೇಶಿಸಲು ನಿರ್ಧರಿಸಿದ ನಂತರ ಝಾ ಅವರು ನಾಲ್ವರನ್ನು ಒಳಗೊಂಡ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿದ್ದರು. ಲೊಕಸಭೆಯ ಭಾರಿ ಭದ್ರತಾ ವ್ಯವಸ್ಥೆಗಳಿಂದಾಗಿ ಸದನ ಪ್ರವೇಶಿಸುವ ಯೋಜನೆ ವಿಫಲವಾದರೂ, ಪ್ರಬಲವಾದ ಸಂದೇಶ ಕಳುಹಿಸಲು ಆವರಣದ ಹೊರಗೆ ಮತ್ತಿಬ್ಬರು ಹಣದಿ ಬಣ್ಣದ ಸ್ಮೋಕ್ ಬಾಂಬ್ ಹಿಡಿದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದರು. ಆ ಮೂಲಕ ಆಡಳಿತದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಸಂದೇಶವನ್ನು ಶಾಸಕಾಂಗ ಮತ್ತು ಮಾಧ್ಯಮಗಳಿಗೆ ಅವರು ತಮ್ಮ ಪ್ರತಿಭಟನೆ ಮೂಲಕ ಹೇಳಿದ್ದಾರೆ ಎನ್ನಲಾಗಿದೆ.

ಲೋಕಸಭೆ ಹೊರಗೆ ನಡೆದ ಗದ್ದಲವನ್ನು ಇನ್ಸ್ಟ್ರಾಗ್ರಾಮ್ ಮೂಲಕ ಲೈವ್-ಸ್ಟ್ರೀಮ್ ಮಾಡಿದ ನಂತರ, ನನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂಬುದನ್ನು ಅರಿತ ಝಾ, ಬಸ್ ಮೂಲಕ ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿ ತಮ್ಮ ಮೊಬೈಲ್‌ನಲ್ಲಿದ್ದ ಎಲ್ಲ ತಾಂತ್ರಿಕ ಪುರಾವೆಗಳನ್ನು ನಾಶಪಡಿಸಿದ್ದರು.

ಆರೋಪಿಗಳಿಗೆ ಯಾವುದೆ ವಿದೇಶಿ ಸಂಪರ್ಕವಿಲ್ಲ, ಅವರು ಹಣ ಪಡೆದುಕೊಂಡಿದ್ದಾರೆ ಎಂಬುದಕ್ಕೂ ಯಾವುದೆ ವಿವರಗಳು ಇಲ್ಲಿಯವರೆಗೆ ಸಿಕ್ಕಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸಂಸತ್ ಆವರಣದಲ್ಲಿ ಗದ್ದಲವನ್ನು ಸೃಷ್ಟಿಸಲು ಅವರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾರಾದರೂ ಪ್ರಚೋದನೆ ನೀಡಿದ್ದಾರಾ ಅಥವಾ ಯಾವುದಾದರೂ ರಾಜಕೀಯ ಪಕ್ಷಗಳೊಂದಿಗೆ ಆರೋಪಿಗಳ ಒಡನಾಟ ಇತ್ತ ಎಂಬುದರ ಬಗ್ಗೆ ತನಿಖಾ ತಂಡಗಳು ಹುಡುಕಾಟ ನಡೆಸುತ್ತಿವೆ.

ಭದ್ರತಾ ಉಲ್ಲಂಘನೆ ತನಿಖೆ ವಿಸ್ತರಣೆ:

ಗುಪ್ತಚರ ಇಲಾಖೆ ಉನ್ನತ ಮೂಲಗಳ ಪ್ರಕಾರ, ಆರೋಪಿಗಳ ಸಿದ್ಧಾಂತ ಮಾತ್ರ ಅವರನ್ನು ಈ ಮಟ್ಟಿಗೆ ಪ್ರೇರೇಪಿಸಲು ಸಾಧ್ಯವಿಲ್ಲ. ಆದ್ದರಿಂದ, ಲೋಕಸಭೆಯ ಭದ್ರತಾ ಉಲ್ಲಂಘನೆಯ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲು ತನಿಖಾ ತಂಡಗಳು ಚಿಂತನೆ ನಡೆಸಿವೆ ಎನ್ನಲಾಗಿದೆ.

ಆರು ಜನರ ಬಂಧನ:

ಪ್ರಕರಣದಲ್ಲಿ ಒಟ್ಟು ಆರು ಜನ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನದಲ್ಲಿ ಪತ್ತೆಯಾಗಿರುವ ಲಲಿತ್ ಝಾ ಈ ಗುಂಪಿನ ನಾಯಕ ಎನ್ನಲಾಗುತ್ತಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ ಲಲಿತ್ ಕೋಲ್ಕತ್ತಾದ ನಿವಾಸಿ. ಅವರೆಲ್ಲರೂ ‘ಭಗತ್ ಸಿಂಗ್ ಫ್ಯಾನ್ ಪೇಜ್’ ಅನ್ನು ನಿರ್ವಹಿಸುತ್ತಿದ್ದರು. ಹುತಾತ್ಮ ಭಗತ್ ಸಿಂಗನಂತೆ ಏನನ್ನಾದರೂ ಕ್ರಾಂತಿ ಮಾಡಲು ಬಯಸಿದ್ದರು ಎನ್ನಲಾಗಿದ್ದು, ಲಲಿತ್ ಝಾ, ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಆಜಾದ್, ಅಮೋಲ್ ಶಿಂಧೆ ಅವರು ಬುಧವಾರ ಸಂಸತ್ತಿನ ಆಸುಪಾಸಿನಲ್ಲಿದ್ದ ಸೆರೆಸಿಕ್ಕ ಪ್ರಮುಖ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ; ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...