Homeಮುಖಪುಟಸಂಸತ್ತಿನ ಭದ್ರತಾ ಲೋಪಕ್ಕೆ ನಿರುದ್ಯೋಗವೇ ಕಾರಣ: ರಾಹುಲ್‌ ಗಾಂಧಿ

ಸಂಸತ್ತಿನ ಭದ್ರತಾ ಲೋಪಕ್ಕೆ ನಿರುದ್ಯೋಗವೇ ಕಾರಣ: ರಾಹುಲ್‌ ಗಾಂಧಿ

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೀತಿಯಿಂದಾಗಿ ಉದ್ಭವಿಸಿದ ನಿರುದ್ಯೋಗವೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದು, ಮೋದಿ ಮತ್ತು ಬಿಜೆಪಿ ಸರಕಾರದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಭಾರತೀಯರು  ಪ್ರಸ್ತುತ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ನಿರುದ್ಯೋಗ. ಪ್ರಧಾನಿ ನರೇಂದ್ರ ಮೋದಿಯವರ ನೀತಿಯಿಂದಾಗಿ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿರುದ್ಯೋಗವೇ ಭದ್ರತಾ ಲೋಪ ಸಂಭವಿಸಲು ಕಾರಣ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭದ್ರತಾ ಉಲ್ಲಂಘನೆಯು ನಿಜವಾಗಿಯೂ ಸಂಭವಿಸಿದೆ. ಆದರೆ ಇದು ಏಕೆ ಸಂಭವಿಸಿತು? ಮುಖ್ಯ ವಿಷಯವೆಂದರೆ ನಿರುದ್ಯೋಗ. ಮೋದಿ ಜಿ ಅವರ ನೀತಿಗಳಿಂದಾಗಿ ಭಾರತದ ಜನರಿಗೆ ಉದ್ಯೋಗ ಸಿಗುತ್ತಿಲ್ಲ. ಪ್ರಧಾನಿಯವರ ನೀತಿಗಳಿಂದಾಗಿ ನಿರುದ್ಯೋಗ ಮತ್ತು ಹಣದುಬ್ಬರವು ಸಂಸತ್ತಿನ ಭದ್ರತಾ ಉಲ್ಲಂಘನೆಗೆ ಕಾರಣ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಹರಡಿದ್ದಾರೆ. 2001ರ ಸಂಸತ್ ದಾಳಿಯ 22ನೇ ವಾರ್ಷಿಕದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಭದ್ರತೆಯನ್ನು ಉಲ್ಲಂಘಿಸಿದ ಇಬ್ಬರು ವ್ಯಕ್ತಿಗಳಿಗೆ ಸದನದೊಳಗೆ ಪ್ರವೇಶಿಸಲು ಸಂದರ್ಶಕರ ಪಾಸ್‌ಗಳನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೀಡಿದ್ದರು ಎನ್ನುವುದು ಬಯಲಾಗಿದೆ.

ಘಟನೆಗೆ ಸಂಬಂಧಿಸಿ ಲೋಕಸಭೆಯೊಳಗೆ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಲಲಿತ್ ಝಾನನ್ನು ಬಂಧಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಇಂಟೆಲಿಜೆನ್ಸ್ ತಂಡವು  ಮೈಸೂರಿನ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಯನ್ನು ದಾಖಲಿಸಲು ಮುಂದಾಗಿದೆ. ಶುಕ್ರವಾರ ತಡರಾತ್ರಿ ತನಿಖಾಧಿಕಾರಿಗಳು ಆರೋಪಿಗಳನ್ನು ವಿವಿಧ ಸ್ಥಳಗಳಿಗೆ ಕರೆದೊಯ್ದು ಉಲ್ಲಂಘನೆಗೆ ಸಂಚು ರೂಪಿಸಿರುವ ಬಗ್ಗೆ ತನಿಖೆಯನ್ನು ನಡೆಸಿದ್ದಾರೆ.

ಇದಲ್ಲದೆ ಲಲಿತ್‌ ಝಾಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಮಹೇಶ್ ಕುಮ್ವತ್ ಮತ್ತು ಕೈಲಾಶ್ ಅವರಿಗೆ ತನಿಖಾಧಿಕಾರಿಗಳು ಕ್ಲೀನ್ ಚಿಟ್ ನೀಡಿಲ್ಲ. ಅವರ ಸಹಭಾಗಿತ್ವದ ಬಗ್ಗೆ ಕೂಡ ತನಿಖೆ ನಡೆಸುತ್ತಿದ್ದಾರೆ. ಬಂಧಿತ ಐವರು ಆರೋಪಿಗಳನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಇದನ್ನು ಓದಿ: ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...